ರಕ್ಷಿತ್‌ ಶೆಟ್ಟರ ಎರಡು ಕನಸು…


Team Udayavani, Sep 2, 2022, 11:47 AM IST

ರಕ್ಷಿತ್‌ ಶೆಟ್ಟರ ಎರಡು ಕನಸು…

ಸದ್ಯ “777 ಚಾರ್ಲಿ’ ಸಿನಿಮಾದ ಸಕ್ಸಸ್‌ ಖುಷಿಯಲ್ಲಿರುವ ನಟ ರಕ್ಷಿತ್‌ ಶೆಟ್ಟಿ, “ಸಪ್ತಸಾಗರದಾಚೆ ಎಲ್ಲೋ…’ ಮತ್ತು “ರಿಚರ್ಡ್‌ ಆ್ಯಂಟನಿ’ ಮೂಲಕ ಹೊಸ ಗೆಟಪ್‌ನಲ್ಲಿ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದ್ದಾರೆ. ಇದರ ನಡುವೆಯೇ ರಕ್ಷಿತ್‌ ಶೆಟ್ಟಿ, ತಮ್ಮ “ಪರಂವಾ ಸ್ಟುಡಿಯೋಸ್‌’ ಬ್ಯಾನರ್‌ ಮೂಲಕ “ಇಬ್ಬನಿ ತಬ್ಬಿದ ಇಳೆಯಲಿ’ ಮತ್ತು “ಬ್ಯಾಚುಲರ್‌ ಪಾರ್ಟಿ’ ಎಂಬ ಎರಡು ಹೊಸ ಸಿನಿಮಾಗಳನ್ನು ನಿರ್ಮಿಸುತ್ತಿದ್ದು, ಗೌರಿ-ಗಣೇಶ ಹಬ್ಬದ ಮರುದಿನವೇ ಈ ಎರಡೂ ಸಿನಿಮಾಗಳ ಮುಹೂರ್ತ ಏಕಕಾಲಕ್ಕೆ ನೆರವೇರಿತು.

ಇನ್ನು ಈ ಎರಡೂ ಹೊಸ ಸಿನಿಮಾಗಳ ಮೇಲೆ ರಕ್ಷಿತ್‌ ಶೆಟ್ಟಿ ಸಾಕಷ್ಟು ನಿರೀಕ್ಷೆಯ ಮಾತುಗಳನ್ನಾಡುತ್ತಾರೆ. “ಸಿನಿಮಾರಂಗಕ್ಕೆ ನಾವು ಹೊಸಬರಾಗಿ ಪ್ರಾರಂಭದಲ್ಲಿ ಬಂದಾಗ ಸಾಕಷ್ಟು ಸವಾಲುಗಳನ್ನು ಎದುರಿಸಿದ್ದೆವು. ಹೊಸಬರು ಸಿನಿಮಾ ಮಾಡುವಾಗ ಏನೇನು ಸಂಕಷ್ಟಗಳನ್ನು ಎದುರಿಸಬೇಕಾಗುತ್ತದೆ ಅನ್ನೋದನ್ನ ನಾವು ಅನುಭವಿಸಿದ್ದೇವೆ. ಸಿನಿಮಾರಂಗ ಎಂದರೆ, ಇಲ್ಲಿ ಎಲ್ಲಾ ರೀತಿಯ ಸಿನಿಮಾಗಳೂ ಬರಬೇಕು. ಹೊಸಥರದ ಕಥೆಗಳು, ವಿಭಿನ್ನವಾಗಿ ಯೋಚಿಸುವ ರೈಟರ್ ಮುಂದೆ ಬರಬೇಕು. ಇದೇ ನಿಟ್ಟಿನಲ್ಲಿ ನಾವು “ಪರಂವಾ ಸ್ಟುಡಿಯೋಸ್‌’ ಮೂಲಕ ಆ ಹೆಜ್ಜೆ ಇಟ್ಟಿದ್ದೇವೆ. ಅದರ ಭಾಗವಾಗಿ ಈಗ “ಇಬ್ಬನಿ ತಬ್ಬಿದ ಇಳೆಯಲಿ’ ಮತ್ತು “ಬ್ಯಾಚುಲರ್‌ ಪಾರ್ಟಿ’ ಸಿನಿಮಾಗಳನ್ನು ನಮ್ಮ ಬ್ಯಾನರ್‌ನಲ್ಲಿ ನಿರ್ಮಿಸುತ್ತಿದ್ದೇವೆ’ ಎನ್ನುತ್ತಾರೆ ರಕ್ಷಿತ್‌ ಶೆಟ್ಟಿ .

