ಪುಷ್ಪ ಸಕ್ಸಸ್‌ ಎಫೆಕ್ಟ್; ರಶ್ಮಿಕಾ ಮಂದಣ್ಣ ಸಂಭಾವನೆ ಏರಿಕೆ!


Team Udayavani, Jan 11, 2022, 11:35 AM IST

Rashmika mandanna has hikes her fees After success of Pushpa

ಸಾಮಾನ್ಯವಾಗಿ ಒಂದು ಸಿನಿಮಾ ಬಾಕ್ಸಾಫೀಸ್‌ನಲ್ಲಿ ಹಿಟ್‌ ಆಗುತ್ತಿದ್ದಂತೆ, ಆ ಸಿನಿಮಾದ ಸ್ಟಾರ್, ಡೈರೆಕ್ಟರ್‌ ಮತ್ತು ತಂತ್ರಜ್ಞರ ಸಂಭಾವನೆಯಲ್ಲೂ ಏರಿಕೆಯಾಗುವುದು ಚಿತ್ರರಂಗದಲ್ಲಿ ಸಹಜ. ಆದರೆ ಕಳೆದ ಎರಡು ವರ್ಷಗಳಿಂದ ಕೋವಿಡ್‌ ಭಯ, ಲಾಕ್‌ಡೌನ್‌ ಆತಂಕ ಮತ್ತಿತರ ಕಾರಣಗಳಿಂದ ಚಿತ್ರರಂಗದ ಬೆಳವಣಿಗೆಯ ಗ್ರಾಫ್ ಕೂಡ ಇಳಿಕೆಯಾಗಿದೆ. ಅಂದುಕೊಂಡಂತೆ ಸಿನಿಮಾಗಳು ನಿಗಧಿತ ಸಮಯಕ್ಕೆ ಬಿಡುಗಡೆಯಾಗಿ ತೆರೆಗೆ ಬರಲು ಸಾಧ್ಯವಾಗದಿದ್ದರಿಂದ, ಸಿನಿಮಾದ ಬಜೆಟ್‌ ಏರಿಕೆಯಾಗುತ್ತಿದೆ. ಹೀಗಾಗಿ ಬಹುತೇಕ ಸ್ಟಾರ್ ಹೀರೋ -ಹೀರೋಯಿನ್‌ಗಳು, ನಿರ್ದೇಶಕರು, ತಂತ್ರಜ್ಞರ ಸಂಭಾವನೆ ಕಳೆದ ಎರಡು ವರ್ಷಗಳಿಂದ ಏರಿಕೆ ಕಂಡಿಲ್ಲ. ಆದರೆ ಇದೆಲ್ಲದರ ನಡುವೆಯೂ ಕೆಲವು ಸ್ಟಾರ್‌ ಹೀರೋ – ಹೀರೋಯಿನ್ಸ್‌ ಹಿಟ್‌ ಸಿನಿಮಾಗಳನ್ನು ನೀಡುವ ಮೂಲಕ ತಮ್ಮ ಸಂಭಾವನೆಯನ್ನು ಏರಿಸಿಕೊಂಡಿದ್ದಾರೆ.

ಹೀಗೆ ಇತ್ತೀಚೆಗೆ ದಿಢೀರ್‌ ಸಂಭಾವನೆ ಏರಿಸಿಕೊಂಡ ಸ್ಟಾರ್‌ ಹೀರೋಯಿನ್ಸ್‌ ಪೈಕಿ ಸದ್ಯಕ್ಕೆ ಮೊದಲು ಕೇಳಿಬರುತ್ತಿರುವ ಹೆಸರು ರಶ್ಮಿಕಾ ಮಂದಣ್ಣ ಅವರದ್ದು. ಹೌದು, ಇತ್ತೀಚೆಗಷ್ಟೇ ರಶ್ಮಿಕಾ ಮಂದಣ್ಣ ಅಭಿನಯದ “ಪುಷ್ಪ’ ಸಿನಿಮಾ ತೆಲುಗು, ಕನ್ನಡ, ತಮಿಳು ಸೇರಿದಂತರೆ ಹಲವು ಭಾಷೆಗಳಲ್ಲಿ ಬಿಡುಗಡೆಯಾಗಿದ್ದು, ಸಿನಿಮಾ ತೆರೆಕಂಡ ಮೂರೇ ವಾರಗಳಲ್ಲಿ 300 ಕೋಟಿಗೂ ಹೆಚ್ಚು ಕಲೆಕ್ಷನ್‌ ಮಾಡಿದೆ ಎನ್ನಲಾಗುತ್ತಿದೆ. ಇದಲ್ಲದೆ ಒಟಿಟಿಯಲ್ಲಿಯೂ “ಪುಷ್ಪ’ಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.

