ರಾಮಕೃಷ್ಣ ಡಬಲ್‌ ಸೆಂಚುರಿ


Team Udayavani, Jan 9, 2019, 9:02 AM IST

ramakrishna.jpg

ಹಿರಿಯ ನಟ ರಾಮಕೃಷ್ಣ ಇದೀಗ ಖುಷಿಯ ಮೂಡ್‌ನ‌ಲ್ಲಿದ್ದಾರೆ. ಇತ್ತೀಚೆಗಷ್ಟೇ ಅವರು, “ಸಿನಿಮಾರಂಗದ ದಿಗ್ಗಜರೆಲ್ಲಾ ಆರಂಭದ ದಿನಗಳಲ್ಲಿ ನನ್ನ ಬೆನ್ನುತಟ್ಟಿದ್ದರು. ಅಷ್ಟೇ ಅಲ್ಲ, ಚೆನ್ನಾಗಿ ಕೆಲಸ ಮಾಡು ಎಂದು ಆಶೀರ್ವದಿಸಿದ್ದರು. ಆದರೆ, ನಾನು ಅವರ ನಂಬಿಕೆಯನ್ನು ಎಷ್ಟರ ಮಟ್ಟಿಗೆ ಉಳಿಸಿಕೊಂಡಿದ್ದೇನೆ, ಇಲ್ಲಿಯವರೆಗೂ ನಾನೇನೂ ಮಾಡಿಯೇ ಇಲ್ಲವಲ್ಲಾ ಎಂಬ ಫೀಲ್‌’ ಇದೆ ಎಂದು ಹೇಳಿಕೊಂಡಿದ್ದರು.

ಈಗೇಕೆ ಅವರ ಮಾತಿನ ಪ್ರಸ್ತಾಪ ಎಂಬ ಪ್ರಶ್ನೆ ಎದುರಾಗಬಹುದು. ವಿಷಯ ಇದೆ. ಅವರೀಗ 200 ಚಿತ್ರಗಳನ್ನು ಪೂರ್ಣಗೊಳಿಸಿದ್ದಾರೆ. ಹೌದು, ರಾಮಕೃಷ್ಣ ಅವರು ಅಲ್ಲಿಂದ ಇಲ್ಲಿಯವರೆಗೆ ಮಾಡಿರುವ ಬಹುತೇಕ ಚಿತ್ರಗಳಲ್ಲಿ ವಿಭಿನ್ನ ಪಾತ್ರಗಳೇ ಸಿಕ್ಕಿವೆ. ಸಿಕ್ಕ ಪಾತ್ರವನ್ನು ಅಷ್ಟೇ ಶ್ರದ್ಧೆಯಿಂದ ನಿರ್ವಹಿಸುವ ಮೂಲಕ ತಮ್ಮ ಕೆಲಸವನ್ನು ಪ್ರೀತಿಯಿಂದ ಮಾಡಿಕೊಂಡು ಬಂದಿದ್ದಾರೆ.

ಹಳಬರು, ಹೊಸಬರು ಎಂಬ ಭೇದ-ಭಾವ ಇಲ್ಲದೆ, ಪಾತ್ರಕ್ಕೆ ಏನು ಬೇಕೋ, ನಿರ್ದೇಶಕ ಏನು ಹೇಳುತ್ತಾನೋ ಅಷ್ಟು ಮಾಡುವ ಮೂಲಕ ಸಿನಿಮಾವನ್ನು ಪ್ರೀತಿಸಿಕೊಂಡು ಬಂದಿದ್ದಾರೆ. ಈಗ ಅವರು ಡಬ್ಬಲ್‌ ಸೆಂಚುರಿ ಬಾರಿಸಿದ್ದಾರೆ. ಹೊಸಬರೇ ಸೇರಿ ಮಾಡುತ್ತಿರುವ “ಅಗ್ರಸೇನ’ ಎಂಬ ಚಿತ್ರದಲ್ಲಿ ರಾಮಕೃಷ್ಣ ನಟಿಸಿದ್ದಾರೆ. “ಅಗ್ರಸೇನ’ ಅವರ ಅಭಿನಯದ 200 ನೇ ಸಿನಿಮಾ ಎಂಬುದು ವಿಶೇಷತೆಗಳಲ್ಲೊಂದು.

