ಏಳಕ್ಕೂ ಹೆಚ್ಚು ರಾಜ್ಯಗಳಲ್ಲಿ “ರಕ್ಷಿತ್‌ ಚಾರ್ಲಿ’ ಸುತ್ತಾಟ…

ಗೋವಾ, ಗುಜರಾತ್‌, ರಾಜಸ್ಥಾನ್‌, ಪಂಜಾಬ್‌, ಹಿಮಾಚಲ ಪ್ರದೇಶ ಮೊದಲಾದ ಕಡೆಗಳಲ್ಲಿ ಚಿತ್ರೀಕರಣ

Team Udayavani, Mar 5, 2020, 7:06 AM IST

rakshith-shett

ರಕ್ಷಿತ್‌ ಶೆಟ್ಟಿ ಸದ್ಯ “777 ಚಾರ್ಲಿ’ ಚಿತ್ರೀಕರಣದಲ್ಲಿ ಬಿಝಿ. ಹೊಸ ಬಗೆಯ ಕಥೆ ಹೊಂದಿರುವ ಈ ಚಿತ್ರದ ಚಿತ್ರೀಕರಣ ಬೇರೆ ಬೇರೆ ಲೊಕೇಶನ್‌ಗಳಲ್ಲಿ ನಡೆಯುತ್ತಲೇ ಇದೆ. ಸದ್ಯ ರಾಜಸ್ತಾನದಲ್ಲಿ ಚಿತ್ರೀಕರಣ ನಡೆಯುತ್ತಿದೆ. ಈಗಾಗಲೇ “ಚಾರ್ಲಿ’ 102′ ದಿನಗಳ ಚಿತ್ರೀಕರಣ ಪೂರೈಸಿದೆ. ಹಾಗಂತ ಚಿತ್ರೀಕರಣ ಮುಗಿದಿದೆ ಎಂದಲ್ಲ. ಇನ್ನೂ 30 ದಿನಗಳ ಚಿತ್ರೀಕರಣ ಬಾಕಿ ಇದೆ. ಇವೆಲ್ಲವನ್ನು ಲೆಕ್ಕ ಹಾಕಿದರೆ “ಚಾರ್ಲಿ’ಗೆ 140ಕ್ಕೂ ಹೆಚ್ಚು ದಿನಗಳ ಚಿತ್ರೀಕರಣ ಮಾಡಿದಂತಾಗುತ್ತದೆ.

ಈ ಹಿಂದೆ ರಕ್ಷಿತ್‌ ಶೆಟ್ಟಿಯವರ “ಅವನೇ ಶ್ರೀಮನ್ನಾರಾಯಣ’ ಚಿತ್ರ 200ಕ್ಕೂ ಹೆಚ್ಚು ದಿನಗಳ ಕಾಲ ಚಿತ್ರೀಕರಣವಾಗಿತ್ತು. “777 ಚಾರ್ಲಿ’ ಒಂದು ಜರ್ನಿ ಸಬ್ಜೆಕ್ಟ್. ಹಾಗಾಗಿ, ಬೇರೆ ಬೇರೆ ರಾಜ್ಯಗಳನ್ನು ಸುತ್ತಾಡಿಕೊಂಡೇ ಬರಬೇಕಾದ ಅನಿವಾರ್ಯತೆ ಕತೆಯಲ್ಲಿರುವ ಕಾರಣ ಚಿತ್ರೀಕರಣ ದಿನಗಳ ಕೂಡಾ ಹೆಚ್ಚಾಗುತ್ತಿವೆ ಎನ್ನುವುದು ರಕ್ಷಿತ್‌ ಶೆಟ್ಟಿ ಮಾತು. ಗೋವಾ, ಗುಜರಾತ್‌, ರಾಜಸ್ತಾನ್‌, ಪಂಜಾಬ್‌, ಹಿಮಾಚಲ ಪ್ರದೇಶ, ಕಾಶ್ಮೀರಗಳಲ್ಲಿ “777 ಚಾರ್ಲಿ’ ಚಿತ್ರೀಕರಣ ನಡೆಯಲಿದೆ.

