ಐತಿಹಾಸಿಕ ಪಾತ್ರದಲ್ಲಿ ರಿಯಲ್‌ ಸ್ಟಾರ್‌ ಉಪೇಂದ್ರ

ಉಪ್ಪಿ - ನಾಗಣ್ಣ ಹೊಸ ಚಿತ್ರಕ್ಕೆ ಸಿದ್ಧತೆ

Team Udayavani, Nov 30, 2020, 11:33 AM IST

ಐತಿಹಾಸಿಕ ಪಾತ್ರದಲ್ಲಿ ರಿಯಲ್‌ ಸ್ಟಾರ್‌ ಉಪೇಂದ್ರ

ಸ್ಯಾಂಡಲ್‌ವುಡ್‌ನ‌ ಸಕ್ಸಸ್‌ಫ‌ುಲ್‌ ಕಾಂಬಿನೇಶನ್‌ ಪೈಕಿ ನಟ ರಿಯಲ್‌ ಸ್ಟಾರ್‌ ಉಪೇಂದ್ರ ಮತ್ತು ನಿರ್ದೇಶಕ ನಾಗಣ್ಣ ಅವರ ಕಾಂಬಿನೇಶನ್‌ ಕೂಡ ಒಂದು. ಈಗಾಗಲೇ “ಕುಟುಂಬ’, “ಗೌರಮ್ಮ’, “ದುಬೈ ಬಾಬು’, “ಗೋಕರ್ಣ’ ಸೇರಿದಂತೆ ನಾಲ್ಕು ಹಿಟ್‌ ಚಿತ್ರಗಳನ್ನು ನೀಡಿರುವ ರಿಯಲ್‌ ಸ್ಟಾರ್‌ ಉಪೇಂದ್ರ ಮತ್ತು ನಿರ್ದೇಶಕ ನಾಗಣ್ಣ ಜೋಡಿ ಈಗ ಐದನೇ ಚಿತ್ರಕ್ಕೆ ಸಿದ್ದತೆ ಮಾಡಿಕೊಳ್ಳುತ್ತಿದೆ.

ಈಗಾಗಲೇ ಈ ಚಿತ್ರದ ಪ್ರೀ-ಪ್ರೊಡಕ್ಷನ್‌ ಕೆಲಸಗಳು ಭರದಿಂದ ನಡೆಯುತ್ತಿದ್ದು, ಎಲ್ಲ ಅಂದುಕೊಂಡಂತೆ ನಡೆದರೆ, ಹೊಸ ವರ್ಷದ ಆರಂಭದಲ್ಲಿ ಈ ಚಿತ್ರ ಸೆಟ್ಟೇರಲಿದೆ. ಇನ್ನು ತಮ್ಮ ಮತ್ತು ಉಪೇಂದ್ರ ಅವರ ಕಾಂಬಿನೇಶನ್‌ನ ಹೊಸ  ಚಿತ್ರದ ಬಗ್ಗೆ “ಉದಯವಾಣಿ’ ಜೊತೆ ಮಾತನಾಡಿದ ನಿರ್ದೇಶಕ ನಾಗಣ್ಣ, “ಇದೊಂದು ಐತಿಹಾಸಿಕ ಕಥಾಹಂದರ ಹೊಂದಿರುವ ಸಿನಿಮಾ.

15ನೇ ಶತಮಾನದ ಕಾಲಘಟ್ಟದಲ್ಲಿ ನಡೆಯುವ ಕಥೆಯನ್ನು ತೆರೆಮೇಲೆ ತರುತ್ತಿದ್ದೇವೆ. ಭಾರವಿ ಅವರಕಥೆ ಇದಾಗಿದೆ. ಕಥೆಯನ್ನುಕೇಳಿದ ಉಪೇಂದ್ರ ಖುಷಿಯಿಂದ ಈ ಸಿನಿಮಾ ಮಾಡಲು ಒಪ್ಪಿಕೊಂಡಿದ್ದಾರೆ. ಮೊದಲ ಬಾರಿಗೆ ಉಪೇಂದ್ರ ಈ ಸಿನಿಮಾದಲ್ಲಿ ಐತಿಹಾಸಿಕ ಪಾತ್ರವೊಂದಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಕನ್ನಡದ ಜೊತೆಗೆ ತಮಿಳು, ತೆಲುಗು ಮತ್ತು ಹಿಂದಿ ಸೇರಿದಂತೆ ಸದ್ಯಕ್ಕೆ ನಾಲ್ಕು ಭಾಷೆಗಳಲ್ಲಿ ಈ ಸಿನಿಮಾ ಮಾಡಲು ಯೋಚಿಸಿದ್ದೇವೆ. ಸಿನಿಮಾದ ಟೈಟಲ್‌ ಇನ್ನಷ್ಟೇ ಅಂತಿಮವಾಗಬೇಕಿದೆ’ ಎನ್ನುತ್ತಾರೆ. “ಕನ್ನಡದ ಜೊತೆಗೆ ಬೇರೆ ಭಾಷೆಯ ಕಲಾವಿದರು

