ಟೀಸರ್ ನಲ್ಲಿ ರಿಷಿ-ಶುಭ್ರ ಜೋಡಿಯ ‘ರಾಮನ ಅವತಾರ’
Team Udayavani, Apr 13, 2023, 4:12 PM IST
ನಟ ರಿಷಿ ನಾಯಕರಾಗಿ ನಟಿಸಿರುವ “ರಾಮನ ಅವತಾರ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ವಿಕಾಸ್ ಪಂಪಾಪತಿ ಈ ಸಿನಿಮಾದ ನಿರ್ದೇಶಕರು. ಚಿತ್ರದಲ್ಲಿ ಪ್ರಣೀತಾ ಸುಭಾಷ್, ಶುಭ್ರ ಅಯ್ಯಪ್ಪ ನಾಯಕಿಯರಾಗಿ ನಟಿಸಿದ್ದಾರೆ.
ಚಿತ್ರದ ಬಗ್ಗೆ ಮಾತನಾಡುವ ರಿಷಿ, “ಸಾಮಾನ್ಯವಾಗಿ ಕಾಮಿಡಿ ಕಷ್ಟವಾದ ಜಾನರ್. ಅದರಲ್ಲಿ ಡಬಲ್ ಮೀನಿಂಗ್ ಮಾಡಬಹುದು. ಬೇರೆಯವರನ್ನು ನಿಂದಿಸಿ ಕಾಮಿಡಿ ಮಾಡಬಹುದು. ಡಬಲ್ ಮೀನಿಂಗ್ ಇಲ್ಲದೇ, ಯಾರಿಗೂ ನಿಂದಿಸದೆ ಕಾಮಿಡಿ ಮಾಡಬಹುದು ಎಂಬುದಕ್ಕೆ ನಿರ್ದೇಶಕ ವಿಕಾಸ್ ಪಂಪಾಪತಿ ಉದಾಹರಣೆ. ನಾನು ಈ ಸಿನಿಮಾವನ್ನು ತುಂಬಾ ಖುಷಿಯಿಂದ ಮಾಡಿದ್ದೇನೆ. ದೊಡ್ಡ ತಾರಾಬಳಗ ಚಿತ್ರದಲ್ಲಿದೆ. ಅವರೆಲ್ಲರ ಎನರ್ಜಿ ನೋಡಿ ನನಗೆ ಖುಷಿಯಾಗಿದೆ’ ಎಂದರು.
ಸಿನಿಮಾ ಬಗ್ಗೆ ಮಾತನಾಡಿದ ನಿರ್ದೇಶಕ ವಿಕಾಸ್ ಪಂಪಾಪತಿ, “ರಾಮನ ಅವತಾರ ಚಿತ್ರ ಕಲಿಯುಗದ ರಾಮನ ಕಥೆಯಾಗಿದ್ದು, ಸಿನಿಮಾ ನೋಡುವಾಗ ಅಲ್ಲಲ್ಲಿ ಪೌರಾಣಿಕ ರಾಮಾಯಣದ ನೆನಪು ಮಾಡಿಕೊಡುತ್ತದೆ. ಯಾವುದೇ ರೀತಿ ಕಾಂಪ್ರಮೈಸ್ ಮಾಡಿಕೊಳ್ಳದೆ ಸಿನಿಮಾವನ್ನು ಮಾಡಿದ್ದು ಕನ್ನಡ ಸಿನಿರಂಗದಲ್ಲಿ ಇದೊಂದು ವಿಭಿನ್ನ ಚಿತ್ರವಾಗುವುದರಲ್ಲಿ, ಪ್ರೇಕ್ಷಕರಿಗೆ ಮನೋರಂಜನೆ ಕೊಡುವುದರಲ್ಲಿ ಸಂದೇಹವಿಲ್ಲ’ ಎನ್ನುವುದು ನಿರ್ದೇಶಕರ ಮಾತು.
ಇದನ್ನೂ ಓದಿ:IPL 23: ಚೆನ್ನೈ ವಿರುದ್ಧ ಪಂದ್ಯ ಗೆದ್ದರೂ ಸಂಜು ಸ್ಯಾಮ್ಸನ್ ಗೆ ಶಾಕ್ ನೀಡಿದ ಐಪಿಎಲ್ ಮಂಡಳಿ
ಈ ಚಿತ್ರವನ್ನು ಅಮರೇಜ್ ಸೂರ್ಯವಂಶಿ ಚಿತ್ರ ನಿರ್ಮಾಣ ಮಾಡಿದ್ದಾರೆ. ರೊಮ್ಯಾಂಟಿಕ್ ಕಾಮಿಡಿ ಜಾನರ್ನ “ರಾಮನ ಅವತಾರ’ ಸಿನಿಮಾಗೆ ವಿಷ್ಣುಪ್ರಸಾದ್ ಹಾಗೂ ಸಮೀರ್ ದೇಶಪಾಂಡೆ ಛಾಯಾಗ್ರಹಣವಿದೆ. ಜೂಡಾ ಸ್ಯಾಂಡಿ ಸಂಗೀತ, ಅಮರನಾಥ್ ಸಂಕಲನವಿದೆ.
ಉಡುಪಿ, ಬೆಂಗಳೂರು ಸುತ್ತುಮುತ್ತ ಶೂಟಿಂಗ್ ನಡೆಸಲಾಗಿದೆ. ಜೂನ್ ಮೊದಲ ವಾರ ಸಿನಿಮಾವನ್ನು ತೆರೆಗೆ ತರುವ ಯೋಜನೆ ಚಿತ್ರತಂಡದ್ದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