ಮರು ಬಿಡುಗಡೆಯತ್ತ ರಮೇಶ್‌ ಅರವಿಂದ್‌ ಸಿನಿಮಾ


Team Udayavani, Oct 11, 2020, 1:08 PM IST

ಮರು ಬಿಡುಗಡೆಯತ್ತ ರಮೇಶ್‌ ಅರವಿಂದ್‌ ಸಿನಿಮಾ

ರಮೇಶ್‌ ಅರವಿಂದ್‌ ನಾಯಕರಾಗಿರುವ ಚಿತ್ರವೊಂದು ಚಿತ್ರಮಂದಿರ ತೆರೆಯುತ್ತಿದ್ದಂತೆ ಬಿಡುಗಡೆಯಾಗುತ್ತಿದೆ. ಈ ಮೂಲಕ ಪಕ್ಕಾ ಫ್ಯಾಮಿಲಿ ಹೀರೋ ಎನಿಸಿಕೊಂಡಿರುವ ರಮೇಶ್‌ ಅವರಿಂದಲೇ ರೀಓಪನ್‌ ಆಗಲಿದೆ!

ಹೀಗೆಂದರೆ ನಿಮಗೆ ಆಶ್ವರ್ಯವಾಗಲಿದೆ. ರಮೇಶ್‌ ಅವರ ಯಾವ ಚಿತ್ರ ಬಿಡುಗಡೆಯಾಗುತ್ತಿದೆ ಎಂದು. ಏಕೆಂದರೆ ರಮೇಶ್‌ ನಟಿಸಿ, ನಿರ್ದೇಶಿಸಿರುವ “100′ ಚಿತ್ರ ಬಿಡುಗಡೆಗೆ ಸಿದ್ಧವಿದೆ. ಸೆನ್ಸಾರ್‌ ಬೇರೆ ಆಗಿದೆ. ಹಾಗಾದರೆ ಆ ಚಿತ್ರ ಬಿಡುಗಡೆಯಾಗುತ್ತಾ ಎಂದು ನೀವು ಕೇಳಬಹುದು. ಖಂಡಿತಾ ಅಲ್ಲ, ಆ ಚಿತ್ರ ಈಗ ಬಿಡುಗಡೆಯಾಗುತ್ತಿಲ್ಲ. ಚಿತ್ರಮಂದಿರಕ್ಕೆ ಜನ ಭಯಬಿಟ್ಟು ಬರುವವರೆಗೆ ಆ ಚಿತ್ರವನ್ನು ಬಿಡುಗಡೆ ಮಾಡದಿರಲು ಚಿತ್ರತಂಡ ನಿರ್ಧರಿಸಿದೆ. ಈಗ ಬಿಡುಗಡೆಯಾಗುತ್ತಿರುವುದು ರಮೇಶ್‌ ಅವರ”ಶಿವಾಜಿ ಸುರತ್ಕಲ್‌’ ಚಿತ್ರ. ಹೌದು, ಈ ಚಿತ್ರ ಅಕ್ಟೋಬರ್‌15ರಿಂದ ಮರುಬಿಡುಗಡೆಯಾಗುತ್ತಿದೆ.ಈ ಮೂಲಕ ಚಿತ್ರಮಂದಿರ ರೀ ಓಪನ್‌ ಆಗುವ ದಿನವೇ ಈ ಚಿತ್ರ ಪ್ರದರ್ಶನವಾಗಲಿದೆ. ಕೆ.ಆರ್‌.ಜಿ. ಸ್ಟುಡಿಯೋ ಈ ಚಿತ್ರವನ್ನು ಮರುಬಿಡುಗಡೆ ಮಾಡಲು ನಿರ್ಧರಿಸಿದೆ.

ಈ ಚಿತ್ರ ಫೆ.21ರಂದು ತೆರೆಕಂಡು ಪ್ರೇಕ್ಷಕರಿಂದ ಮೆಚ್ಚುಗೆ ಪಡೆದಿತ್ತು. ಮೊದಲ ವಾರ ಸುಮಾರು80ಕೇಂದ್ರಗಳಲ್ಲಿ ಬಿಡುಗಡೆಯಾಗಿದ್ದ “ಶಿವಾಜಿ ಸುರತ್ಕಲ್‌’,2ನೇ ವಾರದಿಂದ ಸುಮಾರು 120 ಕೇಂದ್ರಗಳಲ್ಲಿ ಪ್ರದರ್ಶನವಾಗಿತ್ತು. ಇದೊಂದು ಪತ್ತೇದಾರಿ ಸಿನಿಮಾವಾಗಿದ್ದು, ಕೊಲೆಯೊಂದರ ರಹಸ್ಯದ ಸುತ್ತ ಚಿತ್ರ ಸಾಗುತ್ತದೆ. ಆಕಾಶ್‌ ಶ್ರೀವತ್ಸ ಈ ಚಿತ್ರದ ನಿರ್ದೇಶಕರು. ಈಗ ಈ ಚಿತ್ರದ ಮುಂದುವರೆದ ಭಾಗ ಮಾಡುವ ತಯಾರಿಯಲ್ಲಿದ್ದಾರೆ.

ದಿಯಾಗೂ ಮರು ಬಿಡುಗಡೆ ಭಾಗ್ಯ : ಈ ವರ್ಷಾರಂಭದಲ್ಲಿ ಬಿಡುಗಡೆಯಾಗಿ ಅಭಿಮಾನಿಗಳಿಂದ ಭರಪೂರ ಮೆಚ್ಚುಗೆ ಪಡೆದ ಸಿನಿಮಾ “ದಿಯಾ’. ಆದರೆ ಚಿತ್ರಮಂದಿರಗಳಿಗೆಮಾತ್ರ ಹೆಚ್ಚು ಜನ ಬರಲಿಲ್ಲ ಎಂಬ ಬೇಸರ ಚಿತ್ರತಂಡಕ್ಕಿತ್ತು. ಆದರೆ, ಸೋಶಿಯಲ್‌ ಮೀಡಿಯಾ ಹಾಗೂ ಟಿವಿಯಲ್ಲಿಈಚಿತ್ರ ದೊಡ್ಡಮಟ್ಟದಲ್ಲಿ ಹಿಟ್‌ ಆಗಿತ್ತು. ಈಗ ಈ ಚಿತ್ರ ಕೂಡಾ ಮರು ಬಿಡುಗಡೆಯಾಗುತ್ತಿದೆ. ವಿಶೇಷವೆಂದರೆ ಆರಂಭದಲ್ಲಿ ಬಿಡುಗಡೆಯಾದ ಈ ಚಿತ್ರದಲ್ಲಿಹಾಡು ಇರಲಿಲ್ಲ. ಆದರೆ ಈಗ ಚಿತ್ರಕ್ಕೊಂದು ಹಾಡು ಸೇರಿಸಿಯೇ ರಿಲೀಸ್‌ ಮಾಡಲು ಚಿತ್ರತಂಡ ಯೋಚಿಸಿದೆ. ಚಿತ್ರದಲ್ಲಿ ಪೃಥ್ವಿ ಅಂಬರ್‌ ಹಾಗೂ ಖುಷಿ ನಾಯಕ-ನಾಯಕಿಯಾಗಿ ನಟಿಸಿದ್ದಾರೆ.

ಟಾಪ್ ನ್ಯೂಸ್

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.