![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಒಲವು ಮೂಡಿಸುವ ಚಿತ್ರವಿದು…: ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಬಗ್ಗೆ ರಮ್ಯಾ ಮಾತು
Team Udayavani, Jan 16, 2023, 2:54 PM IST
![ramya spoke about swathi muttina male haniye](https://www.udayavani.com/wp-content/uploads/2023/01/ramya-620x348.jpg)
ರಾಜ್ ಬಿ. ಶೆಟ್ಟಿ ನಿರ್ದೇಶನ ಮತ್ತು ಅಭಿನಯದ “ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದ ಚಿತ್ರೀಕರಣ ಇತ್ತೀಚೆಗೆ ಪೂರ್ಣಗೊಂಡಿದ್ದು, ಸದ್ಯ ಈ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ನಡೆಯುತ್ತಿದೆ. ಇನ್ನು ನಟಿ ರಮ್ಯಾ ಇದೇ ಮೊದಲ ಬಾರಿಗೆ “ಆಪಲ್ ಬಾಕ್ಸ್ ಸ್ಟುಡಿಯೋಸ್’ ಬ್ಯಾನರ್ ಮೂಲಕ ಈ ಸಿನಿಮಾವನ್ನು ನಿರ್ಮಿಸುತ್ತಿದ್ದು, ನಿರ್ಮಾಪಕಿಯಾಗಿ ಸ್ಯಾಂಡಲ್ವುಡ್ನಲ್ಲಿ ಹೊಸ ಇನ್ನಿಂಗ್ಸ್ ಶುರು ಮಾಡುವ ಉತ್ಸಾಹದಲ್ಲಿದ್ದಾರೆ.
ಸದ್ಯ ತೆರೆಗೆ ಬರಲು ತಯಾರಾಗುತ್ತಿರುವ “ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದ ಬಗ್ಗೆ ನಿರ್ಮಾಪಕಿ ರಮ್ಯಾ ಒಂದಷ್ಟು ನಿರೀಕ್ಷೆಯ ಮಾತನಾಡಿದ್ದಾರೆ. “ಈ ಸಿನಿಮಾವೂ ನಮ್ಮೆಲ್ಲರನ್ನು ಪ್ರೀತಿ-ಪ್ರೇಮದೊಂದಿಗೆ ಒಲವಾಗುವಂತೆ ಮಾಡುತ್ತೆ ಎಂದು ವಿಶ್ವಾಸದಿಂದ ಹೇಳುತ್ತೇನೆ. ಮೊದಲ ಬಾರಿ ನಾನು ನಿರ್ಮಾಪಕಿಯ ಜವಾಬ್ದಾರಿ ನಿರ್ವಹಿಸುತ್ತಾ ಬಹಳಷ್ಟು ವಿಷಯಗಳನ್ನು ಈ ಸಿನಿಮಾದಿಂದ ಕಲಿತಿದ್ದೇನೆ. ನನಗಿದೊಂದು ಅದ್ಭುತವಾದ ಅನುಭವ. ಈ ಸಿನಿಮಾವು ಪ್ರೀತಿ ಹಾಗು ಆತ್ಮಶೋಧನೆಯನ್ನು ಕುರಿತು ಒಂದು ಸುಂದರ, ಕಾವ್ಯಾತ್ಮಕ ಹಾಗು ಸೌಮ್ಯ ಅನುಭವವಾಗಲಿದೆ’ ಎಂದಿದ್ದಾರೆ.
“ಕಳೆದ ವಿಜಯ ದಶಮಿಯಂದು ಈ ಸಿನಿಮಾವನ್ನು ಅನೌನ್ಸ್ ಮಾಡಲಾಗಿತ್ತು. ಹಲವು ಸುಂದರ ತಾಣಗಳಲ್ಲಿ ಈ ಸಿನಿಮಾದ ದೃಶ್ಯಗಳನ್ನು ಚಿತ್ರೀಕರಿಸಲಾಗಿದೆ. ಫಸ್ಟ್ಲುಕ್ ಪೋಸ್ಟರ್ ಮತ್ತು ಪಾತ್ರಗಳನ್ನು ಪರಿಚಯಿಸಲು ಬಿಡುಗಡೆ ಮಾಡಿದ ಪೋಸ್ಟರ್ಗಳು ಈಗಾಗಲೇ ಎಲ್ಲರ ಗಮನವನ್ನು ಸೆಳೆದಿದೆ. ಅದರಂತೆ, “ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ಕೂಡ ಪ್ರೇಕ್ಷಕರಿಗೆ ಇಷ್ಟವಾಗಲಿದೆ’ ಎಂಬುದು ರಮ್ಯಾ ಅವರ ಭರವಸೆಯ ಮಾತು.
ಇದನ್ನೂ ಓದಿ:ವಯಾಕಾಮ್ 18 ಪಾಲಾದ ಮಹಿಳಾ ಐಪಿಎಲ್ ಮಾಧ್ಯಮ ಹಕ್ಕು: ಪ್ರತಿ ಪಂದ್ಯಕ್ಕೆ 7.09 ಕೋಟಿ ಬೆಲೆ
“ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದಲ್ಲಿ ನಟ ಕಂ ನಿರ್ದೇಶಕ ರಾಜ್ ಬಿ ಶೆಟ್ಟಿ ಮತ್ತು ಸಿರಿ ರವಿಕುಮಾರ್ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, “ಅನಿಕೇತ್’ ಮತ್ತು “ಪ್ರೇರಣಾ’ ಎಂಬ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಉಳಿದಂತೆ ಬಾಲಾಜಿ ಮನೋಹರ್, ಸೂರ್ಯ ವಸಿಷ್ಠ, ರೇಖಾ ಕೂಡ್ಲಿಗಿ, ಸ್ನೇಹ ಶರ್ಮ, ಜೆ.ಪಿ
ತುಮ್ಮಿನಾಡ್, ಗೋಪಾಲಕೃಷ್ಣ ದೇಶಪಾಂಡೆ ಮತ್ತಿತರರು ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಚಿತ್ರಕ್ಕೆ ಮಿಧುನ್ ಮುಕುಂದನ್ ಸಂಗೀತ ಸಂಯೋಜಿಸಲಿದ್ದು, ಪ್ರವೀಣ್ ಶ್ರೀಯಾನ್ ಛಾಯಾಗ್ರಹಣ ಮತ್ತು ಸಂಕಲನವಿದೆ
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.