ಕಾಮಿಡಿಗೆ ಕನಸಿನಲ್ಲೂ ನಗಬಹುದು!


Team Udayavani, Dec 7, 2019, 10:34 AM IST

cinema-tdy-3

ಅದೊಂದು ಶ್ರೀಮಂತ ಕುಟುಂಬದ ಮನೆ. ಒಮ್ಮೆ ವಾರಾಂತ್ಯದಲ್ಲಿ ಆ ಮನೆಯಲ್ಲಿರುವವರೆಲ್ಲರೂ ಬೇರೆ ಬೇರ ಕಾರಣಗಳಿಂದ ಮನೆಯಿಂದ ಹೊರ ಹೋಗಬೇಕಾದ ಪರಿಸ್ಥಿತಿ ಬರುತ್ತದೆ. ಹೀಗಿರುವಾಗ ಮನೆಯಲ್ಲಿ ವಯಸ್ಸಿಗೆ ಬಂದ ಮಗನನ್ನು ಬಿಟ್ಟು ಎಲ್ಲರೂ ತಮ್ಮ ತಮ್ಮ ಕೆಲಸಗಳಿಗೆ ಹೊರಡುತ್ತಾರೆ. ಅದೇ ಸಂದರ್ಭದಲ್ಲಿ, ಆ ಮನೆಗೆ ಅಪರಿಚಿತ

ಹುಡುಗಿಯೊಬ್ಬಳ ಆಗಮನವಾಗುತ್ತದೆ. ಒಬ್ಬನೇ ಹುಡುಗನಿರುವ ಮನೆಗೆ ಹುಡುಗಿಯೊಬ್ಬಳು ಬಂದ ನಂತರ ಅಲ್ಲಿ ಏನೇನಾಗಬಹುದು? ಸಾಮಾನ್ಯವಾಗಿ ಎಲ್ಲರೂ ಏನು ಊಹಿಸಿಕೊಳ್ಳುತ್ತಾರೋ, ಅದೆಲ್ಲದಕ್ಕಿಂತ ಬೇರೆಯದ್ದೇ ಅಲ್ಲಿ ನಡೆಯುತ್ತದೆ. ಹಾಗಾದ್ರೆ, ಆ ಮನೆಯಲ್ಲಿ ಏನೇನು ನಡೆಯುತ್ತದೆ ಅನ್ನೋ ಕುತೂಹಲವಿದ್ದರೆ, ಈ ವಾರ ತೆರೆಗೆ ಬಂದಿರುವ ಕಾಮಿಡಿ ಕಂ ಸಸ್ಪೆನ್ಸ್‌ ಕಥಾಹಂದರದ ಹಗಲು ಕನಸುಚಿತ್ರ ನೋಡಲು ಅಡ್ಡಿಯಿಲ್ಲ.

ಕನ್ನಡದ ಹಿರಿಯ ನಿರ್ದೇಶಕ ದಿನೇಶ್‌ ಬಾಬು ಹಗಲು ಕನಸುಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿ ತೆರೆಗೆ ತಂದಿದ್ದಾರೆ. ಬಾಬು ನಿರ್ದೇಶನದ ಹಿಂದಿನ ಚಿತ್ರಗಳಲ್ಲಿ ಇರುವಂತೆ ಹಗಲು ಕನಸುಚಿತ್ರದಲ್ಲೂ ಒಂದಷ್ಟು ಟ್ವಿಸ್ಟ್‌, ಟರ್ನ್ ಜೊತೆಯಲ್ಲಿ ಕಾಮಿಡಿ ಸೇರಿಕೊಂಡು ಪ್ರೇಕ್ಷಕರನ್ನು ಕ್ಲೈಮ್ಯಾಕ್ಸ್‌ವರೆಗೂ ಸುಲಲಿತವಾಗಿ ಕರೆದುಕೊಂಡು ಹೋಗುತ್ತದೆ. ನಿರ್ದೇಶಕ ಬಾಬು ಬಾಬು ಒಂದೇ ಮನೆಯಲ್ಲಿ, ಆರೇಳು ಪಾತ್ರಗಳನ್ನು ಇಟ್ಟುಕೊಂಡು ಎಲ್ಲೂ ಬೋರ್‌ ಹೊಡೆಸದಂತೆ ಚಿತ್ರವನ್ನು ಕಟ್ಟಿಕೊಟ್ಟಿದ್ದಾರೆ. ಅದು ಚಿತ್ರದ ದೊಡ್ಡ ಹೆಗ್ಗಳಿಕೆ ಕೂಡ ಹೌದು.

