ರಶ್ಮಿಕಾ ಕಿರಿಕ್‌ ಸ್ಟೋರಿ!

ಕನ್ನಡಿಗರ ಕೆಂಗಣ್ಣಿಗೆ ಗುರಿಯಾದ ಕೂರ್ಗ್‌ ಸುಂದರಿ

Team Udayavani, Jul 23, 2019, 3:04 AM IST

rashmika

ಇತ್ತೀಚೆಗೆ ತನ್ನ ಅಭಿನಯಕ್ಕಿಂತ ಬೇರೆ ಬೇರೆ ವಿಷಯಗಳಿಗೆ ವಿವಾದಗಳಿಗೆ ಸುದ್ದಿಯಾಗುತ್ತಿರುವ ನಟಿಯರ ಸಾಲಿನಲ್ಲಿ ರಶ್ಮಿಕಾ ಮಂದಣ್ಣ ಹೆಸರು ಮೊದಲಿಗೆ ನಿಲ್ಲುತ್ತದೆ. “ಕಿರಿಕ್‌ ಪಾರ್ಟಿ’ ಚಿತ್ರದ ಮೂಲಕ ಬೆಳ್ಳಿತೆರೆಗೆ ಕಾಲಿಟ್ಟ ಕೊಡಗಿನ ಹುಡುಗಿ ರಶ್ಮಿಕಾ, ಟಾಲಿವುಡ್‌ಗೆ ಹಾರಿದ ನಂತರ ವರಸೆಯೇ ಬದಲಾಗಿದೆ ಅನ್ನೋದು ರಶ್ಮಿಕಾ ಅವರನ್ನು ಹತ್ತಿರದಿಂದ ಬಲ್ಲವರ ಮಾತು. ಅದಕ್ಕೆ ಪೂರಕವೆನ್ನುವಂತೆ ರಶ್ಮಿಕಾ ವರ್ತನೆ ಕೂಡ ಇರುವುದರಿಂದ ಚಿತ್ರೋದ್ಯಮದ ಮಂದಿ ಕೂಡ ಈ ಮಾತಿಗೆ ತಲೆದೂಗುತ್ತಿದ್ದಾರೆ. ಈ ಮಾತಿಗೆ ಇಂಬು ನೀಡುವಂತೆ, ಇತ್ತೀಚೆಗೆ ರಶ್ಮಿಕಾ ಮಂದಣ್ಣ ಆಡಿರುವ ಮಾತುಗಳು ಕನ್ನಡದ ಸಿನಿಪ್ರಿಯರು ಮತ್ತು ಕನ್ನಡ ಚಿತ್ರೋದ್ಯಮದ ಮಂದಿಯ ಕೆಂಗಣ್ಣಿಗೆ ಗುರಿಯಾಗಿದೆ.

ತೆಲುಗು, ತಮಿಳು ಅಂದ್ರೆ ಓಕೆ. ಕನ್ನಡ ಅಂದ್ರೆ ಯಾಕೆ?: “ಗೀತ ಗೋವಿಂದಂ’ ಚಿತ್ರದ ಬಹುದೊಡ್ಡ ಸಕ್ಸಸ್‌ ನಂತರ ಅಲ್ಲೀಗ ಅವರು ಬಹುಬೇಡಿಕೆಯ ನಟಿ. ಹೀಗಾಗಿ ತಮಗೆ ಬಹುಬೇಡಿಕೆಯಿರುವುದರಿಂದ ರಶ್ಮಿಕಾ ಈಗ ತೆಲುಗು ಕಲಿತುಕೊಂಡಿದ್ದಾರೆ. ಜೊತೆಗೆ ತಮಿಳು ಭಾಷೆಯ ಮೇಲೂ ಹಿಡಿತ ಸಾಧಿಸಿದ್ದಾರೆ. ಇತ್ತೀಚೆಗೆ ತಮ್ಮ “ಡಿಯರ್‌ ಕಾಮ್ರೆಡ್‌’ ಚಿತ್ರದ ಪ್ರಚಾರಕ್ಕೆ ಹೈದರಾಬಾದ್‌ನಲ್ಲಿ ಇದ್ದಾಗ ತೆಲುಗಿನಲ್ಲೇ ಮಾತನಾಡುತ್ತಿದ್ದ ರಶ್ಮಿಕಾ, ಚೆನ್ನೈಗೆ ಹೋದಾಗ ಶುದ್ಧ ತಮಿಳಿನಲ್ಲಿ ಮಾತನಾಡಿದ್ದರು.