ಇದು ಮನುಷ್ಯ ಮತ್ತು ಶ್ವಾನವೊಂದರ ನಡುವಿನ ಬಾಂಧವ್ಯದ ಕಥೆಯ ಜೊತೆಗೆ ಹಲವು ಅಂಶಗಳನ್ನು ಹೊಂದಿರುವುದರಿಂದ ಬೇರೆ ಬೇರೆ ರಾಜ್ಯಗಳನ್ನು ಸುತ್ತಾಡಬೇಕಿದೆ. ಕಿರಣ್‌ ರಾಜ್‌ ಈ ಚಿತ್ರದ ನಿರ್ದೇಶಕರು. ಎಲ್ಲಾ ಓಕೆ, ಚಿತ್ರ ಬಿಡುಗಡೆ ಯಾವಾಗ ಎಂದು ನೀವು ಕೇಳಬಹುದು. ಆಗಸ್ಟ್‌ ವೇಳೆಗೆ ಸಿನಿಮಾ ಸಿದ್ಧವಾಗಲಿದ್ದು, ಆ ನಂತರದ ಒಂದೆರಡು ತಿಂಗಳಲ್ಲಿ ಬಿಡುಗಡೆಯಾಗಲಿದೆ. ಇತ್ತೀಚೆಗಷ್ಟೇ ರಕ್ಷಿತ್‌ ಕೊಡೈಕೆನಾಲ್‌ನ ಸುಂದರ ಪರಿಸರದಲ್ಲಿ ತಮ್ಮ ಹೊಸ ಚಿತ್ರ “ಪುಣ್ಯಕೋಟಿ’ಯ ಕಥೆ ಬರೆಯಲು ಹೋಗಿದ್ದರು.

ಈ ಬಗ್ಗೆ ಮಾತನಾಡುವ ರಕ್ಷಿತ್‌, “10 ದಿನಗಳ ಕಾಲ ಕೊಡೈಕೆನಾಲ್‌ನಲ್ಲಿ “ಪುಣ್ಯ ಕೋಟಿ’ಗಾಗಿ ಕಥೆ ಬರೆದೆ. ಇನ್ನು ಸಾಕಷ್ಟು ಕೆಲಸವಿದೆ. ಈಗ ರಾಜಸ್ತಾನದಲ್ಲಿ ಚಿತ್ರೀಕರಣ ನಡೆಯುತ್ತಿದೆ. ಬಿಡುವಿನ ವೇಳೆಯಲ್ಲಿ ಇಲ್ಲಿ ಬರೆಯುತ್ತಿದ್ದೇನೆ’ ಎನ್ನುತ್ತಾರೆ. “ಚಾರ್ಲಿ’ ನಂತರ ರಕ್ಷಿತ್‌ ಯಾವ ಸಿನಿಮಾದಲ್ಲಿ ನಟಿಸಲಿದ್ದಾರೆಂಬ ಪ್ರಶ್ನೆಗೆ ಉತ್ತರ “ರಿಚ್ಚಿ’. ಹೌದು, ಇದು ರಕ್ಷಿತ್‌ ಅಭಿನಯದ ಮುಂದಿನ ಸಿನಿಮಾ. ಈ ಚಿತ್ರವನ್ನು ರಾಹುಲ್‌ ಎನ್ನುವವರು ನಿರ್ದೇಶಿಸಲಿದ್ದಾರೆ. ಈ ಹಿಂದೆ ರಕ್ಷಿತ್‌ ಅವರ ಹಲವು ಚಿತ್ರಗಳಲ್ಲಿ ಸಹಾಯಕರಾಗಿದ್ದ ರಾಹುಲ್‌ “ರಿಚ್ಚಿ’ ಮೂಲಕ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.