ಬೆಂಕೋಶ್ರೀ ಪುತ್ರ ನಟನೆಗೆ ರೆಡಿ


Team Udayavani, Jan 24, 2019, 5:47 AM IST

benkoshree.jpg

ಸಾಮಾನ್ಯವಾಗಿ ಸಿನಿಮಾಗಳಲ್ಲಿ ನಾಯಕ ನಟನಾಗಬೇಕೆನ್ನುವವರು ಫೋಟೋಶೂಟ್‌ ಮಾಡಿಸುವುದು, ಫ್ಯಾಷನಿಂಗ್‌, ಮಾಡೆಲಿಂಗ್‌, ಆಡಿಷನ್‌, ಹೀಗೆ ಹತ್ತಾರು ಥರದ ಪ್ರಯತ್ನ ಮಾಡುವುದು ಸಹಜ. ಆ ಮೂಲಕ ಅಭಿನಯದ ಕಡೆಗಿರುವ ತಮ್ಮ ತುಡಿತ, ಆಸಕ್ತಿಯನ್ನು ಪ್ರದರ್ಶಿಸುವುದೂ ಸಾಮಾನ್ಯ. ಆದರೆ, ನಿರ್ಮಾಪಕ ಬಿ.ಕೆ ಶ್ರೀನಿವಾಸ್‌ (ಬೆಂಕೋಶ್ರೀ) ಮಾತ್ರ ಇದೆಲ್ಲದಕ್ಕಿಂತ ವಿಭಿನ್ನವಾಗಿ ತಮ್ಮ ಪುತ್ರ ಅಕ್ಷರ್‌ನನ್ನು ಮೊಟ್ಟ ಮೊದಲು ಕ್ಯಾಲೆಂಡರ್‌ ಮೂಲಕ ಸಿನಿಪ್ರಿಯರಿಗೆ ಪರಿಚಯಿಸುತ್ತಿದ್ದಾರೆ.

ಹೌದು, ಕನ್ನಡದಲ್ಲಿ ಈಗಾಗಲೇ ಆರು ಚಿತ್ರಗಳನ್ನು ನಿರ್ಮಿಸಿರುವ, ಹಲವು ಚಿತ್ರಗಳನ್ನು ಹಂಚಿಕೆ ಮಾಡಿರುವ ಬೆಂಕೋಶ್ರೀ, ತಮ್ಮ ಪುತ್ರ ಅಕ್ಷರ್‌ನನ್ನು ಪರಿಚಯಿಸುವ ಸಲುವಾಗಿ 12 ವಿಭಿನ್ನ ಗೆಟಪ್‌ಗ್ಳಿರುವ ಕ್ಯಾಲೆಂಡರ್‌ ಅನ್ನು ಬಿಡುಗಡೆಗೊಳಿಸಿದ್ದಾರೆ. ತಮ್ಮ ಪುತ್ರ ತೆರೆಮೇಲೆ ಮತ್ತು ಕ್ಯಾಮರಾ ಕಣ್ಣಲ್ಲಿ ಹೇಗೆ ಕಾಣುತ್ತಾನೆ ಎಂಬುದನ್ನು ನೋಡುವ ಸಲುವಾಗಿಯೇ ಬೆಂಕೋಶ್ರೀ ಇಂಥದ್ದೊಂದು ವಿಭಿನ್ನ ಪ್ರಯತ್ನಕ್ಕೆ ಕೈ ಹಾಕಿದ್ದಾರೆ.

