ಫ‌ಸ್ಟ್‌ ಪೋಸ್ಟರ್‌ನಲ್ಲಿ ‘ರಾಜವನ’ ದರ್ಶನ


Team Udayavani, Mar 20, 2021, 11:41 AM IST

ಫ‌ಸ್ಟ್‌ ಪೋಸ್ಟರ್‌ನಲ್ಲಿ ‘ರಾಜವನ’ ದರ್ಶನ

ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸುತ್ತಿರುವ “ರಾಜವನ’ ಚಿತ್ರದ ಮೊದಲ ಪೋಸ್ಟರ್‌ ಇತ್ತೀಚೆಗೆ ಬಿಡುಗಡೆಯಾಗಿದೆ. ಹಿರಿಯ ಸಾಹಿತಿ ಪ್ರೊ. ದೊಡ್ಡರಂಗೇ ಗೌಡ, ಹಿರಿಯ ನಿರ್ದೇಶಕ ಓಂ ಸಾಯಿಪ್ರಕಾಶ್‌, ಹಿರಿಯ ನಟ ಅಂಜನಪ್ಪ ಮೊದಲಾದವರು ಸಮಾರಂಭದಲ್ಲಿ ಹಾಜರಿದ್ದು, “ರಾಜವನ’ ಚಿತ್ರದ ಮೊದಲ ಪೋಸ್ಟರ್‌ ಬಿಡುಗಡೆಗೊಳಿಸಿದರು.

ಹಿರಿಯ ನಿರ್ದೇಶಕ ಓಂ ಸಾಯಿಪ್ರಕಾಶ್‌ ಅವರ ಬಳಿ ಸಹಾಯಕರಾಗಿ ಹಲವು ಚಿತ್ರಗಳಿಗೆ ಕೆಲಸ ಮಾಡಿದ ಅನುಭವವಿರುವ ಈರಣ್ಣ ಎನ್‌. ಮಧುಗಿರಿ “ರಾಜವನ’ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಾಹಿತ್ಯ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.

ಚಿತ್ರದ ಬಗ್ಗೆ ಮಾತನಾಡಿದ ಈರಣ್ಣ ಎನ್‌. ಮಧುಗಿರಿ, “ನಮ್ಮ ಸುತ್ತಮುತ್ತ ನಡೆಯುವ ಕೆಲ ವಿಷಯಗಳನ್ನು ಇಟ್ಟುಕೊಂಡು, ಈ ಸಿನಿಮಾ ಮಾಡುತ್ತಿದ್ದೇವೆ. ಒಂದಷ್ಟು ನೈಜ ಘಟನೆಗಳೇ ಈ ಸಿನಿಮಾ ಮಾಡಲು ಕಾರಣವಾಯ್ತು. ಚಿತ್ರದ ಕಥೆಯನ್ನು ಮೊದಲು ಕೇಳಿದ ನಿರ್ಮಾಪಕರು, ತಕ್ಷಣವೇ ಈ ಕಥೆಯನ್ನು ಸಿನಿಮಾ ಮಾಡಲು ಒಪ್ಪಿಕೊಂಡರು. ಇದರಲ್ಲಿ ಮನರಂಜನೆಯ ಜೊತೆಗೆ ಒಂದೊಳ್ಳೆ ಸಂದೇಶವನ್ನೂ ತೆರೆಮೇಲೆ ಹೇಳುತ್ತಿದ್ದೇವೆ. ಲವ್‌, ಆ್ಯಕ್ಷನ್‌, ಸಸ್ಪೆನ್ಸ್‌-ಥ್ರಿಲ್ಲರ್‌ ಎಲ್ಲ ಅಂಶಗಳೂ ಈ ಸಿನಿಮಾದಲ್ಲಿದೆ. ಚಿತ್ರದ ಕಲಾವಿದರು ಮತ್ತು ಇತರ ತಂತ್ರಜ್ಞರ ಬಗ್ಗೆ ಶೀಘ್ರದಲ್ಲಿಯೇ ಮಾಹಿತಿ ನೀಡಉತ್ತೇವೆ’ ಎಂದರು.

“ಶ್ರೀ ಶ್ರೀ ಶ್ರೀ ಮೂಗೂರು ತಿಬ್ಟಾದೇವಿ ಪ್ರೊಡಕ್ಷನ್ಸ್‌’ ಬ್ಯಾನರ್‌ನಲ್ಲಿ ನಿರ್ಮಾಣ ವಾಗುತ್ತಿರುವ ಈ ಚಿತ್ರಕ್ಕೆ ಡಾ. ರಾಜು ಆರ್‌.ಎಸ್‌ (ರಾಂಪುರ) ಬಂಡವಾಳ ಹೂಡಿ ನಿರ್ಮಿಸುತ್ತಿದ್ದಾರೆ. ಚಿತ್ರದ ಬಗ್ಗೆ ಮಾತನಾಡಿದ ನಿರ್ಮಾಪಕ ಡಾ. ರಾಜು ಆರ್‌.ಎಸ್‌, “ನಾನು ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯವಾಗಿದ್ದರೂ, ಸಿನಿಮಾ ಕ್ಷೇತ್ರವನ್ನು ಹತ್ತಿರದಿಂದ ಬಲ್ಲೆ. ಸುಮಾರು ಹದಿನೈದು ವರ್ಷಗಳ ಹಿಂದೆಯೇ ಹಿರಿಯ ನಿರ್ದೇಶಕ ಓಂ ಸಾಯಿಪ್ರಕಾಶ್‌ ನೀವು ಮುಂದೆ ನಿರ್ಮಾಪಕರಾಗಿ ಸಿನಿಮಾ ನಿರ್ಮಿಸುವಂತಾಗಲಿ ಎಂದರು ಹಾರೈಸಿದ್ದರು. ಅದರ ಹಾರೈಕೆಯಂತೆ ಈ ಸಿನಿಮಾ ನಿರ್ಮಿಸುತ್ತಿದ್ದೇನೆ. ಸಿನಿಮಾದ ಕಥೆಯನ್ನು ನಿರ್ದೇಶಕರು ಹೇಳಿದಾಗ ತುಂಬ ಇಷ್ಟವಾಯ್ತು. ಕೂಡಲೇ ಈ ಕಥೆಯನ್ನು ನಾನೇ ಸಿನಿಮಾ ಮಾಡಬೇಕು ಅಂಥ ನಿರ್ಧರಿಸಿ, ಈ ಸಿನಿಮಾ ಮಾಡಲು ಮುಂದಾದೆ’ ಎಂದರು.

“ರಾಜವನ’ ಚಿತ್ರದ ಶೀರ್ಷಿಕೆಗೆ “ಕಾಮದರಮನೆಗೆ ಪ್ರೇಮದಕೋಟೆ?!’ ಎಂಬ ಅಡಿಬರಹವಿದೆ. ಸದ್ಯ ಚಿತ್ರದ ಪ್ರೀ-ಪ್ರೊಡಕ್ಷನ್‌ ಅಂತಿಮ ಹಂತದ ಕೆಲಸಗಳಲ್ಲಿ ನಿರತವಾಗಿರುವ ಚಿತ್ರತಂಡ, ಶೀಘ್ರದಲ್ಲಿಯೇ ಚಿತ್ರದ ಚಿತ್ರೀಕರಣ ಆರಂಭಿಸುವ ಯೋಚನೆಯಲ್ಲಿದೆ.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.