ಬಾಲಿವುಡ್ ನಿಂದ ಆಫರ್ಗಳು ಬರುತ್ತಿವೆ,ಆದರೆ… : ರಿಷಬ್ ಶೆಟ್ಟಿ
Team Udayavani, Nov 5, 2022, 2:24 PM IST
ಮುಂಬೈ : ‘ಕಾಂತಾರ’ದ ಯಶಸ್ಸಿನ ನಂತರ ಬಾಲಿವುಡ್ ನಿಂದ ಆಫರ್ಗಳು ಬರುತ್ತಿವೆ ಎಂದು ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ ಹೇಳಿದ್ದಾರೆ.
ಎಎನ್ಐಗೆ ನೀಡಿದ ವಿಶೇಷ ಸಂದರ್ಶನದಲ್ಲಿ ರಿಷಬ್, “ನನಗೆ ಬಾಲಿವುಡ್ ಚಲನಚಿತ್ರ ನಿರ್ಮಾಪಕರಿಂದ ಆಫರ್ಗಳು ಬಂದಿವೆ. ಆದರೆ ಸದ್ಯ ನಾನು ಕನ್ನಡದಲ್ಲಿ ಮಾತ್ರ ಚಲನಚಿತ್ರಗಳನ್ನು ಮಾಡಲು ಬಯಸುತ್ತೇನೆ. ನಾನು ಅಮಿತಾಭ್ ಬಚ್ಚನ್ ಅವರನ್ನು ಆರಾಧಿಸುತ್ತೇನೆ, ನಾನು ಅವರನ್ನು ನಿಜವಾಗಿಯೂ ಇಷ್ಟಪಡುತ್ತೇನೆ ಮತ್ತು ಸಲ್ಮಾನ್ ಭಾಯ್, ಯುವ ಪೀಳಿಗೆಯ ನಟರಾದ ಶಾಹಿದ್ ಕಪೂರ್ ಸೇರಿ ಅನೇಕರಲ್ಲಿ ಪ್ರತಿಯೊಂದನ್ನು ಇಷ್ಟಪಡುತ್ತೇನೆ” ಎಂದಿದ್ದಾರೆ.
ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ’ ಸೆಪ್ಟೆಂಬರ್ 30 ರಂದು ಬಿಡುಗಡೆಯಾಗಿ ಅದರ ಕಥಾಹಂದರ ಮತ್ತು ಅದ್ಭುತ ದೃಶ್ಯಗಳಿಗಾಗಿ ಪ್ರೇಕ್ಷಕರಿಂದ ಭಾರಿ ಪ್ರತಿಕ್ರಿಯೆಯನ್ನು ಪಡೆದು ಪ್ಯಾನ್ ಇಂಡಿಯಾ ಸಿನಿಮಾವಾಗಿ ದಿಗ್ವಿಜಯ ಸಾಧಿಸಿ ದಿಗ್ಗಜರ ಪ್ರಶಂಸೆ ಪಡೆದುಕೊಂಡಿದೆ.
ಇತ್ತೀಚೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ದಕ್ಷಿಣ ನಟ ರಜನಿಕಾಂತ್ ಅವರು ರಿಷಬ್ ಶೆಟ್ಟಿ ಅವರ ಕಾಂತಾರ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