ಇನ್ನು ಈ ಕ್ಯಾಲೆಂಡರ್‌ನಲ್ಲಿ ಪ್ರತಿ ತಿಂಗಳಿಗೊಂದರಂತೆ ಒಟ್ಟು ಹನ್ನೆರಡು ಪುಟಗಳಿದ್ದು, ಪ್ರತಿ ತಿಂಗಳ ಪುಟದಟಲ್ಲೂ ಅಕ್ಷರ್‌ ಒಂದೊಂದು ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದು, ಪ್ರತಿ ಪುಟಗಳು ಒಂದು ಪುಟ್ಟ ಕಥೆ ಹೇಳುವಂತೆ ಕ್ಯಾಲೆಂಡರ್‌ನ್ನು ವಿನ್ಯಾಸಗೊಳಿಸಿರುವುದು ವಿಶೇಷ. ಕ್ಯಾಲೆಂಡರ್‌ ಹೊರತಂದ ಖುಷಿಯಲ್ಲಿ ಮಾತನಾಡಿದ ಅಕ್ಷರ್‌, “ಕಲಾದನಾಗುವವನು ಎಲ್ಲಾ ಪಾತ್ರಕ್ಕೆ ಒಗ್ಗಿಕೊಳ್ಳುತ್ತಾನೆಂದು ತೋರಿಸುವ ಸಲುವಾಗಿ ಇದನ್ನು ಸಿದ್ದಪಡಿಸಲಾಗಿದೆ.

ಹಾಗಂತ ನಮ್ಮ ತಂದೆ ನಿರ್ಮಾಣ ಮಾಡುವ ಸಿನಿಮಾಕ್ಕೂ ಇದಕ್ಕೂ ಸಂಬಂಧವಿಲ್ಲ. ಸ್ವಯಂ ಪರಿಚಯಿಸಿಕೊಳ್ಳುವ ಸಲುವಾಗಿ ಈ ರೀತಿ ಮಾಡಬೇಕಾಯಿತು. ಇದಕ್ಕಾಗಿ ಐದು ತಿಂಗಳು ತಂಡದೊಂದಿಗೆ  ಶ್ರಮಿಸಿರುವುದಾಗಿ ಹೇಳುತ್ತಾರೆ ಅಕ್ಷರ್‌. 2019ರ ಈ ಕ್ಯಾಲೆಂಡರ್‌ ಅನ್ನು ನಿರ್ದೇಶಕ ಸಿಂಪಲ್‌ ಸುನಿ ಮತ್ತು ಅದರ ಮೇಕಿಂಗ್‌ ವಿಡಿಯೋವನ್ನು ನಿರ್ದೇಶಕ ಸತ್ಯ ಪ್ರಕಾಶ್‌ ಅನಾವರಣಗೊಳಿಸಿ, ಹೊಸಬರ ಹೊಸ ಪ್ರಯತ್ನಕ್ಕೆ ಶುಭ ಹಾರೈಸಿದರು.

ಇದೇ ವೇಳೆ ಮಾತನಾಡಿದ ನಿರ್ಮಾಪಕ ಬೆಂಕೋಶ್ರೀ, “ಅಕ್ಷರ್‌ ಯಾವ ತರಹದ ಪಾತ್ರಗಳಿಗೆ ಹೊಂದಿಕೊಳ್ಳುತ್ತಾರೆ ಎನ್ನುವ ಹಾಗೆ ಕಲ್ಪನೆಗೆ ತಕ್ಕಂತೆ ಫೋಟೋ ಶೂಟ್‌ ಮಾಡಿಸಲಾಗಿದ್ದು, ಇದೇ ವರ್ಷದಲ್ಲಿ ಮಗನ ನಾಯಕತ್ವದಲ್ಲಿ ಎರಡು ಸಿನಿಮಾಗಳನ್ನು ನಿರ್ಮಾಣ ಮಾಡಲು ಯೋಚಿಸಿದ್ದು, ಒಂದು ಚಿತ್ರದಲ್ಲಿ ಹೊಸಬರೊಂದಿಗೆ ಮತ್ತೂಂದು ಅನುಭವಿ ತಂಡದೊಂದಿಗೆ ಮಾಡಲಿದ್ದೇವೆ. ಈ ಸಿನಿಮಾ ವಿವರಗಳನ್ನು ಮುಂದಿನ ದಿನಗಳಲ್ಲಿ ನೀಡಲಾಗುವುದು’ ಎಂದಷ್ಟೇ ಹೇಳುತ್ತಾರೆ ಬೆಂಕೋಶ್ರೀ.

ಟಾಪ್ ನ್ಯೂಸ್

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.