Rajamartanda ಚಿರು ಕೊನೆಯ ಸಿನಿಮಾ ಅಲ್ಲ!


Team Udayavani, Oct 3, 2023, 11:38 AM IST

rajamartanda is not chiru’s last movie says Meghana raj

“ರಾಜಮಾರ್ತಾಂಡ’ ಸಿನಿಮಾವನ್ನು ಚಿರು ಕೊನೆಯ ಸಿನಿಮಾ ಅಂತ ನಾವ್ಯಾರು ಭಾವಿಸಿಲ್ಲ. ನಾನು ಮತ್ತು ನಮ್ಮ ಫ್ಯಾಮಿಲಿಯಲ್ಲಿ “ರಾಜಮಾರ್ತಾಂಡ’ ಸಿನಿಮಾವನ್ನ ಚಿರು ಮೊದಲನೇ ಸಿನಿಮಾ ಅಂತಾನೇ ಭಾವಿಸಿದ್ದೇವೆ. ಇದನ್ನು ಚಿರು ಮೊದಲ ಸಿನಿಮಾ ಅಂತಾನೇ ನೋಡೋಣ. ಯಾಕಂದ್ರೆ, ಇದು ಹೊಸ ಅಧ್ಯಾಯ ಆಗಿರಲಿ…’ ಇದು ಈ ವಾರ ಬಿಡುಗಡೆಯಾಗುತ್ತಿರುವ ಚಿರಂಜೀವಿ ಸರ್ಜಾ ಅಭಿನಯದ “ರಾಜಮಾರ್ತಾಂಡ’ ಸಿನಿಮಾದ ಬಗ್ಗೆ ಚಿರು ಪತ್ನಿ ಮೇಘನಾ ರಾಜ್‌ ಮಾತು.

ಅಂದಹಾಗೆ, ಮೇಘನಾ ರಾಜ್‌ ಇಂಥದ್ದೊಂದು ಮಾತನಾಡಲು ಬಲವಾದ ಕಾರಣವಿದೆ. ಎಲ್ಲ ಅಂದುಕೊಂಡಂತೆ ನಡೆದಿದ್ದರೆ 2017ರಲ್ಲಿ ಆರಂಭವಾಗಿದ್ದ ನಟ ಚಿರಂಜೀವಿ ಸರ್ಜಾ ಅಭಿನಯದ “ರಾಜಮಾರ್ತಾಂಡ’ ಸಿನಿಮಾ ಈಗಾಗಲೇ ಬಿಡುಗಡೆಯಾಗಿ ವರ್ಷಗಳೇ ಕಳೆದಿರುತ್ತಿತ್ತು. ಆದರೆ ವಿಧಿಯಾಟವೇ ಬೇರೆಯಾಗಿತ್ತು. “ರಾಜಮಾರ್ತಾಂಡ’ ಸಿನಿಮಾದ ಚಿತ್ರೀಕರಣ ಮುಗಿಸಿದ್ದರೂ, ಅದು ಪೋಸ್ಟ್‌ ಪ್ರೊಡಕ್ಷನ್‌ ಕೆಲಸಕ್ಕೆ ಹೋಗುವುದರ ಒಳಗಾಗಿ ನಟ ಚಿರಂಜೀವಿ ಸರ್ಜಾ ವಿಧಿವಶರಾಗಿದ್ದರು. ಹೀಗಾಗಿ ಸಿನಿಮಾವನ್ನು ಥಿಯೇಟರಿಗೆ ತರುವುದು “ರಾಜಮಾರ್ತಾಂಡ’ ಚಿತ್ರತಂಡಕ್ಕೆ ದೊಡ್ಡ ಸವಾಲಾಗಿತ್ತು.