“ಪುಷ್ಪ’ ಸಿನಿಮಾಕ್ಕೆ ಇಂಥದ್ದೊಂದು ಬಿಗ್‌ ರೆಸ್ಪಾನ್ಸ್‌ ಸಿಗುತ್ತಿದ್ದಂತೆ, ಅದರ ಹೀರೋಯಿನ್‌ ರಶ್ಮಿಕಾ ಮಂದಣ್ಣ ಅವರ ಸಂಭಾವನೆಯಲ್ಲೂ ಹೆಚ್ಚಳವಾಗಿದೆ ಎನ್ನುತ್ತಿವೆ ಚಿತ್ರೋದ್ಯಮದ ಮೂಲಗಳು.

ಈಗಾಗಲೇ “ಪುಷ್ಪ’ ಸಿನಿಮಾದ ಮೊದಲ ಭಾಗಕ್ಕೆ ಸುಮಾರು ಎರಡು ಕೋಟಿ ಸಂಭಾವನೆಯನ್ನು ಪಡೆದುಕೊಂಡಿರುವ ರಶ್ಮಿಕಾ ಮಂದಣ್ಣ, ಅದರ ಎರಡನೇ ಭಾಗಕ್ಕೆ ಬರೋಬ್ಬರಿ 3 ಕೋಟಿ ಸಂಭಾವನೆಗೆ ಬೇಡಿಕೆ ಇಟ್ಟಿದ್ದಾರೆ ಎನ್ನುತ್ತಿವೆ ತೆಲುಗು ಚಿತ್ರರಂಗದ ಮೂಲಗಳು.

ಇದನ್ನೂ ಓದಿ:ಹೊಸಬರಿಗೆ ಮತ್ತೆ ಸಂಕಷ್ಟ: ರಿಲೀಸ್‌ ಮಾಡೋದೇ ಸವಾಲು

ಇನ್ನು ಇಷ್ಟೊಂದು ದೊಡ್ಡ ಮೊತ್ತದ ಸಂಭಾವನೆಯನ್ನು ಕೇಳುತ್ತಿರುವುದಕ್ಕೆ ಕಾರಣವಾಗಿರುವ ಅಂಶಗಳನ್ನೂ ರಶ್ಮಿಕಾ ಮಂದಣ್ಣ ನೀಡುತ್ತಿದ್ದಾರಂತೆ. ಸದ್ಯದ ಮಟ್ಟಿಗೆ ಅತಿ ಕಡಿಮೆ ಅವಧಿಯಲ್ಲಿ ಬ್ಯಾಕ್‌ ಟು ಬ್ಯಾಕ್‌ ಸೂಪರ್‌ ಹಿಟ್‌ ಸಿನಿಮಾಗಳನ್ನು ನೀಡಿರುವ ನಾಯಕಿಯರ ಪೈಕಿ ರಶ್ಮಿಕಾ ಹೆಸರು ಮೊದಲಿಗಿದೆ. ಕಳೆದ ನಾಲ್ಕೈದು ವರ್ಷಗಳಲ್ಲಿ ರಶ್ಮಿಕಾ ಅಭಿನಯಿಸಿರುವ ಕನ್ನಡ, ತೆಲುಗು, ತಮಿಳಿನ ಬಹುತೇಕ ಎಲ್ಲ ಸಿನಿಮಾಗಳೂ ಸೂಪರ್‌ ಹಿಟ್‌ ಆಗಿವೆ. ಸದ್ಯ ಎರಡು ಬಾಲಿವುಡ್‌ ಸಿನಿಮಾಗಳಲ್ಲೂ ಅಭಿನಯಿಸುತ್ತಿರುವುದು ರಶ್ಮಿಕಾ ಸಂಭಾವನೆ ಏರಿಕೆಗೆ ಕಾರಣ ಎನ್ನಲಾಗುತ್ತಿದೆ.

ಇನ್ನು ಕನ್ನಡದ ಮಟ್ಟಿಗೆ ರಶ್ಮಿಕಾ ಮಂದಣ್ಣ ಅವರ ಡಿಮ್ಯಾಂಡ್‌ನ‌ಂತೆ ಇಷ್ಟೊಂದು ದೊಡ್ಡ ಮೊತ್ತದ ಸಂಭಾ ವನೆ ಸಿಗುವುದು ಸದ್ಯದ ಮಟ್ಟಿಗೆ ದೂರದ ಮಾತು. ಕನ್ನಡ ಚಿತ್ರರಂಗದ ಮೂಲಗಳ ಪ್ರಕಾರ ಇಲ್ಲಿಯವರೆಗೆ ಯಾವ ಹೀರೋಯಿನ್‌ಗಳ ಸಂಭಾ ವನೆ ಕೂಡ 50 ಲಕ್ಷದ ಗಡಿ ದಾಟಿಲ್ಲ. ಹೀಗಿರುವಾಗ ರಶ್ಮಿಕಾ ಅವರನ್ನ ಮುಂದಿನ ದಿನಗಳಲ್ಲಿ ಅವರು ಕೇಳಿದಷ್ಟು ಸಂಭಾವನೆ ಕೊಟ್ಟು ಕನ್ನಡಕ್ಕೆ ಕರೆತರುವುದು ದೂರ ದ ಮಾತು ಅನ್ನೋದು ಗಾಂಧಿ ನಗರದ ಮಂದಿಯ ಅಭಿಪ್ರಾಯ.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.