ಮದಕರಿ ಅಲ್ಲ ರಾಜವೀರ ಮದಕರಿ ನಾಯಕ
Team Udayavani, Dec 7, 2019, 10:17 AM IST
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಮದಕರಿ ನಾಯಕನ ಕುರಿತ ಐತಿಹಾಸಿಕ ಚಿತ್ರಕ್ಕೆ “ಗಂಡುಗಲಿ ಮದಕರಿ ನಾಯಕ‘ ಎಂದು ಹೆಸರಿಡಲಾಗಿತ್ತು. ಕಳೆದ ಕೆಲ ತಿಂಗಳಿನಿಂದ ಭರದಿಂದ ಪ್ರೀ–ಪ್ರೊಡಕ್ಷನ್ ಕೆಲಸಗಳಲ್ಲಿ ನಿರತವಾಗಿದ್ದ ಚಿತ್ರತಂಡ, ಇತ್ತೀಚೆಗಷ್ಟೇ ಚಿತ್ರದುರ್ಗಕ್ಕೆ ಭೇಟಿ ನೀಡಿ, ಅಲ್ಲಿನ ದೇಗುಲಗಳಿಗೆ ಪ್ರದಕ್ಷಣೆ ಹಾಕಿ ಚಿತ್ರದ ಬಗ್ಗೆ ಒಂದಷ್ಟು ಮಾಹಿತಿಯನ್ನು ಹಂಚಿಕೊಂಡಿತ್ತು.
ಇದರ ಬೆನ್ನಲ್ಲೆ ಶುಕ್ರವಾರ (ಡಿ. 6)ಕ್ಕೆ ಈ ಚಿತ್ರದ ಮುಹೂರ್ತ ಕೂಡ ಅದ್ಧೂರಿಯಾಗಿ ನೆರವೇರಿದೆ. ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ ನಡೆದ ಮುಹೂರ್ತ ಸಮಾರಂಭದಲ್ಲಿ, ನಟಿ ಮತ್ತು ಸಂಸದೆ ಸುಮಲತಾ ಅಂಬರೀಶ್ ಹಾಜರಿದ್ದು, ಚಿತ್ರೀಕರಣಕ್ಕೆ ಚಾಲನೆ ನೀಡಿದರು.
ಇದೇ ವೇಳೆ “ಗಂಡುಗಲಿ ವೀರಮದಕರಿ ನಾಯಕ‘ ಚಿತ್ರದ ಶೀರ್ಷಿಕೆ ಕೂಡ ಬದಲಾಗಿದೆ. ಹೌದು, ಈ ಮೊದಲು ಚಿತ್ರಕ್ಕೆ “ಗಂಡುಗಲಿ ಮದಕರಿ ನಾಯಕ‘ ಎಂದು ಹೆಸರಿಡಲಾಗಿತ್ತು. ಆದರೆ ಈಗ ಚಿತ್ರತಂಡ, ಚಿತ್ರಕ್ಕೆ “ರಾಜವೀರ ಮದಕರಿ ನಾಯಕ‘ ಎಂದು ಹೆಸರಿಟ್ಟಿದೆ. ಇನ್ನು ಈ ಚಿತ್ರದಲ್ಲಿ ನಟಿ ಸುಮಲತಾ ಅಂಬರೀಶ್ ಕೂಡ ಬಣ್ಣ ಹಚ್ಚಲಿದ್ದು, ಮದಕರಿ ನಾಯಕನ ತಾಯಿಯಾಗಿ ತೆರೆಮೇಲೆ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್ ಟೀಂ
ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು