ಗ್ರಾಮೀಣ ಪ್ರತಿಭೆಗಳಿಗೆ ಅವಕಾಶ ಕೊಟ್ಟ ರಣಹೇಡಿ!


Team Udayavani, Nov 25, 2019, 6:25 PM IST

25-November-31

ಗ್ರಾಮೀಣ ಸೊಗಡಿನ ಕಥೆಯ ಕಾರಣದಿಂದಲೇ ಎಲ್ಲ ವರ್ಗದ ಪ್ರೇಕ್ಷಕರ ಗಮನ ಸೆಳೆದುಕೊಂಡಿರೋ ಚಿತ್ರ ರಣಹೇಡಿ. ಮನು ಕೆ ಶೆಟ್ಟಿಹಳ್ಳಿ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಸಿನಿಮಾ ಇದೇ ತಿಂಗಳ 29ರಂದು ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಈ ಮೂಲಕ ಕನ್ನಡದ ಅದೆಷ್ಟೋ ಪ್ರೇಕ್ಷಕರ ಬಹು ಕಾಲದ ಕನಸೊಂದು ನನಸಾದಂತಾಗಿದೆ. ಈ ನೆಲದ ರೈತರ ಜೀವನದ ಮೇಲೆ ಬೆಳಕು ಚೆಲ್ಲುವಂಥಾ ಸಿನಿಮಾಗಳು ತಯಾರಾಗಬೇಕೆಂಬುದು ಹಲವರ ಇಂಗಿತ. ಆದರೆ ಇತ್ತೀಚಿನ ದಿನಗಳಲ್ಲಿ ಆ ಸಂಖ್ಯೆ ಇಲ್ಲವೇ ಇಲ್ಲ ಎಂಬಷ್ಟು ಕಡಿಮೆಯಾಗಿ ಬಿಟ್ಟಿದೆ. ಇದೀಗ ರಣಹೇಡಿ ಚಿತ್ರದ ಮೂಲಕ ಅದು ಸಾಕಾರಗೊಂಡಿದೆ.

ಸುರೇಶ್ ನಿರ್ಮಾಣ ಮಾಡಿರುವ ಈ ಚಿತ್ರವನ್ನು ಪ್ರತೀ ಫ್ರೇಮಿನಲ್ಲಿಯೂ ರೈತ ಸಂಕುಲವೇ ಹೀರೋಗಳಂತೆ ಕಾಣುವಂತೆ ನಿರ್ದೇಶಕರು ದೃಶ್ಯ ಕಟ್ಟಿದ್ದಾರಂತೆ. ಸಿನಿಮಾ ಅಂದಮೇಲೆ ಅದಕ್ಕೊಂದಷ್ಟು ಸೂತ್ರಗಳಿರುತ್ತವೆ. ಅದೆಲ್ಲವನ್ನು ಮೀರಿಕೊಂಡು ಇಂಥಾ ಕಥೆಗಳನ್ನು ಕಮರ್ಶಿಯಲ್ ಜಾಡಿಗೂ ಒಗ್ಗಿಸಿಕೊಳ್ಳುವುದು ನಿಜಕ್ಕೂ ಸವಾಲಿನ ಸಂಗತಿ. ಮನು ಕೆ ಶೆಟ್ಟಿಹಳ್ಳಿ ಅದನ್ನು ಸಾಧ್ಯವಾಗಿಸಿದ್ದಾರೆ. ನೋಡುಗರಿಗೆ ತಮ್ಮ ನಡುವಿನ, ತಾವು ಕಡೆಗಣಿಸಿರುವ ತಮ್ಮದೇ ಬದುಕಿನ ಚಿತ್ರಗಳು ಕದಲುತ್ತಿವೆಯೇನೋ ಎಂಬಂತೆ ಭಾಸವಾಗುವ ರೀತಿಯಲ್ಲಿ ರಣಹೇಡಿ ಮೂಡಿ ಬಂದಿದೆಯಂತೆ.

ಇಲ್ಲಿರೋ ಪಾತ್ರಗಳು, ಸನ್ನಿವೇಶಗಳೆಲ್ಲವೂ ಗ್ರಾಮೀಣ ಸೊಗಡಿನವುಗಳು. ಒಂದು ಹಳ್ಳಿಯೇ ಎದ್ದು ಪರದೆ ಮೇಲೆ ಮೂಡಿಕೊಂಡಂತೆ ಈ ಸಿನಿಮಾವನ್ನು ರೂಪಿಸಬೇಕೆಂಬುದು ಮನು ಅವರ ಮಹಾ ಕನಸಾಗಿತ್ತು. ಪಳಗಿಕೊಂಡ ನಟರೊಂದಿಗೆ ಹಳ್ಳಿಗಾಡಿನ ಜನರೇ ಒಂದಷ್ಟು ಮಂದಿ ತೆರೆ ಮೇಲೆ ಕಾಣಿಸಿಕೊಂಡರೆ ಮತ್ತಷ್ಟು ಸಹಜವಾಗಿರುತ್ತೆ ಅನ್ನಿಸಿದ್ದೇ ಇಪ್ಪತೈದಕ್ಕೂ ಹೆಚ್ಚು ಮಂದಿ ಹಳ್ಳಿ ಹುಡುಗರಿಗೆ ಅವರು ನಟಿಸೋ ಅವಕಾಶ ಕೊಟ್ಟಿದ್ದಾರೆ. ಅವರೆಲ್ಲರೂ ಅತ್ಯಂತ ಸಹಜವಾಗಿ ನಟಿಸಿದ್ದಾರಂತೆ. ಇದುವೇ ರಣಹೇಡಿಯನ್ನು ಮತ್ತಷ್ಟು ನೈಜವಾಗಿ ಮೂಡಿ ಬರುವಂತೆ ಮಾಡಿದೆಯಂತೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.