ವಿದೇಶದಲ್ಲೂ ರಾಜು ಕಲರವ! ಜ.19 ರಂದು 200 ಚಿತ್ರಮಂದಿರದಲ್ಲಿ ರಿಲೀಸ್


Team Udayavani, Jan 11, 2018, 4:35 PM IST

Raju-Kannada-Medium-(3).jpg

ಆಗ, ಈಗ ಅಂತ ಅನ್ನುತ್ತಿದ್ದ “ರಾಜು ಕನ್ನಡ ಮೀಡಿಯಂ’ ಈಗ ಕೊನೆಗೂ ಬಿಡುಗಡೆಯಾಗುವುದಕ್ಕೆ ಸಜ್ಜಾಗುತ್ತಿದೆ. ಜನವರಿ 19ರಂದು ಸುಮಾರು 200 ಚಿತ್ರಮಂದಿರಗಳಲ್ಲಿ ಚಿತ್ರ ಬಿಡುಗಡೆ ಮಾಡುವ ತಯಾರಿ ನಡೆದಿದೆ. ಎರಡು ವಾರದ ಬಳಿಕ ವಿದೇಶದಲ್ಲೂ ರಾಜು ವಿಹರಿಸಲಿದ್ದಾನೆ ಎನ್ನುವುದು ವಿಶೇಷ.

ಕನ್ನಡ ಮಾಧ್ಯಮದಲ್ಲಿ ಓದಿದ ಹಳ್ಳಿ ಹುಡುಗನೊಬ್ಬ, ವಿದೇಶಕ್ಕೆ ಹೋಗಿ ಏನೆಲ್ಲಾ ಸಾಧನೆ ಮಾಡುತ್ತಾನೆ. ಆ ಸಾಧನೆ ಮಧ್ಯೆ ಎಷ್ಟೆಲ್ಲಾ ತೊಂದರೆಗಳು ಎದುರಾಗುತ್ತವೆ ಎನ್ನುವ ಕಥೆ ಇರುವ “ರಾಜು ಕನ್ನಡ ಮೀಡಿಯಂ’ನಲ್ಲಿ ನಾಯಕನಾಗಿ “ಫ‌ಸ್ಟ್‌ ರ್‍ಯಾಂಕ್‌ ರಾಜು’ ಖ್ಯಾತಿಯ ಗುರುನಂದನ್‌ ನಟಿಸಿದ್ದಾರೆ. “ಇದು ಟೀಮ್‌ ವರ್ಕ್‌ನಿಂದ ಮೂಡಿಬಂದ ಸಿನಿಮಾ. ನಿರ್ಮಾಪಕ ಹಾಗೂ ನಾಯಕಿ ಹೊರತುಪಡಿಸಿ, “ಫ‌ಸ್ಟ್‌ ರ್‍ಯಾಂಕ್‌ ರಾಜು’ ಚಿತ್ರದ ಸಕ್ಸಸ್‌ ತಂಡ ಸೇರಿಕೊಂಡು ಈ ಸಿನಿಮಾ ಮಾಡಿದೆ. ಎಲ್ಲರ ನಿರೀಕ್ಷೆ ಚಿತ್ರದ ಮೇಲಿದೆ. ಇಲ್ಲಿ ಒಂದೊಳ್ಳೆಯ ಸಂದೇಶವಿದೆ. ಆ ಸಂದೇಶವನ್ನು ಸಿನಿಮಾ ಮೂಲಕವೇ ತಿಳಿದುಕೊಳ್ಳಬೇಕು. 

ಇನ್ನು, ಸುದೀಪ್‌ ಅವರಿಲ್ಲಿ ಒಬ್ಬ ಶ್ರೀಮಂತ ಉದ್ಯಮಿಯಾಗಿ ಕಾಣಿಸಿಕೊಂಡಿದ್ದಾರೆ. ಅವರ ಸ್ಪೂರ್ತಿ ಪಡೆವ ಹಳ್ಳಿ ಹುಡುಗ ಎಷ್ಟು ಎತ್ತರಕ್ಕೆ ಬೆಳೆಯುತ್ತಾನೆ ಎಂಬುದು ಸಿನಿಮಾ ಸಾರಾಂಶ’ ಎನ್ನುತ್ತಾರೆ ಗುರುನಂದನ್‌.

