ಉಪೇಂದ್ರ ಹೇಳಿದಾಗೆ ನೀವೂ ಮಾಡಿದರೆ.. ಉಪ್ಪಿ ಬರ್ತ್ಡೇ ದಿನ ನಿಮ್ಗೆ ಸಿಗುತ್ತೆ ಗಿಫ್ಟ್!
ಕೇಕ್, ಹಾರ ತರುವ ಬದಲು ಉಪ್ಪಿ, ಅಭಿಮಾನಿಗಳಿಗಾಗಿಯೇ ಒಂದು ಗಿಫ್ಟ್ ಕೊಡುವ ಪ್ಲ್ಯಾನ್ ಮಾಡಿಕೊಂಡಿದ್ದಾರೆ.
Team Udayavani, Sep 3, 2022, 3:20 PM IST
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಅವರ ಹುಟ್ಟುಹಬ್ಬಕ್ಕೆ ದಿನಗಣನೆ ಶುರುವಾಗಿದೆ. ಅಭಿಮಾನಿಗಳು ತನ್ನ ನೆಚ್ಚಿನ ನಟನಿಗೆ ಶುಭಕೋರಲು ಕಾಯುತ್ತಿದ್ದಾರೆ. ಈ ನಡುವೇ ಅಭಿಮಾನಿಗಳಿಂದ ಉಪ್ಪಿ ಸ್ಪೆಷೆಲ್ ಗಿಫ್ಟ್ ಕೇಳಿದ್ದಾರೆ.
ಕೋವಿಡ್ ಹಾಗೂ ಅಪ್ಪು ಅಗಲಿಕೆಯ ಬಳಿಕ ಸ್ಟಾರ್ ಗಳು ತಮ್ಮ ಹುಟ್ಟುಹಬ್ಬವನ್ನು ಗ್ರ್ಯಾಂಡ್ ಆಗಿ ಆಚರಿಸಿಕೊಳ್ಳುತ್ತಿಲ್ಲ. ಇತ್ತೀಚಿಗೆ ಡಾಲಿ ಧನಂಜಯ ಅವರು ತಮ್ಮ ಹುಟ್ಟುಹಬ್ಬವನ್ನು ಅಪ್ಪು ಅವರ ಅಗಲಿಕೆಯ ಕಾರಣದಿಂದ ಆಚರಿಸಿಕೊಳ್ಳುತ್ತಿಲ್ಲ ಎಂದು ಹೇಳಿದ್ದರು. ಕಿಚ್ಚ ಸುದೀಪ್ ಎರಡು ವರ್ಷದ ಬಳಿಕ ಅಭಿಮಾನಿಗಳೊಂದಿಗೆ ಸೇರಿಕೊಂಡು ತಮ್ಮ ಹುಟ್ಟುಹಬ್ಬವನ್ನು ಗ್ರ್ಯಾಂಡ್ ಆಗಿ ಆಚರಿಸಿಕೊಂಡಿದ್ದಾರೆ.
ಇದೇ ತಿಂಗಳ 18 ( ಸೆ.18) ರಂದು ಉಪ್ಪಿ ಅವರ ಹುಟ್ಟುಹಬ್ಬವಿದೆ. ಅಭಿಮಾನಿಗಳು, ಕೇಕ್, ಹಾರ ತರುವ ಬದಲು ಉಪ್ಪಿ, ಅಭಿಮಾನಿಗಳಿಗಾಗಿಯೇ ಒಂದು ಗಿಫ್ಟ್ ಕೊಡುವ ಪ್ಲ್ಯಾನ್ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಉಪ್ಪಿ ಟ್ವೀಟ್ ಮಾಡಿದ್ದು, “ವಿಚಾರವಂತರಾಗೋಣಾ ? ಇದೇ ಸೆಪ್ಟೆಂಬರ್ 18 ಅಭಿಮಾನಿಗಳ ದಿನದಂದು ನಿಮ್ಮನ್ನು ನಮ್ಮ ಮನೆಯಲ್ಲಿ ಭೇಟಿಯಾಗುತ್ತೇನೆ. ಆ ದಿನ ಕೇಕ್, ಹೂಗುಚ್ಚ ಗಿಫ್ಟ್ ಎಲ್ಲಾ ಬಿಟ್ಟು, ಒಂದು ಹಾಳೆಯಲ್ಲಿ 18 ಪದಗಳನ್ನು ಮೀರದಂತೆ ಏನಾದರೂ ಒಂದು ಉತ್ತಮ ವಿಚಾರವನ್ನು ಬರೆದು ತರುತ್ತೀರಾ ? ಅತ್ಯುತ್ತಮವಾದ 18 ಬರವಣಿಗೆಗೆ ಸೂಕ್ತ ಬಹುಮಾನವಿರುತ್ತದೆ” ಎಂದು ಟ್ವೀಟ್ ಮಾಡಿದ್ದಾರೆ.
ಬರ್ತ್ ಡೇ ವಿಶ್ ಮಾಡಲು ಬರುವ ಅಭಿಮಾನಿಗಳು ಒಂದು ಹಾಳೆಯಲ್ಲಿ 18 ಪದಗಳನ್ನು ಮೀರದಂತೆ ಏನಾದರೂ ಉತ್ತಮ ವಿಚಾರ ಬರೆದು ತರುವಂತೆ ಹೇಳಿದ್ದಾರೆ. ಉಪ್ಪಿ ಈ ಕರೆಗೆ ಅಭಿಮಾನಿಗಳು ಯಾವ ರೀತಿ ರೆಸ್ಪಾನ್ಸ್ ಮಾಡುತ್ತಾರೆ ಎನ್ನುವುದನ್ನು ಕಾದು ನೋಡಬೇಕು.ಸದ್ಯ ರಿಯಲ್ ಸ್ಟಾರ್ ಉಪೇಂದ್ರ ಅವರ ʼಯು/ಐʼ ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಅವರ ಪ್ಯಾನ್ ಇಂಡಿಯಾ ʼಕಬ್ಜʼ ಕೂಡ ಬಹು ನಿರೀಕ್ಷೆಯ ಸಿನಿಮಾಗಳಲ್ಲೊಂದು.
ವಿಚಾರವಂತರಾಗೋಣಾ ????
ಇದೇ ಸೆಪ್ಟೆಂಬರ್ 18 ಅಭಿಮಾನಿಗಳ ದಿನದಂದು ನಿಮ್ಮನ್ನ ನಮ್ಮ ಮನೆಯಲ್ಲಿ ಬೇಟಿಯಾಗುತ್ತೇನೆ.
ಆ ದಿನ ಕೇಕ್, ಹೂಗುಚ್ಚ ಗಿಫ್ಟ್ ಎಲ್ಲಾ ಬಿಟ್ಟು …..
ಒಂದು ಹಾಳೆಯಲ್ಲಿ 18 ಪದಗಳನ್ನು ಮೀರದಂತೆ ಏನಾದರೂ ಒಂದು ಉತ್ತಮ ವಿಚಾರವನ್ನು ಬರೆದು ತರುತ್ತೀರಾ ?
ಅತ್ಯುತ್ತಮವಾದ 18 ಬರವಣಿಗೆಗೆ ಸೂಕ್ತ ಬಹುಮಾನವಿರುತ್ತದೆ ??— Upendra (@nimmaupendra) September 3, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್ ಕನಸು: ಇಂದು ತೆರೆಗೆ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್ ಅಂತ್ಯಕ್ರಿಯೆ
MUST WATCH
ಹೊಸ ಸೇರ್ಪಡೆ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