ರಕ್ಷಿತ್‌ ಕೈಗೆ ಕೋಳ


Team Udayavani, Jun 5, 2018, 10:00 PM IST

avane-srimannarayana.jpg

ರಕ್ಷಿತ್‌ ಶೆಟ್ಟಿಯ ಅಭಿಮಾನಿಗಳು ಅವರ ಹುಟ್ಟುಹಬ್ಬಕ್ಕಾಗಿ ಎದುರು ನೋಡುತ್ತಿದ್ದರು. ಹುಟ್ಟುಹಬ್ಬದಂದು ಸಿನಿಮಾವೊಂದರ ಫ‌ಸ್ಟ್‌ಲುಕ್‌ ಬಿಡುಗಡೆ ಮಾಡುವುದಾಗಿ ರಕ್ಷಿತ್‌ ಹೇಳಿದ್ದರು. ಇಂದು ರಕ್ಷಿತ್‌ ಹುಟ್ಟುಹಬ್ಬ. ಅದರಂತೆ ಚಿತ್ರದ ಫ‌ಸ್ಟ್‌ಲುಕ್‌ ಬಿಡುಗಡೆಯಾಗಿದೆ. ಹೌದು, ರಕ್ಷಿತ್‌ ಬಹುನಿರೀಕ್ಷೆ ಇಟ್ಟುಕೊಂಡಿರುವ “ಅವನೇ ಶ್ರೀಮನ್ನಾರಾಯಣ’ ಸಿನಿಮಾದ ಫ‌ಸ್ಟ್‌ಲುಕ್‌ ಬಿಡುಗಡೆಯಾಗಿದೆ.

ಪೊಲೀಸ್‌ ಗೆಟಪ್‌ನಲ್ಲಿರುವ ರಕ್ಷಿತ್‌ ಶೆಟ್ಟಿಯನ್ನು ನೋಡಿ ಅಭಿಮಾನಿಗಳು ಖುಷಿಯಾಗಿದ್ದಾರೆ. ಗಡ್ಡಬಿಟ್ಟು, ಸನ್‌ಗ್ಲಾಸ್‌ ಹಾಕಿಕೊಂಡಿರುವ ರಕ್ಷಿತ್‌, ಕೈ ಕೋಳ ಹಾಕಿಕೊಂಡು ಪೊಲೀಸ್‌ ಗೆಪಟ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಪೊಲೀಸ್‌ ಆಗಿ ಸ್ವತಃ ಕೈ ಕೋಳ ಹಾಕಿಕೊಂಡಿದ್ದು ಯಾಕೆ ಎಂಬ ಕುತೂಹಲ ಅವರ ಅಭಿಮಾನಿಗಳಲ್ಲಿ ಸಹಜವಾಗಿ ಎದ್ದಿದೆ. ಈ ಪ್ರಶ್ನೆಗೆ ಉತ್ತರ ಸಿಗಬೇಕಾದರೆ ಸಿನಿಮಾ ಬಿಡುಗಡೆವರೆಗೆ ಕಾಯಲೇಬೇಕು.

ಇನ್ನು, ಹುಟ್ಟುಹಬ್ಬ ಪ್ರಯುಕ್ತ ಚಿತ್ರದ ಫ‌ಸ್ಟ್‌ಲುಕ್‌ ಟೀಸರ್‌ ಕೂಡಾ ಬಿಡುಗಡೆಯಾಗಲಿದೆ. ಸಿನಿಮಾ ಸೆಟ್ಟೇರಿದ ದಿನದಿಂದಲೂ ಸಾಕಷ್ಟು ನಿರೀಕ್ಷೆ ಹುಟ್ಟಿಸಿದ್ದ “ಅವನೇ ಶ್ರೀಮನ್ನಾರಾಯಣ’ ಸಿನಿಮಾ ಹೇಗೆ ಮೂಡಿಬರುತ್ತದೆ ಎಂಬ ಕುತೂಹಲ ಸ್ವತಃ ರಕ್ಷಿತ್‌ಗೆ ಇತ್ತಂತೆ. ಅಭಿಮಾನಿಗಳ ಕುತೂಹಲವನ್ನು ತಣಿಸಬಹುದೇ ಎಂದು ಯೋಚಿಸುತ್ತಿದ್ದ ಅವರು ಈಗ ಸಿನಿಮಾ ಮೂಡಿಬರುತ್ತಿರುವ ರೀತಿಯಿಂದ ಖುಷಿಯಾಗಿದ್ದಾರೆ.