ನಿರ್ಮಾಪಕ ಕೆ.ಎ.ಸುರೇಶ್‌ ಅವರಿಗೆ, ಇದೊಂದು ಬೇರೆ ರೀತಿಯ ಚಿತ್ರ ಆಗುತ್ತೆ ಅಂತ ಕಥೆ ಕೇಳಿದಾಗಲೇ ಅನಿಸಿತ್ತಂತೆ. ಅದು ನಿಜವಾಗುವ ಲಕ್ಷಣಗಳೂ ಗೋಚರಿಸುತ್ತಿವೆ ಎಂಬುದು ಅವರ ಹೇಳಿಕೆ. “ಇಲ್ಲಿ ವಿಶೇಷ ಪಾತ್ರವೊಂದರಲ್ಲಿ ಸುದೀಪ್‌ ಅವರು ಕಾಣಿಸಿಕೊಂಡಿದ್ದಾರೆ. ಅದು ಚಿತ್ರದ ಇನ್ನೊಂದು ಪ್ಲಸ್‌. ಚಿತ್ರದ ಬಗ್ಗೆ ಹೇಳುವುದೇನೂ ಇಲ್ಲ, ಸಿನಿಮಾ ನೋಡಿದ ಮೇಲೆ, ಚಿತ್ರದ ಬಗ್ಗೆ ಇತರರು ಹೇಳಬೇಕಷ್ಟೇ’ ಎನ್ನುತ್ತಾರೆ ಸುರೇಶ್‌.

ಕೊಡೆ ಕುರಿತು ಒಂದು ಕವಿತೆ ಬರೆದಿದ್ದರಂತೆ ಗೀತರಚನೆಕಾರ ಹೃದಯಶಿವ. ಅದು ಚಿತ್ರದ ಒಂದು ಸನ್ನಿವೇಶಕ್ಕೆ ಸರಿಹೊಂದುತ್ತದೆ ಅಂತ ಸಂಗೀತ ನಿರ್ದೇಶಕ ಕಿರಣ್‌ ರವೀಂದ್ರನಾಥ್‌ ಇಲ್ಲಿ ಬಳಸಿಕೊಂಡಿದ್ದಾರೆ. ಕವಿಯ ಹಿಂದೆ ಸಾಕಷ್ಟು ನೋವಿರುತ್ತೆ. ಹಾಗಾಗಿ ಬೇಸರದ ಹಾಡು ಬರೆಯೋಕೆ ಒಂಥರಾ ಖುಷಿಯಾಗುತ್ತೆ ಅನ್ನೋದು ಹೃದಯ ಶಿವ ಮಾತು.

ನಟಿ ಆಶಿಕಾಗೆ ಈ ಚಿತ್ರದ ಕಥೆ ಕೇಳಿ ಒಪ್ಪಿಕೊಂಡಾಗ, ಸುದೀಪ್‌ ಅವರು ನಟಿಸುತ್ತಾರೆ ಅನ್ನೋದು ಗೊತ್ತಿರಲಿಲ್ಲವಂತೆ. “ಆಮೇಲೆ ಸುದೀಪ್‌ ಕಾಣಿಸಿಕೊಳ್ಳುತ್ತಾರೆ ಅಂದಾಗ ಹೆಚ್ಚು ಖುಷಿಯಾಯ್ತು. ಈ ಚಿತ್ರ ನೋಡೋಕೆ ನಾನು ತುದಿಗಾಲ ಮೇಲೆ ನಿಂತಿದ್ದೇನೆ’ ಅನ್ನುತ್ತಲೇ ಜೋರು ನಗೆ ಚೆಲ್ಲಿ ಸುಮ್ಮನಾಗುತ್ತಾರೆ ಆಶಿಕಾ.

ಕಿರಣ್‌ ರವೀಂದ್ರನಾಥ್‌ ಇಲ್ಲಿ ಐದು ಹಾಡುಗಳಿಗೆ ರಾಗ ಸಂಯೋಜಿಸಿದ್ದಾರೆ. ಇನ್ನು, ಇಲ್ಲಿ ದಡೂತಿ ದೇಹದ ಅಮಿತ್‌, ಗೆಳಯನ ಪಾತ್ರಕ್ಕಾಗಿ 90 ಕೆಜಿ ಇದ್ದ ತೂಕವನ್ನು 73 ಕೆಜಿ ತೂಕಕ್ಕೆ ಇಳಿಸಿಕೊಂಡ ಬಗೆ ಹೇಳಿಕೊಂಡು ಎಂದಿನ ಶೈಲಿಯಲ್ಲಿ ನಕ್ಕರು ಅಮಿತ್‌.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.