ಅದೇ “ಡಿಯರ್‌ ಕಾಮ್ರೆಡ್‌’ ಚಿತ್ರದ ಪ್ರಚಾರಕ್ಕೆ ಬೆಂಗಳೂರಿಗೆ ಬಂದಾಗ ರಶ್ಮಿಕಾ ಬಹುತೇಕ ಮಾತನಾಡಿದ್ದು ಮಾತ್ರ ಇಂಗ್ಲೀಷ್‌ನಲ್ಲಿ. ಕಲಾವಿದೆಯಾಗಿ ಆಕೆ ಯಾವ ಭಾಷೆ ಕಲಿತುಕೊಳ್ಳುವುದಕ್ಕೂ ಯಾರ ಆಕ್ಷೇಪವೂ ಇಲ್ಲ. ಆದರೆ ಅಲ್ಲಿ ಬೇಡಿಕೆ ಇದೆ ಎಂದಮಾತ್ರಕ್ಕೆ ಇಲ್ಲೇ ಹುಟ್ಟಿ ಕಲಿತ ಕನ್ನಡವನ್ನೇ ಮರೆತರೆ ಹೇಗೆ? ಹೀಗೆ ಕನ್ನಡವನ್ನು ಕಡೆಗಣಿಸಿ ಇಂಗ್ಲೀಷ್‌ನಲ್ಲಿ ಮಾತನಾಡುವ ದರ್ದು ಅಂಥದ್ದೇನು ಎನ್ನುವುದು ಕನ್ನಡ ಸಿನಿಪ್ರಿಯ ಪ್ರಶ್ನೆ.

ಕನ್ನಡ ಕಷ್ಟವೆಂದು ತಮಿಳಲ್ಲೇ ಹೇಳಿದ್ದ ರಶ್ಮಿಕಾ!: ಇತ್ತೀಚೆಗೆ “ಡಿಯರ್‌ ಕಾಮ್ರೆಡ್‌’ ಚಿತ್ರದ ಪ್ರಚಾರಕ್ಕೆ ನಟಿ ರಶ್ಮಿಕಾ ಚೆನ್ನೈಗೆ ತೆರಳಿದ್ದರು. ಈ ವೇಳೆ ಅಲ್ಲಿನ ವೆಬ್‌ ಚಾನೆಲ್‌ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡುತ್ತಾ, “ಕನ್ನಡ ನನಗೆ ಬಲು ಕಷ್ಟ. ಕನ್ನಡ ಮಾತನಾಡಲು ಬರುವುದಿಲ್ಲ’ ಎಂದು ಶುದ್ಧ ತಮಿಳು ಭಾಷೆಯಲ್ಲೇ ಹೇಳಿಕೆ ನೀಡಿದ್ದರು. ರಶ್ಮಿಕಾ ಈ ಹೇಳಿಕೆಯ ವೀಡಿಯೋ ಈಗ ಸೋಶಿಯಲ್‌ ಮೀಡಿಯಾಗಳಲ್ಲಿ ಸಾಕಷ್ಟು ವೈರಲ್‌ ಆಗುತ್ತಿದ್ದು, ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.

