ನಸುಕಲ್ಲೇ “ರಾಜಕುಮಾರ” ದರ್ಶನ, ಫ್ಯಾನ್ಸ್ ಗೆ ಹಬ್ಬ


Team Udayavani, Mar 23, 2017, 3:51 PM IST

Rajakumara.jpg

ಪುನೀತ್‌ ರಾಜಕುಮಾರ್‌ ಅಭಿನಯದ “ರಾಜಕುಮಾರ’ ಚಿತ್ರದ ಬಿಡುಗಡೆಗೆ ವೇದಿಕೆ ಸಜ್ಜಾಗಿದೆ. ಚಿತ್ರ ನಾಳೆ ಕರ್ನಾಟಕದಲ್ಲಿ 300ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಚಿತ್ರ ಬಿಡುಗಡೆಗೆ ಈಗಾಗಲೇ ಅಭಿಮಾನಿಗಳು ಕಾದು ಕುಳಿತಿದ್ದು, ನಾಳೆಯ ಪ್ರದರ್ಶನದ ಟಿಕೇಟುಗಳು ಈಗಾಗಲೇ ಹಲವು ಕಡೆ ಮಾರಾಟವಾಗಿದೆ.

ಈ ಹಿಂದೆ ಪುನೀತ್‌ ಅಭಿನಯದ ಕೆಲವು ಚಿತ್ರಗಳು, ಬೆಳಿಗ್ಗೆ ಬಹಳ ಬೇಗ ಪ್ರದರ್ಶನ ಕಂಡಿದ್ದವು. “ರಾಜಕುಮಾರ’ ಚಿತ್ರದ ವಿಷಯದಲ್ಲೂ ಅದು ಮುಂದುವರೆದಿದೆ. ರಾಜ್ಯದ ಹಲವು ಚಿತ್ರಮಂದಿರಗಳಲ್ಲಿ ಚಿತ್ರವು, ಬೆಳಿಗ್ಗೆ 7ಕ್ಕೆ ಪ್ರದರ್ಶನ ಕಾಣುತ್ತಿದೆ. ಇನ್ನು ಬೆಂಗಳೂರಿನ ಗೌಡನಪಾಳ್ಯದಲ್ಲಿರುವ
ಶ್ರೀನಿವಾಸ ಚಿತ್ರಮಂದಿರದಲ್ಲಿ ಬೆಳಿಗ್ಗೆ ಐದಕ್ಕೆ ಮೊದಲ ಪ್ರದರ್ಶನ ಶುರುವಾದರೆ, ತಾವರೆಕೆರೆಯ ಬಾಲಾಜಿ ಚಿತ್ರಮಂದಿರದಲ್ಲಿ ಬೆಳಿಗ್ಗೆ ಐದು ಮುಕ್ಕಾಲಿಗೆ ಮೊದಲ ಪ್ರದರ್ಶನ ಶುರುವಾಗಲಿದೆಯಂತೆ. ಇನ್ನೂ ಒಂದು ವಿಶೇಷವೆಂದರೆ, ಎಲ್ಲಾ ಮಲ್ಟಿಪ್ಲೆಕ್ಸ್‌ಗಳಲ್ಲೂ ಪ್ರದರ್ಶನಗಳ ಸಂಖ್ಯೆಯನ್ನು ಏರಿಸಿರುವುದು.

