ಸಿನಿಮಾ ಬಿಡುಗಡೆ ಕುರಿತು ರವಿಚಂದ್ರನ್‌ ಹೊಸ ಪ್ಲ್ಯಾನ್‌

ಎಲ್ಲಾ ಚಿತ್ರ ಮಂದಿರಗಳಲ್ಲೂ ಮೊದಲು ತೆರೆಕಾಣುವ ಚಿತ್ರವಷ್ಟೇಪ್ರದರ್ಶನ ಕಾಣಲಿ...

Team Udayavani, Oct 28, 2020, 12:16 PM IST

CINEMA-TDY1

“ದರ್ಶನ್‌ ನಟನೆಯ “ರಾಬರ್ಟ್‌’ ಚಿತ್ರವನ್ನು ರಿಲೀಸ್‌ ಮಾಡಿದರೆ ಕರ್ನಾಟಕದ ಎಲ್ಲಾ ಚಿತ್ರಮಂದಿರಗಳಲ್ಲೂ ಅದೊಂದೇ ಸಿನಿಮಾ ಪ್ರದರ್ಶನ ಕಾಣಬೇಕು. ಅದರ ಜೊತೆ ಬೇರೆ ಯಾವ ಸಿನಿಮಾವೂ ಬರಬಾರದು. “ರಾಬರ್ಟ್‌’ ರಿಲೀಸ್‌ ಮಾಡದಿದ್ದರೆ ನಾನು ನನ್ನ ಸಿನಿಮಾ ರಿಲೀಸ್‌ ಮಾಡುತ್ತೇನೆ… ಆಗಲೂ ಅಷ್ಟೇ … ಎಲ್ಲಾ ಚಿತ್ರಮಂದಿರಗಳಲ್ಲೂ ನಂದೊಂದೇ ಸಿನಿಮಾ ಇರಲು ಅವಕಾಶ ಮಾಡಿಕೊಡಬೇಕು …’- ಹೀಗೆ ನೇರವಾಗಿ ಹೇಳಿದರು ಕ್ರೇಜಿಸ್ಟಾರ್‌ ರವಿಚಂದ್ರನ್‌.

ಅವರ ಮಾತುಗಳೇ ಹಾಗೆ, ಏನೇ ಇದ್ದರೂ ಮನಸ್ಸಿನಿಂದ ನೇರವಾಗಿ ಮಾತನಾಡುತ್ತಾರೆ. ಈ ಬಾರಿಯೂ ಅದೇ ರೀತಿ ಮಾತನಾಡಿದರು. ಕೋವಿಡ್ ಲಾಕ್‌ಡೌನ್‌ ತೆರವಾಗಿ ಚಿತ್ರಮಂದಿರಗಳು ಓಪನ್‌ ಆಗಿವೆ. ಸಿನಿಮಾಗಳು ಮರುಬಿಡುಗಡೆಯಾಗುತ್ತಿವೆ. ಆದರೆ, ರವಿಚಂದ್ರನ್‌ ಅವರ ಪ್ರಕಾರ, ಸಿನಿಮಾಗಳ ಮರುಬಿಡುಗಡೆಯಿಂದ ಯಾವುದೇ ಪ್ರಯೋಜನವಿಲ್ಲ. ಅದರ ಬದಲು ಯಾವುದಾದರೂ ಹೊಸ ಸಿನಿಮಾ ಬಿಡುಗಡೆಯಾಗಬೇಕು. ಅದರಲ್ಲೂ ಸ್ಟಾರ್‌ಗಳ, ಮಾಸ್‌ ಆಡಿಯನ್ಸ್‌ ಸೆಳೆಯುವ ನಟನ ಸಿನಿಮಾ ರಿಲೀಸ್‌ ಆದರೆ ಜನ ಚಿತ್ರಮಂದಿರಕ್ಕೆ ಬರುತ್ತಾರೆ. ಸದ್ಯಕ್ಕೆ ದರ್ಶನ್‌ ಅವರ “ರಾಬರ್ಟ್‌’ ರಿಲೀಸ್‌ಗೆ ರೆಡಿ ಇದೆ. ದರ್ಶನ್‌ಗೆ ದೊಡ್ಡ ಅಭಿಮಾನಿ ವರ್ಗವಿದೆ.

