ರಾಜಮಾರ್ತಾಂಡನಿಗೆ ಮುಹೂರ್ತ
Team Udayavani, Dec 6, 2017, 4:42 PM IST
ಚಿರಂಜೀವಿ ಸರ್ಜಾ ಸಿನಿಮಾಗಳು ಸದ್ದಿಲ್ಲದೇ ಸೆಟ್ಟೇರುತ್ತಲೇ ಇವೆ. ಒಂದರ ಹಿಂದೊಂದರಂತೆ ಸಿನಿಮಾ ಮಾಡುತ್ತಾ ಬರುತ್ತಿರುವ ಚಿರಂಜೀವಿ ಸರ್ಜಾ ಅವರ ಹೊಸ ಚಿತ್ರವೊಂದು ಬುಧವಾರ ಆರಂಭವಾಗಿದೆ. ಅದು “ರಾಜಮಾರ್ತಾಂಡ’. ಈ ಚಿತ್ರವನ್ನು ರಾಮ್ನಾರಾಯಣ್ ನಿರ್ದೇಶಿಸುತ್ತಿದ್ದಾರೆ.
ರಾಮ್ ನಾರಾಯಣ್ ನಿರ್ದೇಶನದ “ಕ್ರ್ಯಾಕ್’ ಚಿತ್ರ ಕೆಲ ತಿಂಗಳ ಹಿಂದೆಯಷ್ಟೇ ಬಿಡುಗಡೆಯಾಗಿತ್ತು. ಈಗ ಚಿರಂಜೀವಿ ಜೊತೆ “ರಾಜಮಾರ್ತಾಂಡ’ ಮಾಡುತ್ತಿದ್ದಾರೆ. ಈ ಚಿತ್ರವನ್ನು ಶಿವಕುಮಾರ್ ಎನ್ ನಿರ್ಮಿಸುತ್ತಿದ್ದಾರೆ. ಈ ಹಿಂದೆ ಚಿರು ಜೊತೆ “ಅಜಿತ್’ ಸಿನಿಮಾ ಮಾಡಿದ ಅವರು ಈಗ “ರಾಜಮಾರ್ತಾಂಡ’ ಮಾಡುತ್ತಿದ್ದಾರೆ.
ಇದೊಂದು ಆ್ಯಕ್ಷನ್ ಜೊತೆಗೆ ಸೆಂಟಿಮೆಂಟ್ ಅಂಶಗಳೊಂದಿಗೆ ಸಾಗುವ ಸಿನಿಮಾವಾಗಿದ್ದು, ತನ್ನ ಸಾಮರ್ಥ್ಯದಿಂದ ಏನು ಬೇಕಾದರೂ ಪಡೆದುಕೊಳ್ಳುವ ವ್ಯಕ್ತಿಯಾಗಿ ಚಿರು ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರಕ್ಕೆ ಅರ್ಜುನ್ ಜನ್ಯಾ ಸಂಗೀತ, ಜಬೇಜ್ ಕೆ ಗಣೇಶನ್ ಛಾಯಾಗ್ರಹಣವಿದೆ. ನಾಯಕಿ ಸೇರಿದಂತೆ ಇತರ ಕಲಾವಿದರ ಆಯ್ಕೆ ನಡೆಯಬೇಕಿದೆ. ಈ ತಿಂಗಳಾಂತ್ಯದಿಂದ ಚಿತ್ರೀಕರಣ ಆರಂಭವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್ ಕನಸು: ಇಂದು ತೆರೆಗೆ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್ ಅಂತ್ಯಕ್ರಿಯೆ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!