ರೇಸ್‌ಕೋರ್ಸ್‌ ರಸ್ತೆಗೆ ಅಂಬಿ ಹೆಸರಿಡಲು ಮನವಿ


Team Udayavani, Nov 26, 2018, 11:40 AM IST

racecourse.jpg

ಅಂಬರೀಷ್‌ ಅವರಿಗೂ ಹಾರ್ಸ್‌ ರೇಸ್‌ಗೂ ಅವಿನಾಭಾವ ಸಂಬಂಧ. ಅಂಬರೀಷ್‌ ಅವರು ಕುದುರೆ ಹಾಗೂ ರೇಸ್‌ ಅನ್ನು ತುಂಬಾನೇ ಇಷ್ಟಪಡುತ್ತಿದ್ದರು. ಹಾಗೆ ನೋಡಿದರೆ, ಒಂದಷ್ಟು ಸಮಯವನ್ನು ಅಲ್ಲೇ ಕಳೆಯುತ್ತಿದ್ದರು ಕೂಡ. ಹೀಗಾಗಿ, ಈಗಿರುವ ರೇಸ್‌ಕೋರ್ಸ್‌ ರಸ್ತೆಗೆ ಅಂಬರೀಷ್‌ ಅವರ ಹೆಸರು ಇಡಬೇಕು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಒತ್ತಾಯಿಸಿದೆ.

ಈ ಸಂಬಂಧ, ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಸಂಪರ್ಕಿಸಿ, ರೇಸ್‌ಕೋರ್ಸ್‌ಗೆ ಅಂಬರೀಷ್‌ ಅವರ ಹೆಸರಿಡಬೇಕು ಎಂದು ಮನವಿ ಮಾಡಲು ನಿರ್ಧರಿಸಿದೆ. ರೇಸ್‌ಕೋರ್ಸ್‌ ರಸ್ತೆ ನಗರ ಮಧ್ಯೆವಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೂ ಹತ್ತಿರವಿದೆ. ರೇಸ್‌ಕೋರ್ಸ್‌ ಮೇಲೆ ಅಂಬರೀಷ್‌ ಅವರಿಗೆ ಅಪಾರ ಪ್ರೀತಿ ಇದ್ದುದರಿಂದ, ಆ ರಸ್ತೆಗೆ ಅಂಬರೀಷ್‌ ರಸ್ತೆ ಎಂದು ನಾಮಕರಣ ಮಾಡಬೇಕು ಎಂದು ಚಿತ್ರೋದ್ಯಮದಿಂದ ಒತ್ತಾಯ ಮಾಡಲು ಮಂಡಳಿ ನಿರ್ಧರಿಸಿದೆ.

ರಾಜ್ಯಾದ್ಯಂತ ಚಿತ್ರ ಪ್ರದರ್ಶನ ರದ್ದು: ಅಂಬರೀಷ್‌ ನಿಧನದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಲ್ಲಿರುವ ಬಹುತೇಕ ಚಿತ್ರಮಂದಿರಗಳು ಸ್ವ-ಇಚ್ಛೆಯಿಂದಲೇ ಪ್ರದರ್ಶನ ಹಾಗೂ ಸಿನಿಮಾ ಚಟುವಟಿಕೆಗಳನ್ನು ರದ್ದು  ಮಾಡುವ ಮೂಲಕ ಗೌರವ ಸಲ್ಲಿಸಿದ್ದು ವಿಶೇಷ. ಚಿತ್ರಮಂದಿರದ ಮಾಲೀಕರು ವೈಯಕ್ತಿಕವಾಗಿಯೇ ಚಿತ್ರ ಪ್ರದರ್ಶನ ರದ್ದುಪಡಿಸುವ ಮೂಲಕ ಅಂಬರೀಷ್‌ ಅವರಿಗೆ ವಿಶೇಷ ನಮನ ಸಲ್ಲಿಸಿದ್ದಾರೆ.

