ಹಿರಿಯರಿಗೆ ಮಣೆ‌, ಕಿರಿಯರಿಗೆ ಮನ್ನಣೆ

2018ನೇ ಸಾಲಿನ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ

Team Udayavani, Jan 11, 2020, 7:05 AM IST

Raghavendra-Rajakumar

2018ನೇ ಸಾಲಿನ ಕರ್ನಾಟಕ ರಾಜ್ಯ ಚಲನಚಿತ್ರ ಚಿತ್ರ ಪ್ರಶಸ್ತಿ ಶುಕ್ರವಾರ (ಜ. 10) ಘೋಷಣೆಯಾಗಿದೆ. ಹಿರಿಯ ನಿರ್ದೇಶಕ ಜೋ ಸೈಮನ್‌ ನೇತೃತ್ವದ ಆಯ್ಕೆ ಸಮಿತಿ ಸುಮಾರು 162 ಚಿತ್ರಗಳನ್ನ ವೀಕ್ಷಿಸಿ, ಅಂತಿಮವಾಗಿ ಚಿತ್ರಗಳನ್ನು ಪ್ರಶಸ್ತಿ ಪಟ್ಟಿಗೆ ಆಯ್ಕೆ ಮಾಡಿದೆ. ಇದರ ಜೊತೆಗೆ ಹಿರಿಯ ನಿರ್ಮಾಪಕ ಬಸಂತ ಕುಮಾರ್‌ ಪಾಟೀಲ್‌ ನೇತೃತ್ವದ ಆಯ್ಕೆ ಸಮಿತಿ ಜೀವಮಾನ ಸಾಧನೆಗಳ ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಯಡಿಯೂರಪ್ಪ ಪ್ರಶಸ್ತಿ ಪ್ರಕಟಿಸಿದ್ದಾರೆ. ಈ ಬಾರಿ ರಾಜ್ಯ ಚಲನಚಿತ್ರ ಪ್ರಶಸ್ತಿಗೆ ಆಯ್ಕೆಯಾಗಿರುವ ಪುರಸ್ಕೃತರು “ಉದಯವಾಣಿ’ ಜೊತೆ ತಮ್ಮ ಅಭಿಪ್ರಾಯಗಳ ಹಂಚಿಕೊಂಡಿದ್ದಾರೆ.

“ನಾನು “ಅಮ್ಮನ ಮನೆ’ ಚಿತ್ರದಲ್ಲಿ ಮತ್ತೆ ಬಣ್ಣ ಹಚ್ಚುತ್ತೇನೆ ಅಂತಾನೇ ಅಂದುಕೊಂಡಿರಲಿಲ್ಲ. ಈಗ ನಿರೀಕ್ಷಿಸದೆಯೇ ಅದಕ್ಕೆ ಅತ್ಯುತ್ತಮ ನಟ ಪ್ರಶಸ್ತಿ ಕೂಡ ಬಂದಿದೆ. ಇಷ್ಟು ವರ್ಷಗಳಲ್ಲಿ ನನ್ನನ್ನು ಹೊರತುಪಡಿಸಿ, ನಮ್ಮ ಕುಟುಂಬದಲ್ಲಿ ಎಲ್ಲರಿಗೂ ಬೇರೆ ಬೇರೆ ಪ್ರಶಸ್ತಿಗಳು ಬಂದಿದ್ದವು. ಈಗ ನನಗೂ ಪ್ರಶಸ್ತಿ ಬರುವ ಮೂಲಕ ಇಡೀ ಕುಟುಂಬದಲ್ಲಿ ಎಲ್ಲರಿಗೂ ಪ್ರಶಸ್ತಿ ಬಂದಂತಾಗಿದೆ. ಅನಿರೀಕ್ಷಿತವಾಗಿ ಇಂಥದ್ದೊಂದು ಪ್ರಶಸ್ತಿ ಹುಡುಕಿಕೊಂಡು ಬಂದಿರುವುದಕ್ಕೆ ತುಂಬ ಖುಷಿಯಾಗುತ್ತಿದೆ.’
-ರಾಘವೇಂದ್ರ ರಾಜಕುಮಾರ್‌, ನಟ

