ರವಿ-ಉಪ್ಪಿ ಸಿನಿಮಾಕ್ಕೆ ಮುಹೂರ್ತ ಫಿಕ್ಸ್‌


Team Udayavani, Jul 24, 2018, 11:06 AM IST

crazy-uppi.jpg

ನಿರ್ದೇಶಕ ಓಂ ಪ್ರಕಾಶ್‌ ರಾವ್‌ ಹೊಸ ಸಿನಿಮಾ ಮಾಡುತ್ತಿದ್ದು, ರವಿಚಂದ್ರನ್‌ ಹಾಗೂ ಉಪೇಂದ್ರ ಈ ಸಿನಿಮಾದಲ್ಲಿ ನಟಿಸಲಿದ್ದಾರೆಂಬ ಸುದ್ದಿ ಕೆಲ ದಿನಗಳಿಂದ ಓಡಾಡುತ್ತಲೇ ಇತ್ತು. ಈಗ ಬಹುತೇಕ ಪಕ್ಕಾ ಎಲ್ಲವೂ ಪಕ್ಕಾ ಆಗಿದೆ. ಆಗಸ್ಟ್‌ 11 ರಂದು ಚಿತ್ರದ ಫೋಟೋಶೂಟ್‌ ನಡೆಯಲಿದ್ದು, 20ಕ್ಕೆ ಚಿತ್ರ ಸೆಟ್ಟೇರಲಿದೆ.

ನಿರ್ದೇಶಕ ಓಂ ಪ್ರಕಾಶ್‌ ರಾವ್‌ ಹೇಳುವಂತೆ, ಕಥೆ ತುಂಬಾ ವಿಭಿನ್ನವಾಗಿದ್ದು, ಇಬ್ಬರ ಪಾತ್ರಗಳು ಹೊಸತನದಿಂದ ಕೂಡಿದೆಯರಲಿದೆಯಂತೆ. ಜೊತೆಗೆ ಸಿನಿಮಾ ಕೂಡಾ ಅದ್ಧೂರಿಯಾಗಿ ಮೂಡಿಬರಲಿದೆ ಎನ್ನುತ್ತಾರೆ ಓಂ ಪ್ರಕಾಶ್‌ ರಾವ್‌. ಈ ಚಿತ್ರದಲ್ಲಿ ಇಬ್ಬರು ನಾಯಕಿಯರಿದ್ದು, ನಿಮಿಕಾ ರತ್ನಾಕರ್‌ ಈಗಾಗಲೇ ಆಯ್ಕೆಯಾಗಿದ್ದಾರೆ.

ನಿಮಿಕಾ, ಉಪೇಂದ್ರ ಅವರ ಜೋಡಿಯಾಗಿ ನಟಿಸಲಿದ್ದಾರೆ. ಈ ಹಿಂದೆ “ರಾಮಧಾನ್ಯ’ ಚಿತ್ರದಲ್ಲಿ ನಿಮಿಕಾ ನಾಯಕಿಯಾಗಿದ್ದರು. ಈ ಚಿತ್ರವನ್ನು ಆರ್‌.ಎಸ್‌.ಪ್ರೊಡಕ್ಷನ್ಸ್‌ನಡಿ ಕನಕಪುರ ಶ್ರೀನಿವಾಸ್‌ ನಿರ್ಮಿಸುತ್ತಿದ್ದಾರೆ. ಎಲ್ಲಾ ಓಕೆ, ಈ ಚಿತ್ರಕ್ಕೆ ಟೈಟಲ್‌ ಏನಾಗಬಹುದೆಂಬ ಕುತೂಹಲ ಸಹಜವಾಗಿಯೇ ಇದೆ.

ಈ ಬಗ್ಗೆ ಮಾತನಾಡುವ ನಿರ್ಮಾಪಕ ಕನಕಪುರ ಶ್ರೀನಿವಾಸ್‌, “ಚಿತ್ರಕ್ಕೆ ಇನ್ನೂ ಟೈಟಲ್‌ ಅಂತಿಮವಾಗಿಲ್ಲ. “ರವಿ-ಚಂದ್ರ’, “ದಿಲ್‌ ಉಪೇಂದ್ರ’ ಸೇರಿದಂತೆ ಒಂದಷ್ಟು ಟೈಟಲ್‌ ಅಂದುಕೊಂಡಿದ್ದೇವೆ. ಸದ್ಯದಲ್ಲೇ ಒಂದು ಟೈಟಲ್‌ ಫೈನಲ್‌ ಮಾಡುತ್ತೇವೆ’ ಎನ್ನುತ್ತಾರೆ ಶ್ರೀನಿವಾಸ್‌. ಚಿತ್ರಕ್ಕೆ ಅರ್ಜುನ್‌ ಜನ್ಯಾ ಸಂಗೀತ, ರವಿಕುಮಾರ್‌ ಛಾಯಾಗ್ರಹಣ, ಶ್ರೀಕಾಂತ್‌ ಸಂಕಲನವಿದ್ದು, ಮೂರು ಹಂತಗಳಲ್ಲಿ ಚಿತ್ರೀಕರಣ ನಡೆಯಲಿದೆಯಂತೆ. 

