ಅಂಬರೀಶ್‌ ಹುಟ್ಟುಹಬ್ಬ; ರೆಬೆಲ್‌ಸ್ಟಾರ್‌ ನೆನಪಲ್ಲಿ….


Team Udayavani, May 29, 2023, 10:28 AM IST

remembering ambarish on his birthday

ಮೇ 29… ಕನ್ನಡ ಚಿತ್ರರಂಗಕ್ಕೆ ಈ ದಿನ ಖಂಡಿತ ನೆನಪಿರದೇ ಇರದು. ಅದರಲ್ಲೂ ಅಭಿಮಾನಿಗಳ ಪಾಲಿಗಂತೂ ಮೇ 29 ಅನ್ನೋದು ಹಬ್ಬದ ಸಂಭ್ರಮ ಇದ್ದಂತೆ. ಹೌದು, ಇಂದು (ಮೇ 29) ರೆಬೆಲ್‌ಸ್ಟಾರ್‌ ಅಂಬರೀಶ್‌ ಅವರ ಹುಟ್ಟುಹಬ್ಬ. ಅಂಬರೀಶ್‌ ನಮ್ಮ ಜೊತೆಗಿಲ್ಲ. ಆದರೆ, ಅವರ ಅಭಿಮಾನಿಗಳು ಭಾರವಾದ ಮನಸ್ಸಿನಿಂದಲೇ ಆಚರಿಸಲಿದ್ದಾರೆ.

ಅಂಬರೀಶ್‌ ಅವರು ಯಾವತ್ತೂ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಂಡವರಲ್ಲ. ಆದರೆ, ಮನೆಯವರ ಪ್ರೀತಿಗೆ, ಅಭಿಮಾನಿಗಳ ಒತ್ತಾಯಕ್ಕೆ ಅವರ ಜೊತೆಗೂಡಿ ಇಡೀ ದಿನ ಸಂಭ್ರಮಿಸುತ್ತಿದ್ದರು.

ಅಂಬರೀಶ್‌ ಮಾತುಗಳೇ ಹಾಗೆ. ಅವರು ಎಷ್ಟೇ ಜೋರು ಧ್ವನಿಯಲ್ಲಿ ಬೈದರೂ, ಗದರಿದರೂ ಅಭಿಮಾನಿಗಳು ಮಾತ್ರ ಅವರ ಮಾತನ್ನು ಪ್ರೀತಿಯಿಂದಲೇ ಸ್ವೀಕರಿಸುತ್ತಿದ್ದರು. ಅವರ ಮಾತಿಗೆ ಖುಷಿ ಪಟ್ಟು ಹಿರಿ ಹಿರಿ ಹಿಗ್ಗುತ್ತಿದ್ದರು. ಈಗ ಅಂಬರೀಶ್‌ ಇಲ್ಲ. ಅವರ ಬೈಗುಳವಿಲ್ಲ. ಆದರೆ, ಅಂಬರೀಶ್‌ ಅವರು ಹಂಚಿರುವ ಅಪಾರ ಪ್ರೀತಿ ಇದೆ. ಆ ಪ್ರೀತಿಯೇ ದೊಡ್ಡ ಅಭಿಮಾನಿ ವರ್ಗ. ಆ ಅಭಿಮಾನಿಗಳು ಈಗ ಅಂಬರೀಶ್‌ ಅವರ ಹುಟ್ಟುಹಬ್ಬ ಆಚರಿಸಲು ವಿಶೇಷ ತಯಾರಿ ಮಾಡಿಕೊಂಡಿದ್ದಾರೆ.

ಅಂಬರೀಶ್‌ ಇದ್ದಾಗ, ಅವರ ಹುಟ್ಟುಹಬ್ಬದ ದಿನ ಬೇರೆಲ್ಲೂ ಹೋಗದೆ ಇಡೀ ದಿನ ಮನೆಯಲ್ಲೇ ಇರುತ್ತಿದ್ದರು. ಅಷ್ಟೇ ಅಲ್ಲ, ತಮ್ಮ ಮನೆಗೆ ಶುಭಾಶಯ ಹೇಳಲು ದೂರದ ಊರುಗಳಿಂದ ಆಗಮಿಸುತ್ತಿದ್ದ ಅಭಿಮಾನಿಗಳನ್ನು ಖುಷಿಪಡಿಸಿ, ಅವರುಗಳು ತಂದಿದ್ದ ಹಾರ, ಕೇಕ್‌ ಇತರೆ ಪ್ರೀತಿಯ ಉಡುಗೊರೆಗಳನ್ನು ಸ್ವೀಕರಿಸಿ, ಅವರೊಂದಿಗೆ ಫೋಟೋ ತೆಗೆಸಿಕೊಂಡು ಅಭಿಮಾನಿಗಳನ್ನು ಸಂತಸ ಪಡಿಸುತ್ತಿದ್ದರು. ಈಗ ಅಂಬರೀಶ್‌ ಇಲ್ಲದಿದ್ದರೂ, ಅವರ ಹುಟ್ಟುಹಬ್ಬವನ್ನು ಪ್ರತಿ ವರ್ಷದಂತೆಯೇ ಸಂಭ್ರಮಿಸಬೇಕೆಂಬ ಉದ್ದೇಶ ಅಭಿಮಾನಿಗಳಿಗಿದೆ.

ಇನ್ನು, ಅವರ ಕುಟುಂಬ ವರ್ಗ ಕೂಡ ಕಂಠೀರವ ಸ್ಟುಡಿಯೋದಲ್ಲಿರುವ ಅಂಬರೀಶ್‌ ಅವರ ಸಮಾಧಿ ಬಳಿ ತೆರಳಿ, ವಿಶೇಷವಾಗಿ ಹೂವಿನ ಅಲಂಕಾರ ಮಾಡಿ, ಅಂಬರೀಶ್‌ ಅವರಿಗೆ ಇಷ್ಟವಾದಂತಹ ತಿಂಡಿ, ತಿನಿಸು ಇಟ್ಟು ಪೂಜೆ ಸಲ್ಲಿಸಲಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.