ಚಿತ್ರಪ್ರದರ್ಶನ ಮಾತ್ರವಲ್ಲ, ಚಿತ್ರರಂಗದ ಎಲ್ಲಾ ಚಟುವಟಿಕೆಗಳನ್ನು ಸಹ ಸ್ಥಗಿತಗೊಳಿಸಲಾಯಿತು. ಡಬ್ಬಿಂಗ್‌, ಎಡಿಟಿಂಗ್‌, ಎಫೆಕ್ಟ್ಸ್ ಸೇರಿದಂತೆ ಇನ್ನಿತರೆ ಸಿನಿಮಾ ಕಾರ್ಯಗಳನ್ನೆಲ್ಲಾ ರದ್ದುಪಡಿಸಲಾಯಿತ್ತು. ಸಾಮಾನ್ಯವಾಗಿ ಈ ರೀತಿಯ ಸಂದರ್ಭಗಳಲ್ಲಿ ಬೆಂಗಳೂರು, ಮೈಸೂರು ಸೇರಿದಂತೆ ಇನ್ನಿತರೆ ನಗರಗಳಲ್ಲಿ ಮಾತ್ರ ಸ್ವ-ಇಚ್ಛೆಯಿಂದಲೇ ಚಿತ್ರ ಪ್ರದರ್ಶನ ರದ್ದು ಮಾಡುವುದು ವಾಡಿಕೆ.

ಆದರೆ, ಉತ್ತರ ಕರ್ನಾಟಕ, ದಕ್ಷಿಣ ಕನ್ನಡ ಭಾಗದಲ್ಲೂ ಸಹ ಯಾವುದೇ ಒಂದು ಚಿತ್ರಪ್ರದರ್ಶನವಾಗಿಲ್ಲ. ಮಲ್ಟಿಪ್ಲೆಕ್ಸ್‌ನಲ್ಲೂ ಚಿತ್ರಪ್ರದರ್ಶನಗೊಂಡಿಲ್ಲ. ಸೋಮವಾರ (ಇಂದು) ಚಿತ್ರಪ್ರದರ್ಶನ ಸೇರಿದಂತೆ ಚಿತ್ರರಂಗದ ಚಟುವಟಿಕೆಗಳು ಎಂದಿನಂತೆ ನಡೆಯುತ್ತವೆಯಾ ಎಂಬುದಕ್ಕೆ ಸ್ಪಷ್ಟ ಉತ್ತರ ಸಿಕ್ಕಿಲ್ಲ.

ಈಡೇರದ ಮನೆ ಕನಸು: ಅಂಬರೀಶ್‌ ಅವರನ್ನು ಬಲ್ಲವರು ಯಾರೇ ಆದರೂ ಹೇಳುತ್ತಿದ್ದ ಒಂದು ಮಾತೆಂದರೆ ಅವರು ಯಾವತ್ತೂ ಯಾವುದಕ್ಕೂ ದುಃಖ ಮಾಡಿಕೊಂಡ ವ್ಯಕ್ತಿಯಲ್ಲ  ಎಂದು. ಖುಷಿಯಾಗಿ ಇರುವ ವ್ಯಕ್ತಿತ್ವವನ್ನು ಅಂಬರೀಶ್‌ ಮೈಗೂಡಿಸಿಕೊಂಡಿದ್ದರು. ಅವರಿಗೆ ಇತ್ತೀಚೆಗೆ ಇದ್ದ ಒಂದೇ ಒಂದು ಸಣ್ಣ ಬೇಸರವೆಂದರೆ ಅದು  ಮನೆ ನವೀಕರಣದ ಕೆಲಸ ಮುಗಿಯಲಿಲ್ಲ ಎಂಬುದು.

ಅಂಬರೀಶ್‌ ಅವರು ತಮ್ಮ ಜೆ.ಪಿ.ನಗರದ ಮನೆಯ ನವೀಕರಣ ಕಾರ್ಯಕ್ಕೆ ಕೈ ಹಾಕಿದ್ದರು. ಆದಷ್ಟು  ಬೇಗ ನವೀಕರಿಸಿ ಆ ಮನೆಗೆ ಹೋಗಬೇಕೆಂಬ ಆಸೆ ಅವರಿಗಿತ್ತು. ಆದರೆ, ಅದು ಈಡೇರಲಿಲ್ಲ. ಮನೆ ಕೆಲಸ ತಡವಾಗುತ್ತಿದ್ದರಿಂದ ಮನೆಗೆ ಹೋಗಲು  ಸಾಧ್ಯವಾಗುತ್ತಿಲ್ಲ ಎಂಬ ನೋವು ಅವರಲ್ಲಿತ್ತು. ಆದರೆ, ಶನಿವಾರ ಮಧ್ಯರಾತ್ರಿ ಆಸ್ಪತ್ರೆಯಿಂದ ಅಂಬರೀಶ್‌ ಅವರ ಪಾರ್ಥಿವ ಶರೀರವನ್ನು ಅವರ ನವೀಕರಿಸುತ್ತಿದ್ದ ಮನೆಗೆ ಕೊಂಡೊಯ್ಯಲಾಯಿತು. 

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.