ಇನ್ನು “ಇಬ್ಬನಿ ತಬ್ಬಿದ ಇಳೆಯಲಿ’ ಮತ್ತು “ಬ್ಯಾಚುಲರ್‌ ಪಾರ್ಟಿ’ ಸಿನಿಮಾಗಳನ್ನು ನಿರ್ದೇಶಿಸುತ್ತಿರುವ ಇಬ್ಬರೂ ನಿರ್ದೇಶಕರೂ ರಕ್ಷಿತ್‌ ಶೆಟ್ಟಿ ಅವರೊಂದಿಗೆ ಈ ಹಿಂದೆ ಹಲವು ಸಿನಿಮಾಗಳಲ್ಲಿ ಕೆಲಸ ಮಾಡಿದ ಅನುಭವವಿರುವ ಪ್ರತಿಭೆಗಳು. “”ಇಬ್ಬನಿ ತಬ್ಬಿದ ಇಳೆಯಲಿ’ ಸಿನಿಮಾವನ್ನು ಚಂದ್ರಜಿತ್‌ ಬೆಳ್ಳಿಯಪ್ಪ ನಿರ್ದೇಶಿಸುತ್ತಿದ್ದಾರೆ. “ಬ್ಯಾಚುಲರ್‌ ಪಾರ್ಟಿ’ ಸಿನಿಮಾವನ್ನು ಅಭಿಜಿತ್‌ ಮಹೇಶ್‌ ನಿರ್ದೇಶಿಸುತ್ತಿದ್ದಾರೆ. ಈ ಇಬ್ಬರನ್ನೂ ಬರಹಗಾರರಾಗಿ ಹತ್ತಿರದಿಂದ ನೋಡಿದ್ದೇನೆ. ಇಬ್ಬರಿಗೂ ಅವರದ್ದೇ ಆದ ವಿಭಿನ್ನ ಯೋಚನೆ ಮತ್ತು ದೃಷ್ಟಿಕೋನವಿದೆ. ಹೊಸಥರದ ಸಿನಿಮಾಗಳನ್ನು ಕೊಡುತ್ತಾರೆ ಎಂಬ ವಿಶ್ವಾಸವಿದೆ. ಇಬ್ಬರನ್ನೂ ನಿರ್ದೇಶಕರಾಗಿ “ಪರಂವಾ ಸ್ಟುಡಿಯೋಸ್‌’ ಮೂಲಕ ಪರಿಚಯಿಸುತ್ತಿರುವುದಕ್ಕೆ ಖುಷಿಯಾಗುತ್ತಿದೆ’ ಎನ್ನುತ್ತಾರೆ ರಕ್ಷಿತ್‌ ಶೆಟ್ಟಿ.

ಇಬ್ಬನಿ ತಬ್ಬಿದ ಇಳೆಯಲಿ: ಕಾವ್ಯಾತ್ಮಕ ಪ್ರೇಮಕಥೆಯ “ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರಕ್ಕೆ ಚಂದ್ರಜಿತ್‌ ಬೆಳ್ಳಿಯಪ್ಪ ನಿರ್ದೇಶನ ಮಾಡುತ್ತಿದ್ದು, ಚಿತ್ರದಲ್ಲಿ ವಿಹಾನ್‌, ಅಂಕಿತಾ ಅಮರ್‌ ಜೋಡಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರಕ್ಕೆ ಶ್ರೀವಾತ್ಸನ್‌ ಸೆಲ್ವರಾಜನ್‌ ಛಾಯಾಗ್ರಹಣ, ರಕ್ಷಿತ್‌ ಕೌ ಸಂಕಲನವಿದೆ. ಗಗನ್‌ ಬಡೇರಿಯಾ ಚಿತ್ರದ ಹಾಡುಗಳಿಗೆ ಸಂಗೀತ ಸಂಯೋಜಿಸುತ್ತಿದ್ದು, ಬೆಂಗಳೂರು ಮತ್ತು ಗೋವಾ ಸುತ್ತಮುತ್ತ ಚಿತ್ರದ ಚಿತ್ರೀಕರಣ ನಡೆಯಲಿದೆ.

ಬ್ಯಾಚುಲರ್‌ ಪಾರ್ಟಿ: ಔಟ್‌ ಆ್ಯಂಡ್‌ ಔಟ್‌ ಕಾಮಿಡಿ ಕಥಾಹಂದರ ಹೊಂದಿರುವ “ಬ್ಯಾಚುಲರ್‌ ಪಾರ್ಟಿ’ ಚಿತ್ರಕ್ಕೆ ಅಭಿಜಿತ್‌ ಮಹೇಶ್‌ ನಿರ್ದೇಶನವಿದೆ. ಚಿತ್ರದಲ್ಲಿ ದಿಗಂತ್‌, ರಿಷಬ್‌ ಶೆಟ್ಟಿ, ಅಚ್ಯುತ ಕುಮಾರ್‌, ಸಿರಿ ರವಿಕುಮಾರ್‌, ಪವನ್‌ ಕುಮಾರ್‌, ಪ್ರಕಾಶ್‌ ತುಮ್ಮಿನಾಡ್‌, ರಘು ರಾಮನಕೊಪ್ಪ, ಅಶ್ವಿ‌ನ್‌ರಾವ್‌ ಪಲ್ಲಕ್ಕಿ, ಶೋಭರಾಜ್‌, ಬಾಲಾಜಿ ಮನೋಹರ್‌ ಮೊದಲಾದವರು ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಚಿತ್ರಕ್ಕೆ ಅರ್ಜುನ್‌ ರಾಮು ಛಾಯಾಗ್ರಹಣ, ಅರ್ಜುನ್‌ ರಾಮು ಸಂಗೀತವಿದೆ.

ಜಿ.ಎಸ್‌. ಕಾರ್ತಿಕ ಸುಧನ್‌

ಟಾಪ್ ನ್ಯೂಸ್

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.