ಹಾಗಾಗಿ, ಆ ಚಿತ್ರ ಬಿಡುಗಡೆಯಾಗಲಿ ಎನ್ನುವುದು ರವಿಚಂದ್ರನ್‌ ಮಾತು. “ಜನರಲ್ಲಿ ಈಗ ಕೊರೊನಾ ಭಯವಿಲ್ಲ. ಸಿನಿಮಾ ಬಿಡುಗಡೆಯಾದರೆ ಚಿತ್ರಮಂದಿರಕ್ಕೆ ಬರುತ್ತಾರೆ. ಇವತ್ತಿಗೆ ಜನರನ್ನು ಸೆಳೆಯುವಂತಹ ಸ್ಟಾರ್‌ ಸಿನಿಮಾ ರಿಲೀಸ್‌ ಆಗಬೇಕು. ದರ್ಶನ್‌, “ರಾಬರ್ಟ್‌’ನಂತಹ ಚಿತ್ರಗಳು ಬರಬೇಕು. ಆದರೆ, ಆ ಚಿತ್ರಗಳ ಜೊತೆ ಬೇರೆ ಯಾವ ಚಿತ್ರವೂ ಬರಬಾರದು. ಕರ್ನಾಟಕದ ಅಷ್ಟೂ ಚಿತ್ರಮಂದಿರಗಳಲ್ಲಿ ಆ ಚಿತ್ರ ಮಾತ್ರ ಪ್ರದರ್ಶನ ಕಾಣಬೇಕು. “ರಾಬರ್ಟ್‌’ ಬರದಿದ್ದರೆ, ನಾನು “ರವಿ ಬೋಪಣ್ಣ’ ರಿಲೀಸ್‌ ಮಾಡುತ್ತೇನೆ. ಆಗಲೂ ಅಷ್ಟೇ, ನನ್ನದೊಂದೇ ಚಿತ್ರ ರಿಲೀಸ್‌ ಆಗಬೇಕು. ಅಷ್ಟೂ ಚಿತ್ರಮಂದಿರಗಳಲ್ಲಿ ಅದೊಂದೇ ಪ್ರದರ್ಶನವಾಗಲಿ.

ಸರ್ಕಾರ ಸದ್ಯ ಶೇ 50ರಷ್ಟು ಪ್ರೇಕ್ಷಕರಿಗೆ ಅವಕಾಶ ಮಾಡಿಕೊಟ್ಟಿದೆ. ನನಗೆ ಆ ಬೇಸರವಿಲ್ಲ. 10 ಜನ ಬಂದರೂ ಪರಾವಗಿಲ್ಲ. ಆದರೆ, ಕರ್ನಾಟಕದ ಎಲ್ಲಾ ಚಿತ್ರಮಂದಿರಗಳಲ್ಲಿ ಒಂದೇ ಸಿನಿಮಾ ಪ್ರದರ್ಶನವಾಗಬೇಕು. ಇದಕ್ಕೆ ಅವಕಾಶ ಮಾಡಿಕೊಡುತ್ತಾರಾ’ ಎನ್ನುವುದು ರವಿಚಂದ್ರನ್‌ ಅವರ ಮಾತು. ಇದರ ಹಿಂದೆ ಸದುದ್ದೇಶವಿದೆ. ಯಾವ ಸಿನಿಮಾ ಬಿಡುಗಡೆಯಾಗುತ್ತದೋ, ಆ ಸಿನಿಮಾಕ್ಕೆ ಬೇರೆ ಸಿನಿಮಾಗಳು ತೊಂದರೆ ಮಾಡಿ, ನಿರ್ಮಾಪಕ ನಷ್ಟ ಅನುಭವಿಸಬಾರದು ಎನ್ನುವುದು ಅವರ ಕಾಳಜಿ. ಹಾಗಾಗಿ, ಮೊದಲು ಬಿಡುಗಡೆಯಾದ ಚಿತ್ರಕ್ಕೆ ಪ್ರೋತ್ಸಾಹ ನೀಡಬೇಕು ಎನ್ನುತ್ತಾರೆ ರವಿಚಂದ್ರನ್‌. ಇನ್ನು ಕ್ರೇಜಿಸ್ಟಾರ್‌ ರವಿಚಂದ್ರನ್‌ ಮತ್ತೆ ಶೂಟಿಂಗ್‌ ಮೂಡ್‌ಗೆ ಬಂದಿದ್ದಾರೆ.

ಕೋವಿಡ್ ಲಾಕ್‌ಡೌನ್‌ ತೆರವಾದ ಬಳಿಕ ಅವರ ಹೊಸ ಸಿನಿಮಾ “ಕನ್ನಡಿಗ’ ಮುಹೂರ್ತ ಸೋಮವಾರ ನಡೆದಿದೆ. ಚಿತ್ರ ವನ್ನು ಎನ್‌. ಎಸ್‌ ರಾಜ್‌ಕುಮಾರ್‌ ನಿರ್ಮಿಸುತ್ತಿದ್ದಾರೆ.

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.