ಆಗ “ರಾಜಮಾರ್ತಾಂಡ’ನಿಗೆ ಸಾಥ್‌ ನೀಡಿದವರು ಚಿರಂಜೀವಿ ಸರ್ಜಾ ಪತ್ನಿ ಮೇಘನಾ ರಾಜ್‌ ಮತ್ತು ಸೋದರ ಧ್ರುವ ಸರ್ಜಾ. ಅರ್ಧಕ್ಕೆ ನಿಂತ “ರಾಜಮಾರ್ತಾಂಡ’ನ ಕೆಲಸಗಳನ್ನು ಪೂರೈಸಲು ಮೇಘನಾ ರಾಜ್‌ ಚಿತ್ರತಂಡ ಬೆಂಬಲವಾದರೆ, ಚಿರು ಸೋದರ ಧ್ರುವ ಸರ್ಜಾ ಅಣ್ಣನ ಪಾತ್ರಕ್ಕೆ ಸ್ವತಃ ತಾನೇ ಧ್ವನಿಯಾಗುವ ಮೂಲಕ ಬಾಕಿಯಿದ್ದ ಸಿನಿಮಾದ ಡಬ್ಬಿಂಗ್‌ ಕೆಲಸಗಳನ್ನು ಪೂರ್ಣಗೊಳಿಸಿದರು. ಈಗ ತನ್ನೆಲ್ಲ ಕೆಲಸಗಳನ್ನು ಮುಗಿಸಿ “ರಾಜಮಾರ್ತಾಂಡ’ ಈ ವಾರ ತೆರೆಗೆ ಬರುತ್ತಿದೆ.

ಇದೇ ವೇಳೆ ಸಿನಿಮಾದ ಬಿಡುಗಡೆಗೂ ಮುನ್ನ ಮಾಧ್ಯಮಗಳ ಮುಂದೆ ಚಿತ್ರತಂಡದ ಜೊತೆ ಬಂದಿದ್ದ ಮೇಘನಾ, ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡರು.

“ನಾವು ಫ್ಯಾಮಿಲಿಯವರಾಗಿರುವುದರಿಂದ, ಚಿರು ಈ ಸಿನಿಮಾದಲ್ಲಿ ಚಿರು ಅಭಿನಯಿಸಿರುವುದರಿಂದ ಈ ಸಿನಿಮಾದ ಬಗ್ಗೆ ನಮಗೊಂದು ಒಲವಿದೆ. ಆದರೆ, ನಿರ್ದೇಶಕ ರಾಮ್‌ ನಾರಾಯಣ್‌ ಹಾಗೂ ನಿರ್ಮಾಪಕ ಶಿವಕುಮಾರ್‌ ಅವರು ಸತತವಾಗಿ 2017ಯಿಂದ ಇವತ್ತಿನವರೆಗೂ ಈ ಸಿನಿಮಾದ ಮೇಲೆ, ಚಿರು ಮೇಲೆ ಅದೆಷ್ಟು ಅಭಿಮಾನ ಇಟ್ಟಿದ್ದಾರೆ ಅಂದರೆ, ಏನೇ ಆಗಲಿ ಈ ಸಿನಿಮಾವನ್ನು ದೊಡ್ಡ ಮಟ್ಟಕ್ಕೆ ರಿಲೀಸ್‌ ಮಾಡಲೇಬೇಕು ಅಂತಾನೇ ಇದ್ದರು. ಅದೇ ರೀತಿ ಮಾಡುತ್ತಿದ್ದಾರೆ. ಸ್ವಲ್ಪ ತಡವಾದರೂ ಪರ್ವಾಗಿಲ್ಲ. ಜನರು ಈ ಸಿನಿಮಾವನ್ನು ಚಿರುಗೋಸ್ಕರ ನೋಡಲೇಬೇಕು ಅನ್ನೋ ಒಳ್ಳೆಯ ಹಠ ದಲ್ಲಿ ಇದ್ದರು’ ಎಂದು ಮೇಘನಾ ರಾಜ್‌ ಹೇಳಿದ್ದಾರೆ.

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.