ಕನ್ನಡ ಚಿತ್ರಗಳ ಬಗ್ಗೆ ಅದೇನೋ ಅಸಡ್ಡೆ: ರಶ್ಮಿಕಾ ಮಂದಣ್ಣ ಅವರನ್ನು ನಾಯಕ ನಟಿಯಾಗಿ ಚಿತ್ರರಂಗಕ್ಕೆ ಪರಿಚಯಿಸಿದ್ದೇ “ಕಿರಿಕ್‌ ಪಾರ್ಟಿ’ ಎನ್ನುವ ಕನ್ನಡ ಚಿತ್ರ. ಅದಾದ ಬಳಿಕ ಪುನೀತ್‌ ರಾಜಕುಮಾರ್‌ ಅಭಿನಯದ “ಅಂಜನಿಪುತ್ರ’, ದರ್ಶನ್‌ ಅಭಿನಯದ “ಯಜಮಾನ’ ಚಿತ್ರಗಳಲ್ಲಿ ನಟಿಸಿದ್ದು ಬಿಟ್ಟರೆ, ಇತ್ತೀಚೆಗೆ ಮತ್ತೆ ಯಾವ ಚಿತ್ರಗಳಲ್ಲೂ ರಶ್ಮಿಕಾ ಕಾಣಿಸಿಕೊಂಡಿಲ್ಲ. ಚಿತ್ರೋದ್ಯಮದ ಮೂಲಗಳ ಪ್ರಕಾರ, ತೆಲುಗಿನಲ್ಲಿ ಬೇಡಿಕೆಯ ನಟಿಯಾದ ಬಳಿಕ ಕನ್ನಡದಲ್ಲಿ ಬರುತ್ತಿರುವ ಅವಕಾಶಗಳನ್ನು ರಶ್ಮಿಕಾ ತಿರಸ್ಕರಿಸುತ್ತಿದ್ದಾರೆ. ಈಗಾಗಲೇ ಒಪ್ಪಿಕೊಂಡಿದ್ದ ಕೆಲ ಚಿತ್ರಗಳನ್ನೂ ಬೇರೆ ಬೇರೆ ಕಾರಣಗಳ ನೆಪವೊಡ್ಡಿ ಕ್ಯಾನ್ಸಲ್‌ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಕನ್ನಡದ ಬಗ್ಗೆ ಯಾಕೆ ಈ ಧೋರಣೆ?: ಕನ್ನಡದಿಂದಲೇ ನಟಿಯಾಗಿ ಹೋಗಿ ಟಾಲಿವುಡ್‌ನ‌ಲ್ಲಿ ಮಿಂಚುತ್ತಿರುವ ರಶ್ಮಿಕಾ, ಕನ್ನಡದ ಬಗ್ಗೆ ತೋರುತ್ತಿರುವ ಧೋರಣೆ ಸರಿಯಲ್ಲ ಎನ್ನುವುದು ಒಕ್ಕೊರಲ ಅಭಿಪ್ರಾಯ. ಕರ್ನಾಟಕದಲ್ಲಿ ಇರುವಾಗಲೂ ಅದರಲ್ಲೂ ಕನ್ನಡದ ಮಾಧ್ಯಮಗಳ ಮುಂದೆ ಬಂದಾಗಲೂ ಉದ್ದೇಶ ಪೂರ್ವಕವಾಗಿಯೇ ಇಂಗ್ಲೀಷ್‌ ಮತ್ತು ತೆಲುಗಿನಲ್ಲಿಯೇ ಮಾತನಾಡುತ್ತಾರೆ. ಇತ್ತೀಚೆಗೆ “ಡಿಯರ್‌ ಕಾಮ್ರೆಡ್‌’ ಚಿತ್ರದ ಪ್ರಚಾರಕ್ಕೆ ನಟ ವಿಜಯ್‌ ದೇವರಕೊಂಡ ಜತೆಗೆ ಬೆಂಗಳೂರಿಗೆ ಬಂದಾಗಲೂ ಇದೇ ಪುನಾರಾವರ್ತನೆ ಆಯಿತು.