ಇನ್ನು ಚಿತ್ರದಲ್ಲಿ ಕಲಾವಿದರ ಅಭಿನಯದ ಬಗ್ಗೆ ಹೇಳುವುದಾದರೆ ಆನಂದ್‌ ಎಂದಿನಂತೆ ಲೀಲಾಜಾಲವಾಗಿ ತಮ್ಮ ಪಾತ್ರವನ್ನು ನಿರ್ವಹಿಸಿದ್ದಾರೆ. ನವನಟಿ ಸನಿಹಾ ಯಾದವ್‌ ಕೂಡ ಮೊದಲ ಚಿತ್ರದಲ್ಲೆ ತಮ್ಮ ಅಭಿನಯದಲ್ಲಿ ಗಮನ ಸೆಳೆಯುತ್ತಾರೆ. ಉಳಿದಂತೆ ವಾಣಿಶ್ರೀ, ನಾರಾಯಣ ಸ್ವಾಮಿ, ನೀನಾಸಂ ಅಶ್ವಥ್‌, ಮನದೀಪ್‌ ರಾಯ್‌, ಅಶ್ವಿ‌ನ್‌ ಹಾಸನ್‌, ಚಿತ್ಕಲಾ ಬಿರಾದಾರ್‌, ಶ್ವೇತಾ ಎಲ್ಲರೂ ತಮ್ಮ ಪಾತ್ರವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ.

ಚಿತ್ರದ ಸಂಕಲನ ಕಾರ್ಯ ಇನ್ನಷ್ಟು ಮೊನಚಾಗಿದ್ದರೆ ಮತ್ತು ಹಿನ್ನೆಲೆ ಸಂಗೀತದ ಕಡೆಗೆ ನಿರ್ದೇಶಕರು ಇನ್ನಷ್ಟು ಗಮನ ಕೊಟ್ಟಿದ್ದರೆ, “ಹಗಲು ಕನಸುಇನ್ನಷ್ಟು ಪರಿಣಾಮಕಾರಿಯಾಗಿ ತೆರೆಮೇಲೆ ತರಬಹುದಿತ್ತು. ಚಿತ್ರದ ಕೆಲ ಸನ್ನಿವೇಶಗಳಿಗೆ ಕತ್ತರಿ ಹಾಕಿದ್ದರೆ,ಚಿತ್ರಕ್ಕೆ ಕೊಂಚ ವೇಗ ಕೊಟ್ಟಿದ್ದರೆ, “ಹಗಲು ಕನಸುಬೇಗ ಮುಗಿಸಬಹುದಿತ್ತು. ಒಟ್ಟಾರೆ ಮಾಮೂಲಿ ಲವ್‌, ಆ್ಯಕ್ಷನ್‌, ಹಾರರ್‌, ಥ್ರಿಲ್ಲರ್‌ ಚಿತ್ರಗಳನ್ನು ನೋಡಿ ಬೋರ್‌ ಆಗಿದೆ ಎನ್ನುವ ಪ್ರೇಕ್ಷಕರು, ಅತಿಯಾದ ನಿರೀಕ್ಷೆಯನ್ನು ಇಟ್ಟುಕೊಳ್ಳದೆ ಹೋದರೆ ಹಗಲು ಕನಸುಒಂದೊಳ್ಳೆ ಮನರಂಜನೆ ನೀಡುತ್ತದೆ.

 

ಕಾರ್ತಿಕ್‌

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.