“ರಾಂಧವ’ ಸಂಭ್ರಮ

25 ದಿನದ ಸಂಭ್ರಮದಲ್ಲಿ ಮಿಂದೆದ್ದ ಫ್ಯಾನ್ಸ್‌

Team Udayavani, Sep 23, 2019, 3:00 AM IST

Randhava–25-Days

ಕನ್ನಡ ಚಿತ್ರರಂಗದಲ್ಲೀಗ ಹೊಸ ಸಿನಿಮಾಗಳ ಫ‌ಸಲು ಚೆನ್ನಾಗಿದೆ. ಅದರಲ್ಲೂ ಹೊಸಬರ ಪ್ರಯತ್ನಕ್ಕೆ ಮೆಚ್ಚುಗೆಯೂ ಸಿಗುತ್ತಿದೆ. ಆ ಸಾಲಿಗೆ ಈಗ “ರಾಂಧವ’ ಕೂಡ ಸೇರಿದೆ. ಹೌದು, ಈ ಚಿತ್ರ ಬಿಡುಗಡೆಯಾದ ದಿನ ಎಲ್ಲೆಡೆ ಮೆಚ್ಚುಗೆ ಪಡೆದಿತ್ತು. ಅಷ್ಟೇ ಅಲ್ಲ, 25 ದಿನಗಳ ಯಶಸ್ವಿ ಪ್ರದರ್ಶನ ಕಂಡಿರುವುದು ಚಿತ್ರತಂಡಕ್ಕೆ ಸಹಜವಾಗಿಯೇ ಖುಷಿ ಹೆಚ್ಚಿಸಿದೆ. ಈ ಖುಷಿಗೆ ಚಿತ್ರದ ನಾಯಕ ಭುವನ್‌ ಅವರ ಅಭಿಮಾನಿಗಳು ಕೇಕ್‌ ಕತ್ತರಿಸಿ, ಸಂಭ್ರಮಿಸಿರುವುದು ವಿಶೇಷ.

ಒಂದು ಚಿತ್ರ ಸಕ್ಸಸ್‌ನತ್ತ ದಾಪುಗಾಲಿಟ್ಟರೆ, ಆ ಚಿತ್ರತಂಡ ಖುಷಿ ಹಂಚಿಕೊಳ್ಳುವುದು ಸಹಜ. ಆದರೆ, ಹೊಸಬರ ಚಿತ್ರ ಮೆಚ್ಚಿಕೊಂಡ ಜನರು, ಹೀರೋ ಮೂಲಕ ಕೇಕ್‌ ಕತ್ತರಿಸಿ ಸಂಭ್ರಮಿಸುತ್ತಿರುವುದು ಹೊಸ ವಿಷಯ. ಬೆಂಗಳೂರು, ಕೊಪ್ಪಳ, ರಾಮನಗರ, ತುಮಕೂರು, ಹಾಸನ ಮತ್ತು ದೊಡ್ಡಬಳ್ಳಾಪುರ ಭಾಗದ ಅಭಿಮಾನಿಗಳು ನಾಯಕ ಭುವನ್‌ ಅವರಿಂದ ಕೇಕ್‌ನ್ನು ಕತ್ತರಿಸಿ ಖುಷಿ ಹಂಚಿಕೊಂಡರು.

ಈ ಖುಷಿ ಹಂಚಿಕೊಂಡ ನಾಯಕ ಭುವನ್‌, “ಸಿನಿಮಾ ಮಾಡಿ, ಬಿಡುಗಡೆ ಮಾಡುವುದು ಸುಲಭ ಅಂದುಕೊಂಡಿದ್ದೆ. ಆದರೆ, ಬಿಡುಗಡೆ ವೇಳೆ ಎಷ್ಟು ಕಷ್ಟ ಆಯ್ತು ಅನ್ನೋದನ್ನು ಅರಿತೆ. ಕೆಲವು ಕಡೆ ನಿರೀಕ್ಷೆ ಇತ್ತು. ಆದರೆ, ಅಲ್ಲೆಲ್ಲಾ ಆ ನಿರೀಕ್ಷೆ ಸುಳ್ಳಾಯ್ತು. ಆದರೆ, ಕೆಲ ಸೆಂಟರ್‌ಗಳಲ್ಲಿ ನಮ್ಮ ನಿರೀಕ್ಷೆ ಮೀರಿ ಚಿತ್ರ ಪ್ರದರ್ಶನ ಕಂಡಿದೆ. ನಾವು ಕೆಲವು ಚಿತ್ರಮಂದಿರಗಳಿಗೆ ಭೇಟಿ ಕೊಟ್ಟ ವೇಳೆ, ಎಲ್ಲರಿಂದಲೂ ಇದು ಹೊಸಬರ ಸಿನಿಮಾ ಎನಿಸುವುದಿಲ್ಲ ಅಂತಾನೇ ಹೇಳುತ್ತಿದ್ದರು.

ಆಗ, ನಮ್ಮ ತಂಡಕ್ಕೆ ಸಿನಿಮಾ ಮಾಡಿದ್ದಕ್ಕೂ ಸಾರ್ಥಕ ಎನಿಸಿದ್ದು ಸುಳ್ಳಲ್ಲ’ ಎಂದರು ಭುವನ್‌. ನಿರ್ದೇಶಕ ಸುನೀಲ್‌ ಆಚಾರ್ಯ ಅವರಿಗೆ ಸಿನಿಮಾ ಚೆನ್ನಾಗಿ ಪ್ರದರ್ಶನ ಕಾಣುತ್ತಿರುವ ಸೂಚನೆ ಸಿಕ್ಕಿದ್ದರಿಂದ 50 ದಿನದ ಸಂಭ್ರಮ ಆಚರಿಸಿಕೊಳ್ಳಬಹುದು ಎಂಬ ಯೋಚನೆ ಇತ್ತಂತೆ. “ಅಭಿಮಾನಿಗಳು ಸೇರಿ, 25 ದಿನದ ಸಂಭ್ರಮ ಹಂಚಿಕೊಂಡಿದ್ದಾರೆ. ಅವರ ಸಂತಸಕ್ಕೆ ನಮ್ಮ ಬೆಂಬಲ ಬೇಕು.

ಹಾಗಾಗಿ ಅವರ ಪ್ರೀತಿಯ ಆಹ್ವಾನಕ್ಕೆ ಬಂದಿದ್ದೇವೆ’ ಎಂಬುದು ಸುನಿಲ್‌ಆಚಾರ್ಯ ಮಾತು. ನಟಿ ವಾಣಿಶ್ರೀ ಅವರಿಗೆ ಒಳ್ಳೆಯ ಚಿತ್ರದಲ್ಲಿ ಕೆಲಸ ಮಾಡಿದ ಖುಷಿಯಂತೆ. ಅವರಿಲ್ಲಿ ಕಥೆ ಕೇಳದೆ ನಟನೆ ಮಾಡಿದ್ದನ್ನು ನೆನಪಿಸಿಕೊಂಡರು ಅವರು. ಇನ್ನು ಸಂಗೀತ ನಿರ್ದೇಶಕ ಶಶಾಂಕ್‌ ಶೇಷಗಿರಿ ಅವರ ಕೆಲಸಕ್ಕೆ ಎಲ್ಲೆಡೆಯಿಂದಲೂ ಮೆಚ್ಚುಗೆ ಸಿಕ್ಕಿದೆ. ಅದನ್ನು ಹೇಳಿಕೊಂಡು ಅವರು, ಎಲ್ಲರಿಗೂ ಧನ್ಯವಾದ ಅರ್ಪಿಸಿದರು.

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.