“ಡಿಯರ್‌ ಕಾಮ್ರೆಡ್‌’ ಚಿತ್ರದ ಕನ್ನಡದ ಅವತರಣಿಕೆಗೆ ನಾನೇ ವಾಯ್ಸ್ ಡಬ್ಬಿಂಗ್‌ ಮಾಡಿದ್ದೇನೆ. ಇದು ತಮಗೆ ಸಾಕಷ್ಟು ಖುಷಿ ತಂದಿದೆ ಎಂಬುದಾಗಿ ಸಂತೋಷಪಟ್ಟರೂ, ಅವರು ಅಲ್ಲಿ ಮಾತನಾಡಿದ್ದು ಮಾತ್ರ ಇಂಗ್ಲಿಷ್‌ ಮಿಶ್ರಿತ ಕಂಗ್ಲೀಷ್‌ನಲ್ಲಿ! ಅದರಲ್ಲೂ ತೆಲುಗು ಪದಗಳೇ ಹೆಚ್ಚಿದ್ದವು. ಪತ್ರಿಕಾಗೋಷ್ಠಿಯಲ್ಲಿನ ಅವರು ಮಾತುಗಳಿನ್ನು ಕೇಳಿದ್ದ ಸಿನಿ ಪ್ರೇಕ್ಷಕರು ಸೋಶಿಯಲ್‌ ಮೀಡಿಯಾದಲ್ಲಿ ಬೇಸರ ವ್ಯಕ್ತಪಡಿಸಿದ್ದರು. ಅದರ ಹಿಂದೆಯೇ ರಶ್ಮಿಕಾ ಈಗ ತಮಿಳಿನಲ್ಲಿ ನೀಡಿರುವ ಹೇಳಿಕೆ ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಗಿದ್ದು, ಕನ್ನಡದ ಸಿನಿ ಪ್ರೇಕ್ಷಕರ ಆಕ್ರೋಶ ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ.

ರಶ್ಮಿಕಾ ಮಂದಣ್ಣ ವಿರುದ್ಧ ಮಂಡಳಿಗೆ ದೂರು: “ಕನ್ನಡ ನನಗೆ ಬಲು ಕಷ್ಟ. ಕನ್ನಡ ಮಾತನಾಡಲು ಬರುವುದಿಲ್ಲ’ ಎಂದಿದ್ದ ಕಿರಿಕ್‌ ಹುಡುಗಿ ರಶ್ಮಿಕಾ ಮಂದಣ್ಣ ವಿರುದ್ಧ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಲಾಗಿದೆ. ಕೆಲ ದಿನಗಳ ಹಿಂದೆ ಪರಭಾಷೆಯ ವಾಹಿನಿಯ ಸಂದರ್ಶನದಲ್ಲಿ, ನಟಿ ರಶ್ಮಿಕಾ ಮಂದಣ್ಣ ಸುಳ್ಳು ಹೇಳಿಕೆ ನೀಡಿದ್ದಾರೆ. ಅದ್ದರಿಂದ ರಶ್ಮಿಕಾ ಸಿನಿಮಾಗಳನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಬಿಡಬಾರದು.

ಕನ್ನಡದಿಂದಲೇ ಬೆಳೆದು, ಕನ್ನಡವನ್ನು ತಾತ್ಸಾರದಿಂದ ನೋಡುವ ಇಂತಹ ನಟಿಯರಿಗೆ ಇದು ಪಾಠವಾಗಬೇಕು ಎಂದು ಕನ್ನಡ ಪರ ಹೋರಾಟಗಾರರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಾರೆ. ದೂರು ಸ್ವೀಕರಿಸಿರುವ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್‌, “ರಶ್ಮಿಕಾ ಮಂದಣ್ಣ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಚೇಂಬರ್‌ಗೆ ದೂರು ನೀಡಿದ್ದಾರೆ. ಈ ಬಗ್ಗೆ ಶೀಘ್ರದಲ್ಲಿಯೇ ರಶ್ಮಿಕಾ ಅವರನ್ನು ಕರೆದು ಮಾತನಾಡಲಾಗುವುದು. ಅವರ ಹೇಳಿಕೆ, ನಿಲುವುಗಳ ಪರಾಮರ್ಶೆಯ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು’ ಎಂದಿದ್ದಾರೆ.

ಟಾಪ್ ನ್ಯೂಸ್

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.