‘ರಣಧೀರ’ ಚಿತ್ರದ ಪೋಸ್ಟರ್ ಡಿಸೈನರ್ ಕೋವಿಡ್ನಿಂದ ಸಾವು
Team Udayavani, Apr 21, 2021, 3:56 PM IST
ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೋವಿಡ್ ಅಟ್ಟಹಾಸ ಮೆರೆಯುತ್ತಿದ್ದು, ಇದೀಗ ಕನ್ನಡ ಚಿತ್ರರಂಗದ ಮತ್ತೊರ್ವನನ್ನು ಬಲಿ ಪಡೆದಿದೆ.
ಕೋವಿಡ್ ಪಾಸಿಟಿವ್ ಸೋಂಕಿನಿಂದ ಬಳಲುತ್ತಿದ್ದ ಸ್ಯಾಂಡಲ್ ವುಡ್ ಖ್ಯಾತ ಪೋಸ್ಟರ್ ಡಿಸೈನರ್ ಮಸ್ತಾನ್ ನಿನ್ನೆ ರಾತ್ರಿ ಹೆಸರಘಟ್ಟದ ಸಪ್ತಗಿರಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಮಸ್ತಾನ್ ಅವರಿಗೆ 63 ವರ್ಷ ವಯಸ್ಸಾಗಿತ್ತು.
ಕಳೆದ ನಾಲ್ಕು ದಶಕಗಳಿಗಿಂತ ಹೆಚ್ಚು ಕಾಲ ಸ್ಯಾಂಡಲ್ ವುಡ್ ನಲ್ಲಿ ಡಿಸೈನರ್ ಆಗಿ ಕೆಲಸ ಮಾಡುತ್ತಿದ್ದ ಮಸ್ತಾನ್. ಇದುವರೆಗೂ 2000 ಚಿತ್ರಗಳಿಗೆ ಕೆಲಸ ಮಾಡಿದ್ದರು. ಇದಲ್ಲದೆ ಶುಕ್ಲಾಂಬರದರಂ, ಕಲ್ಲೇಶಿ ಮಲ್ಲೇಶಿ, ಸಿತಾರ ಎಂಬ ಮೂರು ಚಿತ್ರಗಳ ನಿರ್ದೇಶಕರೂ ಆಗಿದ್ದರು.
ಕ್ರೇಜಿ ಸ್ಟಾರ್ ರವಿಚಂದ್ರನ್ ಅಭಿನಯದ ‘ರಣಧೀರ’, ‘ಶಾಂತಿ ಕ್ರಾಂತಿ’, “ರಾಮಾಚಾರಿ”ಯಂತಹಾ ಚಿತ್ರಗಳ ಪೋಸ್ಟರ್ ಡಿಸೈನ್ ಮಾಡಿದ್ದದ್ದು ಮಸ್ತಾನ್ ಅವರಿಗೆ ಪ್ರಸಿದ್ಧಿಯನ್ನು ತಂದುಕೊಟ್ಟಿತ್ತು.
ಇನ್ನು ಇತ್ತೀಚಿಗಷ್ಟೆ ಕೆಮಿಸ್ಟ್ರಿ ಆಫ್ ಕರಿಯಪ್ಪ, ಸಂಯುಕ್ತ 2 ಸಿನಿಮಾಗಳ ನಿರ್ಮಾಪಕ ಮಂಜುನಾಥ್ ಕೋವಿಡ್ ಸೋಂಕಿಗೆ ಬಲಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು