ಹಳೆಯ ದರದಲ್ಲೇ ನಾಳೆ ಹೊಸ ಚಿತ್ರಗಳ ಬಿಡುಗಡೆ


Team Udayavani, Mar 14, 2018, 2:35 PM IST

karnataka.jpg

ಯುಎಫ್ಓ ಮತ್ತು ಕ್ಯೂಬ್‌ ಸಮಸ್ಯೆ ಇತ್ಯರ್ಥಕ್ಕೆ ದಕ್ಷಿಣ ಭಾರತ ಚಲನಚಿತ್ರ ವಾಣಿಜ್ಯ ಮಂಡಳಿ, ಹದಿನೈದು ದಿನಗಳ ಕಾಲ ಗಡುವು ನೀಡಿದ್ದು, ಅಲ್ಲಿಯವರೆಗೆ ಹೊಸ ಚಿತ್ರಗಳ ಬಿಡುಗಡೆಗೆ ಅವಕಾಶ ಮಾಡಿಕೊಟ್ಟಿದೆ. ಒಂದು ವೇಳೆ ಹದಿನೈದು ದಿನಗಳ ಬಳಿಕ ಬೇಡಿಕೆಗೆ ಒಪ್ಪದೇ ಹೋದರೆ, ಬಿಡುಗಡೆಯಾದ ಚಿತ್ರಗಳಿಗೆ ಯುಎಫ್ಓ,ಕ್ಯೂಬ್‌ ವಿಧಿಸಿರುವ ದರದಲ್ಲಿ ಶೇ.50 ರಷ್ಟು ಹಿಂದಿರುಗಿಸಬೇಕು ಎಂದು ಷರತ್ತು ಹಾಕಿದೆ. 

ಈ ಕುರಿತು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು, “ದರ ನಿಗಧಿ ಕುರಿತಂತೆ ಕಳೆದ ಮೂರು ತಿಂಗಳಿನಿಂದಲೂ ಮಾತುಕತೆ ನಡೆಸಲಾಗುತ್ತಿತ್ತು. ಮಂಗಳವಾರ ಬೆಳಗ್ಗೆಯಿಂದ ಸಂಜೆಯವರೆಗೂ ನಡೆದ ಮಾತುಕತೆಯಲ್ಲಿ, ಯುಎಫ್, ಕ್ಯೂಬ್‌ಗ ಸಂಬಂಧಿಸಿದವರು ಹದಿನೈದು ದಿನಗಳ ಕಾಲಾವಕಾಶ ಕೇಳಿದರು.

ನಮ್ಮ ಸಿಇಓ ಬಳಿ ಮಾತನಾಡಲು ಸಮಯಬೇಕು, ಆ ಬಳಿಕ ನಾವು ನಿಮ್ಮ ಬೇಡಿಕೆ ಕುರಿತು ಒಂದು ತೀರ್ಮಾನಕ್ಕೆ ಬರಬಹುದು ಎಂದು ಕೇಳಿದ್ದಕ್ಕೆ ಮಾರ್ಚ್ 30ರವರೆಗೆ ಗಡುವು ಕೊಡಲಾಗಿದೆ. ಹೀಗಾಗಿ, ಬಿಡುಗಡೆಗೆ ಸಿದ್ಧವಾಗಿರುವ ಚಿತ್ರಗಳು ಈ ವಾರ ತೆರೆಗೆ ಬರಲಿವೆ.  ಯುಎಫ್ಓ, ಕ್ಯೂಬ್‌ ವಿಧಿಸಿರುವ ಈಗಿನ ದರದಲ್ಲೇ ಚಿತ್ರಗಳು ಬಿಡುಗಡೆಯಾಗಲಿವೆ.

ಹದಿನೈದು ದಿನಗಳ ನಂತರ ನಮ್ಮ ಬೇಡಿಕೆಗೆ ಅವರು ಒಪ್ಪದೇ ಇದ್ದರೆ, ಬಿಡುಗಡೆಯಾಗಿರುವ ಚಿತ್ರಗಳಿಗೆ ಶೇ.50 ರಷ್ಟು ಹಣ ಹಿಂದಕ್ಕೆ ಕೊಡುವ ಕುರಿತು ಮಾತುಕತೆ ನಡೆದಿದೆ’ ಎಂದರು. “ಒಂದು ವೇಳೆ ಸಮಸ್ಯೆ ಬಗೆಹರಿಯದೇ ಇದ್ದರೆ, ನಾವು ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುತ್ತೇವೆ. ಈಗಾಗಲೇ ಒಂದು ಕಂಪೆನಿ ಜೊತೆಗೆ ಮಾತುಕತೆ ಕೂಡ ನಡೆದಿದೆ.

ಮಾರ್ಚ್‌ 9ರಂದು ತೆರೆಗೆ ಬರಬೇಕಿದ್ದ ಚಿತ್ರಗಳು ಈ ವಾರ ಬಿಡುಗಡೆಯಾಗಲಿವೆ. ಬಿಡುಗಡೆ ಕುರಿತು ಒಂದಷ್ಟು ಗೊಂದಲ ಆಗಿರುವುದು ನಿಜ. ಹೋರಾಟ ಅಂದಮೇಲೆ ಸಣ್ಣಪುಟ್ಟ ತೊಂದರೆಗಳಾಗುತ್ತವೆ. ಆದರೆ, ಯಾರಿಗೂ ಅನ್ಯಾಯ ಆಗಬಾರದು ಎಂಬ ಉದ್ದೇಶದಿಂದ ಮಂಡಳಿ ಈ ತೀರ್ಮಾನ ಕೈಗೊಂಡಿತ್ತು. ಮಾರ್ಚ್‌ 16ರಿಂದ ಎಲ್ಲಾ ಭಾಷೆಯ ಚಿತ್ರಗಳೂ ತೆರೆಗೆ ಬರಲಿವೆ.

ಯುಎಫ್ಓ, ಕ್ಯೂಬ್‌ ಮಾಡಿದ ಒಂದು ದೊಡ್ಡ ಸಮಸ್ಯೆ ಅಂದರೆ, ಪ್ರದರ್ಶಕರ ಬಳಿ ಒಪ್ಪಂದ ಮಾಡಿಕೊಂಡಿರುವುದು. ಆ ವ್ಯವಸ್ಥೆಯಿಂದಾಗಿ, ಇಂದು ಇಷ್ಟೆಲ್ಲಾ ಸಮಸ್ಯೆಯಾಗುತ್ತಿದೆ. ಇಷ್ಟರಲ್ಲೇ ಸಮಸ್ಯೆ ಬಗೆಹರಿಯುವ ವಿಶ್ವಾಸವಿದೆ. ಒಂದು ವೇಳೆ ಆಗದಿದ್ದರೆ, ನಮ್ಮ ರೇಟ್‌ಗೆ ಒಬ್ಬರು ಮಾಡಿಕೊಡುವ ಭರವಸೆ ನೀಡಿದ್ದಾರೆ. ಆ ಕುರಿತು ಮುಂದಿನ ದಿನಗಳಲ್ಲಿ ಹೇಳಲಾಗುತ್ತದೆ’ ಎಂದರು ಅವರು.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.