ಹುಟ್ಟುಹಬ್ಬದ ದಿನ ಬಿಡುಗಡೆಯಾಗುತ್ತಿರುವ ಟೀಸರ್‌ ಅನ್ನು ಪ್ರೇಕ್ಷಕರು ಇಷ್ಟಪಡುತ್ತಾರೆಂಬ ನಂಬಿಕೆ ಕೂಡಾ ರಕ್ಷಿತ್‌ಗಿದೆ. “ಅವನೇ ಶ್ರೀಮನ್ನಾರಾಯಣ’ ಸಿನಿಮಾದ ಚಿತ್ರೀಕರಣ ಬಾಗಲಕೋಟೆ, ಬಿಜಾಪುರ ಹಾಗೂ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನಡೆದಿದೆ. ಇಲ್ಲಿವರೆಗೆ ಸುಮಾರು 33 ದಿನಗಳ ಕಾಲ ಚಿತ್ರೀಕರಣವಾಗಿದ್ದು, ಇನ್ನೂ 70 ದಿನಗಳ ಚಿತ್ರೀಕರಣ ಬಾಕಿ ಇದೆ.

ಈ ಚಿತ್ರವನ್ನು ರಕ್ಷಿತ್‌ ಶೆಟ್ಟಿ, ಪುಷ್ಕರ್‌ ಹಾಗೂ ಪ್ರಕಾಶ್‌ ಸೇರಿಕೊಂಡು ನಿರ್ಮಿಸುತ್ತಿದ್ದಾರೆ. ಚಿತ್ರವನ್ನು ಸಚಿನ್‌ ನಿರ್ದೇಶಿಸುತ್ತಿದ್ದು, ಅಜನೀಶ್‌ ಲೋಕನಾಥ್‌ ಅವರ ಸಂಗೀತ ಚಿತ್ರಕ್ಕಿದೆ. ಚಿತ್ರದಲ್ಲಿ ಸಾನ್ವಿ ಶ್ರೀವತ್ಸ ನಾಯಕಿ. ಚಿತ್ರವನ್ನು ಡಿಸೆಂಬರ್‌ 28ಕ್ಕೆ ಬಿಡುಗಡೆ ಮಾಡುವ ಯೋಚನೆ ಚಿತ್ರತಂಡಕ್ಕಿದೆ. ಅದಕ್ಕೆ ಕಾರಣ 2016ರಲ್ಲಿ “ಕಿರಿಕ್‌ ಪಾರ್ಟಿ’ ಚಿತ್ರ ಅದೇ ದಿನ ತೆರೆಕಂಡಿತ್ತು ಮತ್ತು ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತ್ತು.

ಆ ಕಾರಣದಿಂದ “ಅವನೇ ಶ್ರೀಮನ್ನಾರಾಯಣ’ ಚಿತ್ರವನ್ನೂ ಅದೇ ದಿನ ಬಿಡುಗಡೆ ಮಾಡಲು ಚಿತ್ರತಂಡ ಯೋಚಿಸಿದೆ. ಈ ನಡುವೆಯೇ ರಕ್ಷಿತ್‌ ನಿರ್ಮಾಣದಲ್ಲಿ “777ಚಾರ್ಲಿ’ ಚಿತ್ರ ಆರಂಭವಾಗಲಿದ್ದು, ಈ ಚಿತ್ರಕ್ಕೂ ರಕ್ಷಿತ್‌ ನಾಯಕ. “ಅವನೇ ಶ್ರೀಮನ್ನಾರಾಯಣ’ ಸಿನಿಮಾಕ್ಕೆ ಬ್ರೇಕ್‌ ಕೊಟ್ಟು, ರಕ್ಷಿತ್‌, “ಚಾರ್ಲಿ’ಯಲ್ಲಿ ತೊಡಗಲಿದ್ದಾರೆ. ಈ ಚಿತ್ರದಲ್ಲಿ ನಾಯಿ ಹಾಗೂ ವ್ಯಕ್ತಿಯೊಬ್ಬನ ನಡುವಿನ ಬಾಂಧವ್ಯದ ಕಥೆಯನ್ನು ಹೇಳಲಿದ್ದಾರೆ ನಿರ್ದೇಶಕ ಕಿರಣ್‌ ರಾಜ್‌. ಈಗಾಗಲೇ ಚಿತ್ರದ ಪೋಸ್ಟರ್‌ ಬಿಡುಗಡೆಯಾಗಿದೆ. 

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.