ಕೂಡ ಈ ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಲಿದ್ದಾರೆ. ಸಿನಿಮಾದ ಹೀರೋಯಿನ್ಸ್‌ ಮತ್ತಿತರಕಲಾವಿದರ ಆಯ್ಕೆ ನಡೆಯುತ್ತಿದೆ. ಈ ಸಿನಿಮಾದ ಹಾಡುಗಳಿಗೆ ಹಂಸಲೇಖ ಸಂಗೀತಸಂಯೋಜಿಸುತ್ತಿದ್ದಾರೆ. ಈಗಾಗಲೇ ಹಾಡುಗಳಸಂಯೋಜನೆಕೂಡ ಶುರುವಾಗಿದೆ. ಚಿತ್ರಕ್ಕೆ ಸುರೇಶ್‌ ಅರಸ್‌ ಸಂಕಲನವಿದೆ. ಉಳಿದಂತೆ ಇತರ ತಂತ್ರಜ್ಞರ ಆಯ್ಕೆ ನಡೆಯುತ್ತಿದೆ’ ಎಂದು ಮಾಹಿತಿ ನೀಡಿದ್ದಾರೆ ನಿರ್ದೇಶಕ ನಾಗಣ್ಣ.

ಇನ್ನು ಈ ಚಿತ್ರದಲ್ಲಿ ಉಪೇಂದ್ರ ಅವರಿಗೆ ಇಬ್ಬರು ನಾಯಕಿಯರು ಜೋಡಿಯಾಗಿ ತೆರೆಮೇಲೆ ಕಾಣಿಸಿಕೊಳ್ಳಲಿದ್ದಾರಂತೆ. ಏಕಕಾಲಕ್ಕೆ ನಾಲ್ಕು ಭಾಷೆಗಳಲ್ಲಿ ಈ ಚಿತ್ರ ಬರುತ್ತಿರುವುದರಿಂದ, ಇಬ್ಬರು ನಾಯಕಿಯರ ಪಾತ್ರಕ್ಕೆ ಈಗಾಗಲೇ, ಹಿಂದಿ ಮತ್ತು ದಕ್ಷಿಣ ಭಾರತದ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಸ್ಟಾರ್‌ ನಟಿಯರನ್ನೇ ಚಿತ್ರಕ್ಕೆ ಕರೆತರುವ ಯೋಚನೆಯಿದೆ ಎನ್ನಲಾಗುತ್ತಿದೆ. ಈ ಹಿಂದೆ ಉಪೇಂದ್ರ ಅಭಿನಯಿಸಿ, ನಿರ್ದೇಶಿಸಿದ್ದ “ಎ’ ಚಿತ್ರವನ್ನು ನಿರ್ಮಿಸಿದ್ದ ಜಗನ್ನಾಥ್‌ ಅವರ ಬ್ಯಾನರ್‌ನಲ್ಲಿ ಈ ಚಿತ್ರ ಮೂಡಿಬರುತ್ತಿದೆ.

“ಈಗಾಗಲೇ ಈ ಸಿನಿಮಾದ ಪ್ರೀ-ಪ್ರೊಡಕ್ಷನ್‌ ಕೆಲಸಗಳು ಶುರುವಾಗಿದೆ. ಮುಂಬರುವ ಜನವರಿ ಅಥವಾ ಫೆಬ್ರವರಿಯಲ್ಲಿ ಸಿನಿಮಾದ ಮುಹೂರ್ತ ನಡೆಯಲಿದೆ. ಒಂದೇ ಹಂತದಲ್ಲಿ ಶೂಟಿಂಗ್‌ ಮುಗಿಸುವ ಯೋಚನೆ ಇದೆ. ಇಲ್ಲಿಯವರೆಗೆ ನೋಡಿರದ ಹೊಸ ಗೆಟಪ್‌ನಲ್ಲಿ ಉಪೇಂದ್ರ ಅವರನ್ನು ಈ ಸಿನಿಮಾದಲ್ಲಿ ನೋಡಬಹುದು. ಅವರ ಅಭಿಮಾನಿಗಳಿಗೆ ಖಂಡಿತ ಇಷ್ಟವಾಗುವ ಸಿನಿಮಾವಾಗಲಿದೆ’ ಎನ್ನುತ್ತಾರೆ ನಿರ್ದೇಶಕ ನಾಗಣ್ಣ.

“ಕಬ್ಜ’ ಚಿತ್ರೀಕರಣ ಪೂರ್ಣವಾಗುತ್ತಿದ್ದಂತೆ, ಉಪ್ಪಿ – ನಾಗಣ್ಣಕಾಂಬಿನೇಶನ್‌ನ ಈ ಹೊಸಚಿತ್ರ ಶುರುವಾಗಲಿದೆ ಎನ್ನಲಾಗುತ್ತಿದೆ.

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

14

Sandalwood: ರಿಷಬ್‌ ಶೆಟ್ಟಿ ʼಕಾಂತಾರ-1ʼ ʼಸಪ್ತ ಸಾಗರದಾಚೆʼಯ ಬೆಡಗಿ ರುಕ್ಮಿಣಿ ನಾಯಕಿ?

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.