ನವೆಂಬರ್‌ ಮುಂದುವರೆಯುತ್ತದೆ: ಕನಕಪುರ ಶ್ರೀನಿವಾಸ್‌ ಅವರ ನಿರ್ಮಾಣದಲ್ಲಿ ರವಿಚಂದ್ರನ್‌ ಅವರ ಎರಡನೇ ಪುತ್ರ ವಿಕ್ರಮ್‌ ನಾಯಕರಾಗಿ “ನವೆಂಬರ್‌ನಲ್ಲಿ ನಾನು ಅವಳು’ ಚಿತ್ರವನ್ನು ನಿರ್ದೇಶಕ ನಾಗಶೇಖರ್‌ ಆರಂಭಿಸಿದ್ದರು. ಚಿತ್ರದ ಟೀಸರ್‌ ಕೂಡಾ ಬಿಡುಗಡೆಯಾಗಿತ್ತು. ಆದರೆ, ಆ ನಂತರ ಚಿತ್ರ ಮುಂದುವರೆಯಲಿಲ್ಲ.

ಇತ್ತ ಕಡೆ ನಾಗಶೇಖರ್‌ ಅಭಿಷೇಕ್‌ ಅಂಬರೀಶ್‌ ಅವರ “ಅಮರ್‌’ ಚಿತ್ರದಲ್ಲಿ ಬಿಝಿಯಾಗಿದ್ದಾರೆ. ಹಾಗಾದರೆ “ನವೆಂಬರ್‌ನಲ್ಲಿ ನಾನು ಅವಳು’ ಮುಂದುವರೆಯೋದಿಲ್ವಾ, ಚಿತ್ರ ನಿಲ್ಲಲು ಕಾರಣವೇನು ಎಂಬ ಪ್ರಶ್ನೆ ಸಹಜವಾಗಿಯೇ ಬರುತ್ತದೆ. ಇದಕ್ಕೆ ಉತ್ತರಿಸುವ ಕನಕಪುರ ಶ್ರೀನಿವಾಸ್‌, “ಖಂಡಿತಾ ಆ ಚಿತ್ರವನ್ನು ಮಾಡಿಯೇ ಮಾಡುತ್ತೇನೆ. ನಿರ್ದೇಶಕರು ನಮಗೆ ಹೇಳಿದ ಕಥೆಗೂ ಅವರು ಮಾಡಿಕೊಂಡು ಕಥೆಗೂ ಒಂದಷ್ಟು ಬದಲಾವಣೆ ಇತ್ತು.

ಹಾಗಾಗಿ, ಆ ಸಿನಿಮಾವನ್ನು ನಿಲ್ಲಿಸಿದ್ದೇನೆ. ದುಡ್ಡು ಹಾಕುವ ನಿರ್ಮಾಪಕನಿಗೆ ಕಥೆ ಇಷ್ಟವಾಗಬೇಕಲ್ಲ ಸ್ವಾಮಿ’ ಎನ್ನುತ್ತಾರೆ ಅವರು. ಈ ನಡುವೆಯೇ ಶ್ರೀನಿವಾಸ್‌ ಅವರು, ಚೇತನ್‌ ಹಾಗೂ ಚಿರಂಜೀವಿ ಸರ್ಜಾ ನಾಯಕರಾಗಿರುವ “ರಣಂ’ ಚಿತ್ರವನ್ನು ಆರಂಭಿಸಿದ್ದು, ಈಗಾಗಲೇ ಬಹುತೇಕ ಚಿತ್ರೀಕರಣವಾಗಿದೆಯಂತೆ. ಈ ಚಿತ್ರಕ್ಕೆ ಸ್ಟಾರ್‌ ನಟನೊಬ್ಬ ಗೆಸ್ಟ್‌ ಅಪಿಯರೆನ್ಸ್‌ ಮಾಡಬೇಕಾಗಿದ್ದು, ಆ ಬಗ್ಗೆ ಮಾತುಕತೆ ನಡೆಯುತ್ತಿದೆಯಂತೆ. 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.