ಈ ಚಿತ್ರಕ್ಕೆ ಎನ್‌.ಕೆ.ಮುರುಗೇಶ್‌ ನಿರ್ದೇಶಕರು. ಕಥೆ, ಚಿತ್ರಕಥೆ, ಸಂಭಾಷಣೆಯನ್ನು ಇವರೇ ಬರೆದಿದ್ದಾರೆ. ನೃತ್ಯ ನಿರ್ದೇಶಕ ಕಮ್‌ ನಿರ್ದೇಶಕ ಹರ್ಷ ಜೊತೆ ಕೆಲಸ ಮಾಡಿದ್ದ ಮುರುಗೇಶ್‌, ಇದೇ ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿದ್ದಾರೆ. ಇನ್ನು, ಮಮತಾ ಜಯರಾಮರೆಡ್ಡಿ ಈ ಚಿತ್ರದ ನಿರ್ಮಾಪಕರು. ಈ ಚಿತ್ರದಲ್ಲಿ ರಾಮಕೃಷ್ಣ ಅವರಿಗೆ ಎರಡು ಶೇಡ್‌ ಪಾತ್ರಗಳಿವೆ ಎಂಬುದು ನಿರ್ದೇಶಕರ ಮಾತು.

ಇದು 80 ರ ದಶಕದಲ್ಲಿ ನಡೆಯೋ ಕಥೆ. ಹಾಗಂತ ಚಿತ್ರದುದ್ದಕ್ಕೂ ಅದೇ ಇರುವುದಿಲ್ಲವಂತೆ. ಒಂದು ವರ್ಷನ್‌ ಮಾತ್ರ ಆ ಕಾಲದ ಕಥೆ ಸಾಗಿದರೆ, ಇನ್ನೊಂದು ವರ್ಷನ್‌ ಈಗಿನ ವಸ್ತುಸ್ಥಿತಿಯ ಕಥೆ ಹೇಳಲಿದೆಯಂತೆ. ರಾಮಕೃಷ್ಣ ಅವರು ಹಳ್ಳಿಯೊಂದರ ಮುಖಂಡರಾಗಿ ಕಾಣಿಸಿಕೊಂಡಿದ್ದಾರಂತೆ.

ಅದೊಂದು ಫ್ಯಾಶ್‌ಬ್ಯಾಕ್‌ ಕಥೆಯಾಗಿದ್ದರಿಂದ, ರಾಮಕೃಷ್ಣ ಅವರಿಗೆ ವಿಶೇಷ ಗೆಟಪ್‌ ಹಾಕಿಸಿ, ಪಾತ್ರ ಮಾಡಿಸಲಾಗಿದೆ ಎನ್ನುವ ಚಿತ್ರತಂಡ, ಇದೊಂದು ಕೌಟುಂಬಿಕ ಹಿನ್ನೆಲೆಯ ಕಥೆಯಾಗಿದ್ದು, ಚಿತ್ರದಲ್ಲಿ ಬಹುತೇಕ ಹೊಸ ಪ್ರತಿಭೆಗಳೇ ಇವೆ. ಇಲ್ಲಿ ಅಮರ್‌, ಯತ್ವಿಕೃಷ್ಣ ನಾಯಕರಾದರೆ, ರಚನಾ ದಶರಥ, ಉಗ್ರಂ ಮಂಜು ಇತರರು ನಟಿಸಿದ್ದಾರೆ. ಚಿತ್ರಕ್ಕೆ ಆರ್‌.ಪಿ.ರೆಡ್ಡಿ ಛಾಯಾಗ್ರಹಣವಿದೆ. ತ್ಯಾಗು ಅವರ ಸಂಗೀತವಿದೆ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.