Kannada Cinema; ‘ಪರವಶ’ನಾದ ರವಿಚಂದ್ರನ್; ಸೋನಾಲ್ ಮೊಂತೆರೋ ನಾಯಕಿ
Team Udayavani, Mar 4, 2024, 4:42 PM IST
ನಟ ರವಿಚಂದ್ರನ್ “ಪರವಶ’ ಎಂಬ ಸಿನಿಮಾವೊಂದರಲ್ಲಿ ನಟಿಸುತ್ತಿದ್ದು, ಇತ್ತೀಚೆಗೆ ಆ ಚಿತ್ರದ ಟೈಟಲ್ ಹಾಗೂ ಪೋಸ್ಟರ್ ಬಿಡುಗಡೆಯಾಗಿದೆ. ಈ ಚಿತ್ರದಲ್ಲಿ ರಘು ಭಟ್ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಅವ್ಯಕ್ತ ಸಿನಿಮಾಸ್ ಲಾಂಛನದಲ್ಲಿ ಹರೀಶ್ ಗೌಡ ಅವರು ನಿರ್ಮಿಸುತ್ತಿರುವ ಈ ಚಿತ್ರವನ್ನು ಸುಧೀಂದ್ರ ಅವರು ನಿರ್ದೇಶಿಸುತ್ತಿದ್ದಾರೆ.
“ಹೊಸತಂಡದ ಜೊತೆಗೆ ಕೆಲಸ ಮಾಡಿರುವುದು ಖುಷಿಯಾಗಿದೆ. ನಾನು ಈತನಕ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಂಡಿದ್ದೀನಿ. ನನ್ನ ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ನಿರ್ದೇಶಕ ಸುಧೀಂದ್ರ ನಾಡಿಗರ್ ಅವರ ನಿರ್ದೇಶನದ ಶೈಲಿ ವಿನೂತನವಾಗಿದೆ. ನಿರ್ಮಾಪಕರಿಗೆ ಹಾಗೂ ಇಡೀ ತಂಡಕ್ಕೆ ಒಳ್ಳೆಯದಾಗಲಿ’ ಎಂದರು ರವಿಚಂದ್ರನ್.
ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಈಗಾಗಲೇ ನಲವತ್ತು ದಿನಗಳ ಚಿತ್ರೀಕರಣ ಮುಕ್ತಾಯವಾಗಿದೆ. ಕೆಲವು ದಿನಗಳ ಚಿತ್ರೀಕರಣ ಮಾತ್ರ ಬಾಕಿಯಿದೆ. ಮಂಗಳೂರು, ಉಡುಪಿ, ಮಣಿಪಾಲ ಹಾಗೂ ಕುಂದಾಪುರದಲ್ಲಿ ಚಿತ್ರೀಕರ ವಾಗಿದೆ. ರವಿಚಂದ್ರನ್, ರಘು ಭಟ್, ಸೋನಾಲ್ ಮೊಂತೆರೋ, ಪವಿತ್ರ ಲೋಕೇಶ್, ರಾಜೇಶ್ ನಟರಂಗ, ಸುಜಯ್ ಶಾಸ್ತ್ರಿ, ಅನನ್ಯ ಮುಂತಾದವರು ತಾರಾಬಳಗದಲ್ಲಿದ್ದಾರೆ.
ನಾಯಕ ರಘು ಭಟ್ ಪರವಶ ಚಿತ್ರಕ್ಕೆ ಕಥೆ ಬರೆದಿದ್ದಾರೆ. ಸಚಿನ್ ಬಸ್ರೂರ್ ಸಂಗೀತ ನಿರ್ದೇಶನ, ಆನಂದ್ ಮೀನಾಕ್ಷಿ ಛಾಯಾಗ್ರಹಣ ಹಾಗೂ ಪ್ರತೀಕ್ ಶೆಟ್ಟಿ ಅವರ ಸಂಕಲನವಿರುವ ಈ ಚಿತ್ರದ ಹಾಡುಗಳನ್ನು ಪ್ರಮೋದ್ ಮರವಂತೆ ರಚಿಸಿದ್ದಾರೆ. ಸಂಭಾಷಣೆಯನ್ನು ರಘು ನಿಡವಳ್ಳಿ ಬರೆದಿದ್ದಾರೆ.
“ನಮ್ಮೂರಿನಲ್ಲಿ ನಾನು ನಿರ್ಮಿಸುತ್ತಿರುವ ಪರವಶ ಚಿತ್ರದ ಶೀರ್ಷಿಕೆ ಬಿಡುಗಡೆಯಾಗಿರುವುದು ಖುಷಿಯಾಗಿದೆ’ ಎಂದರು ನಿರ್ಮಾಪಕ ಹರೀಶ್ ಗೌಡ.
ಥ್ರಿಲ್ಲರ್, ಕೌಟುಂಬಿಕ ಹಾಗೂ ಪ್ರೇಮ ಕಥಾಹಂದರವುಳ್ಳ ಪರವಶ ಚಿತ್ರದಲ್ಲಿ ಜನರಿಗೆ ಬೇಕಾದ ಎಲ್ಲಾ ಅಂಶಗಳು ಇದೆ. ಒಟ್ಟಿನಲ್ಲಿ ಪ್ರೇಕ್ಷಕ ಕೊಟ್ಟ ದುಡ್ಡಿಗೆ ದುಪ್ಪಟ್ಟು ಮನರಂಜನೆ ನೀಡುವ ಚಿತ್ರವಿದು. ಸಚಿನ್ ಬಸೂÅರ್ ಸಂಗೀತ ನೀಡಿರುವ ಚಿತ್ರದ ಹಾಡುಗಳು ಕೂಡ ಮುದ ನೀಡುತ್ತದೆ’ ಎನ್ನುವುದು ರಘು ಭಟ್ ಮಾತು.
ನಾಯಕಿ ಸೋನಾಲ್ ಮೊಂತೆರೋ ಕೂಡಾ ಸಿನಿಮಾ ಬಗ್ಗೆ ಮಾತನಾಡಿದರು. ಕಲಾವಿದರಾದ ರಾಜೇಶ್ ನಟರಂಗ, ಸುಜಯ್ ಶಾಸ್ತ್ರಿ, ಅನನ್ಯ ಹಾಗೂ ಛಾಯಾ ಗ್ರಾಹಕ ಆನಂದ್ ಮೀನಾಕ್ಷಿ ಚಿತ್ರತಂಡದ ಅನೇಕ ಸದಸ್ಯರು ಶೀರ್ಷಿಕೆ ಬಿಡುಗಡೆ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..
Sandalwood: ಬಿಸಿಲ ಧಗೆ ಎಫೆಕ್ಟ್; ಔಟ್ಡೋರ್ ಶೂಟಿಂಗ್ನಿಂದ ಸಿನಿಮಂದಿ ದೂರ
Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
MUST WATCH
ಹೊಸ ಸೇರ್ಪಡೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