ಎಂದೆಂದಿಗೂ ನಮ್ಮ ಹೃದಯದಲ್ಲಿ.. ಹುಟ್ಟುಹಬ್ಬದಂದು ʼಪರಮಾತ್ಮʼನನ್ನು ಸ್ಮರಿಸಿದ ಚಿತ್ರರಂಗ


Team Udayavani, Mar 17, 2024, 4:47 PM IST

12

ಬೆಂಗಳೂರು: ಇಂದು ಪವರ್‌ ಸ್ಟಾರ್‌ ಹುಟ್ಟುಹಬ್ಬದ ಸವಿ ನೆನಪು. ದೈಹಿಕವಾಗಿ ಅಪ್ಪು ನಮ್ಮೊಂದಿಗೆ ಇರದಿದ್ದರೂ, ಅವರ ಸರಳತೆಯ ವ್ಯಕ್ತಿತ್ವ, ನಗುಮುಖದ ನೋಟ ಇಂದಿಗೂ ಅಭಿಮಾನಿಗಳ ಹೃದಯದಲ್ಲಿ ಹಾಗೆಯೇ ಇದೆ.

ಅಪ್ಪು ಹುಟ್ಟುಹಬ್ಬವನ್ನು ಅವರ ಅಭಿಮಾನಿಗಳು ʼಸ್ಪೂರ್ತಿಯ ದಿನʼವನ್ನಾಗಿ ಆಚರಿಸಿಕೊಂಡಿದ್ದಾರೆ. ಅನ್ನದಾನ, ರಕ್ತದಾನ ಸೇರಿದಂತೆ ಹತ್ತಾರು ಕಡೆ ನೂರಾರು ಫ್ಯಾನ್ಸ್‌ ಗಳು ಸಾಮಾಜಿಕ ಕಾರ್ಯವನ್ನು ಮಾಡಿದ್ದಾರೆ. ಅಪ್ಪು ಸಮಾಧಿ ಸ್ಥಳಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದ್ದಾರೆ.

ಥಿಯೇಟರ್‌ ನಲ್ಲಿ ʼಜಾಕಿʼ ಸಿನಿಮಾವನ್ನು ರೀ ರಿಲೀಸ್‌ ಮಾಡಲಾಗಿದೆ. ಎಲ್ಲೆಡೆ ʼಜಾಕಿʼ ಹೌಸ್‌ ಫುಲ್‌ ಪ್ರದರ್ಶನ ಕಾಣುತ್ತಿದೆ. ಅಪ್ಪು ಬಾಸ್‌ ನ್ನು ಬಿಗ್‌ ಸ್ಕ್ರೀನ್‌ ನಲ್ಲಿ ನೋಡಿ ಅಭಿಮಾನಿಗಳ ಜೈಕಾರ ಹಾಕಿದ್ದಾರೆ.

ಸೋಶಿಯಲ್‌ ಮೀಡಿಯಾದಲ್ಲೆಡೆ ಅಪ್ಪು ಹುಟ್ಟುಹಬ್ಬಕ್ಕೆ ವಿಶ್‌ ಮಾಡಿ, ಸಾವಿರಾರು ಮಂದಿ ಅವರನ್ನು ಸ್ಮರಿಸಿದ್ದಾರೆ.

ʼʼಎಂದೆಂದಿಗೂ ನಮ್ಮ ಹೃದಯದಲ್ಲಿ.. ಅಪ್ಪು ಅವರು ತಮ್ಮ ಅಪ್ರತಿಮ ಪ್ರತಿಭೆ, ಕರುಣೆ ಮತ್ತು ಮಾನವೀಯತೆಯಿಂದ ನಮ್ಮ ಹೃದಯಾಂತರಾಳವನ್ನು ಬೆಳಗಿಸುತ್ತಲೇ ಇದ್ದಾರೆ. ಅಪ್ಪು ಅವರು ಮಾನವೀಯತೆಯಲ್ಲಿ ಇರಿಸಿದ್ದ ಅಚಲ ಬದ್ಧತೆ ಅವರ ಹಾದಿಯಲ್ಲಿ ನಡೆಯಲು ನಮಗೆ ಸದಾ ಸ್ಪೂರ್ತಿದಾಯಕವಾಗಿರುತ್ತದೆ” ಎಂದು ಪತ್ನಿ ಅಶ್ವಿನಿ ಅವರು ಬರೆದುಕೊಂಡಿದ್ದಾರೆ.