“ನನ್ನ ವೃತ್ತಿ ಜೀವನದಲ್ಲಿ ಇಲ್ಲಿಯವರೆಗೆ ಮಾಡಿದ ಚಿತ್ರಗಳಲ್ಲಿ ಅತ್ಯುತ್ತಮ ಎನಿಸಿದ, ನನಗೆ ವೈಯಕ್ತಿಕವಾಗಿ ಅತಿ ಖುಷಿಕೊಟ್ಟ ಸಿನಿಮಾಗಳಲ್ಲಿ “ಆ ಕರಾಳ ರಾತ್ರಿ’ ಕೂಡ ಒಂದು. ಜನ ಇಷ್ಟಪಟ್ಟು ಗೆಲ್ಲಿಸಿದ ಸಿನಿಮಾಕ್ಕೆ ಈಗ ರಾಜ್ಯ ಪ್ರಶಸ್ತಿ ಬಂದಿರುವುದು ಖುಷಿಯನ್ನು ಡಬಲ್‌ ಮಾಡಿದೆ. ಈ ಪ್ರಶಸ್ತಿ ನನ್ನ ಜವಾಬ್ದಾರಿಯನ್ನು ಇನ್ನಷ್ಟು ಹೆಚ್ಚಿಸಿದೆ. ಸಿನಿಮಾವನ್ನು ಪ್ರಶಸ್ತಿಗೆ ಗುರುತಿಸಿದ ಎಲ್ಲರಿಗೂ ಧನ್ಯವಾದಗಳು.’
-ದಯಾಳ್‌ ಪದ್ಮನಾಭನ್‌, “ಆ ಕರಾಳ ರಾತ್ರಿ’ ಚಿತ್ರದ ನಿರ್ದೇಶಕ

“ಸಾಮಾನ್ಯ ಪ್ರೇಕ್ಷಕನಿಗೆ ಮನರಂಜನೆ ಜೊತೆಗೊಂದು ಮೆಸೇಜ್‌ ಸಿಗಬೇಕು ಎಂಬುದಷ್ಟೆ ನಮ್ಮ “ಒಂದಲ್ಲಾ ಎರಡಲ್ಲಾ’ ಚಿತ್ರದ ಆಶಯವಾಗಿತ್ತು. ಅದರಂತೆ ಸಿನಿಮಾವನ್ನು ಜನ ಸ್ವೀಕರಿಸಿ, ಗೆಲ್ಲಿಸಿದರು. ಜನ ಇಷ್ಟಪಟ್ಟ ಮೇಲೆ ಅದು ಪ್ರಶಸ್ತಿಗಳಿಗೆ ಕರೆದುಕೊಂಡು ಹೋಗುತ್ತಿದೆ. ಅನಿರೀಕ್ಷಿತವಾಗಿ ಬಂದ ಪ್ರಶಸ್ತಿಯಿಂದ ಖುಷಿಯಾಗುತ್ತಿದೆ. ಈ ಗೆಲುವು ಇಡೀ ತಂಡಕ್ಕೆ ಸೇರಬೇಕು. ಈ ಪ್ರಶಸ್ತಿ ಮುಂದೆ ಇಂಥ ಇನ್ನಷ್ಟು ಚಿತ್ರಗಳನ್ನು ಮಾಡಲು ಉತ್ಸಾಹ ಕೊಟ್ಟಂತಿದೆ.’
-ಡಿ. ಸತ್ಯ ಪ್ರಕಾಶ್‌, “ಒಂದಲ್ಲಾ ಎರಡಲ್ಲಾ’ ಚಿತ್ರದ ನಿರ್ದೇಶಕ

“ಮೂಕಜ್ಜಿಯ ಕನಸುಗಳು’ ಕನ್ನಡಿಗರಿಗೆ ಚಿರಪರಿಚಿತ ಜನಪ್ರಿಯ ಕೃತಿ. ಅದು ರಚನೆಯಾಗಿ 50 ವರ್ಷಗಳ ನಂತರ ಅದನ್ನು ಚಿತ್ರರೂಪದಲ್ಲಿ ತೆರೆಗೆ ತರುವ ಪ್ರಯತ್ನ ಮಾಡಿದ್ದೆವು. ಚಿತ್ರ ಇತ್ತೀಚೆಗಷ್ಟೆ ಬಿಡುಗಡೆಯಾಗಿ ಯಶಸ್ವಿ 50 ದಿನಗಳ ಪ್ರದರ್ಶನ ಕಾಣುತ್ತಿರುವಾಗಲೆ, ಚಿತ್ರಕಥೆಗೆ ಪ್ರಶಸ್ತಿ ಬಂದಿದೆ. ಇದು ನಿಜವಾಗಿಯೂ ಕಾರಂತರಿಗೆ ಸಂದ ಗೌರವ. ಇನ್ನು ವೈಯಕ್ತಿಕವಾಗಿ ನನ್ನ ಕೆಲಸವನ್ನು ಗುರುತಿಸಿ ಪುಟ್ಟಣ್ಣ ಕಣಗಾಲ್‌ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಖುಷಿ ತಂದಿದೆ.’
-ಪಿ. ಶೇಷಾದ್ರಿ, ಹಿರಿಯ ನಿರ್ದೇಶಕ

ಟಾಪ್ ನ್ಯೂಸ್

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.