ಮೈಸೂರಿನ ಡಿಆರ್‌ಸಿ ಮಾಲ್‌ನಲ್ಲಿ 9 ಪ್ರದರ್ಶನಗಳನ್ನು ಮೊದಲು ನೀಡಲಾಗಿತ್ತಂತೆ. ಅವೆಲ್ಲಾ ಹೌಸ್‌ಫ‌ುಲ್‌ ಆದ ಕಾರಣ ಇನ್ನೊಂದು ಶೋ ನೀಡಲಾಗಿದೆ ಎನ್ನುತ್ತಾರೆ ನಿರ್ದೇಶಕ ಸಂತೋಷ್‌ ಆನಂದ್‌ರಾಮ್‌. ಇನ್ನು ಮಾಲ್‌ ಆಫ್ ಮೈಸೂರುನಲ್ಲಿ ಐದು ಪ್ರದರ್ಶನಗಳನ್ನು ನೀಡಲಾಗಿತ್ತಂತೆ. ಅವೆಲ್ಲಾ ಹೌಸ್‌ಫ‌ುಲ್‌ ಆದ ಕಾರಣ, ಇನ್ನೂ ಐದು ಪ್ರದರ್ಶನಗಳನ್ನು ಹೆಚ್ಚಿಗೆ ನೀಡಲಾಗಿರುವುದು ವಿಶೇಷ.

ಕರ್ನಾಟಕದಲ್ಲಿ 300ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುವುದರ ಜೊತೆಗೆ ಮುಂದಿನ ವಾರದಿಂದ ಮುಂಬೈ, ಪೂನಾ, ಚೆನ್ನೈಗಳಲ್ಲೂ ಚಿತ್ರ ಬಿಡುಗಡೆಯಾಗುತ್ತಿದೆಯಂತೆ. ರಾಜಾಸ್ಥಾನದಲ್ಲಿ ಕನ್ನಡಿಗರು ಚಿತ್ರ ನೋಡಬೇಕು ಎಂದು ತಮ್ಮ ಆಸೆ ವ್ಯಕ್ತಪಡಿಸಿದರಂತೆ. ಅದೇ ಕಾರಣಕ್ಕೆ ನಿರ್ಮಾಪಕ ವಿಜಯಕುಮಾರ್‌ ಕಿರಗಂದೂರು, ಚಿತ್ರವನ್ನು ಉಚಿತವಾಗಿ ತೋರಿಸುತ್ತಿದ್ದಾರಂತೆ. ಇನ್ನು ಚಿತ್ರವು ಅಮೇರಿಕಾದಲ್ಲಿ ಮಾರ್ಚ್‌ 29ರಂದು, ಇಂಗ್ಲೆಂಡ್‌ನ‌ಲ್ಲಿ ಏಪ್ರಿಲ್‌ ಏಳರಂದು, ಯೂರೋಪ್‌ನಲ್ಲಿ ಏಪ್ರಿಲ್‌ ಏಳರಂದು, ಸಿಂಗಾಪೂರ್‌ನಲ್ಲಿ ಮಾರ್ಚ್‌ 29ರಂದು, ಕೆನಡಾದಲ್ಲಿ ಏಪ್ರಿಲ್‌ ಒಂದರಂದು ಚಿತ್ರ
ಬಿಡುಗಡೆಯಾಗುತ್ತಿದೆಯಂತೆ.

“ರಾಜಕುಮಾರ’ ಚಿತ್ರವನ್ನು ಸಂತೋಷ್‌ ಆನಂದರಾಮ್‌ ಕಥೆ-ಚಿತ್ರಕಥೆ ಬರೆದು ನಿರ್ದೇಶಿಸಿದ್ದು, ಪುನೀತ್‌  ರಾಜಕುಮಾರ್‌ ಜೊತೆಗೆ ಪ್ರಿಯಾ ಆನಂದ್‌ ನಾಯಕಿಯಾಗಿ ನಟಿಸಿದ್ದಾರೆ. ಇನ್ನು, ಚಿತ್ರದಲ್ಲಿ ಶರತ್‌, ಪ್ರಕಾಶ್‌ ರೈ, ಅನಂತ್‌ ನಾಗ್‌, ಅಶೋಕ್‌, ಭಾರ್ಗವಿ ನಾರಾಯಣ್‌, ಹೊನ್ನಾವಳ್ಳಿ
ಕೃಷ್ಣ ಸೇರಿದಂತೆ ಸಾಕಷ್ಟು ಜನಪ್ರಿಯ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ.ವಿ. ಹರಿಕೃಷ್ಣ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ.

ಟಾಪ್ ನ್ಯೂಸ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.