ಹಿರಿಯ ಸಹೋದರ ಶಿವರಾಜ್‌ ಕುಮಾರ್‌ ಅವರು, ಅಪ್ಪು ಆಗಿ ಬಂದ ನೀನು ಪುನೀತನಾಗಿ ಎಲ್ಲರ ಮನಸ್ಸಲ್ಲೂ ಭದ್ರವಾಗಿ ಇದ್ದುಬಿಟ್ಟೆ. ಜನ ನಿನ್ನಲ್ಲಿ ದೇವರನ್ನು ಕಾಣುತ್ತಾರೆ, ಎಷ್ಟೋ ಜನಕ್ಕೆ ನೀನು ಮಾರ್ಗದರ್ಶಿ, ಅವರ ಆರಾಧ್ಯ ದೈವ, ಕೋಟಿ ಕೋಟಿ ಅಭಿಮಾನಿಗಳಿಗೆ ಪ್ರೀತಿಯ ಪವ‌ರ್ ಸ್ಟಾರ್.

ಆದರೆ ನನಗೆ ಎಂದೆಂದಿಗೂ ನನ್ನ ಪುಟ್ಟ ತಮ್ಮ. ನನ್ನ ಕೈ ಹಿಡಿದು ನಡೆದ ತಮ್ಮ, ನಿನ್ನ ನಗುವಲ್ಲಿ ನನ್ನ ಸಂತೋಷ ಹುಡುಕಿ ಕೊಟ್ಟ ತಮ್ಮ, ನನ್ನ ಎದೆಯ ಮೇಲೆ ಮಲಗಿದ ತಮ್ಮ, ನನ್ನ ಮನಸಲ್ಲೇ ಸದಾ ರಾಜನಂತೆ ಬಾಳುವ ತಮ್ಮ.ಹುಟ್ಟುಹಬ್ಬದ ಶುಭಾಶಯಗಳು ಅಪ್ಪು ಎಂದು ಫೋಟೋ ಹಂಚಿಕೊಂಡು ಬರೆದುಕೊಂಡಿದ್ದಾರೆ.

ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಅವರು, “ನಮ್ಮೆಲ್ಲರ ಹೃದಯಗಳಲ್ಲಿ ಸದಾ ನೆಲೆಸಿರುವ ಪರಮಾತ್ಮ, ನಗುಮುಖದ ಸರದಾರ, ಕರ್ನಾಟಕ ರತ್ನ ಡಾ. ಪುನೀತ್ ರಾಜಕುಮಾರ್ Sir ಅವರ ನೆನಪಿನಲ್ಲಿ ನಾವು..” ಎಂದು ಬರೆದುಕೊಂಡು ಹುಟ್ಟುಹಬ್ಬದ ಶುಭಾಶಯವನ್ನು ಕೋರಿದ್ದಾರೆ.

“ಪುನೀತ್ ರಾಜ್ ಕುಮಾರ್ ಅವರ ಎಲ್ಲಾ ಸ್ನೇಹಿತರು ಮತ್ತು ಅಭಿಮಾನಿಗಳಿಗೆ ಶುಭ ದಿನ. ಈ ದಿನ ಎಲ್ಲರ ಮುಖದಲ್ಲಿ ನಗುವನ್ನು ತರಲಿ. ನಿಮ್ಮನ್ನು ನಾನು ಯಾವಾಗಲೂ ಮಿಸ್‌ ಮಾಡಿಕೊಳ್ಳುತ್ತೇನೆ ಸ್ನೇಹಿತ. ಎಲ್ಲರಿಗೂ ಮಾರ್ಚ್ 17 ರ ಶುಭಾಶಯಗಳು” ಎಂದು ಕಿಚ್ಚ ಸುದೀಪ್‌ ಬರೆದುಕೊಂಡಿದ್ದಾರೆ.

ನಟ ಗೋಲ್ಡನ್‌ ಸ್ಟಾರ್‌ ಗಣೇಶ್‌, ಸಾಯಿ ಕುಮಾರ್‌, ಶ್ರೀಮುರಳಿ ಸೇರಿದಂತೆ ಹಲವು ಸೆಲೆಬ್ರಿಟಿಗಳು ಅಪ್ಪು ಅವರ ಹುಟ್ಟುಹಬ್ಬದಂದು ಅವರನ್ನು ಸ್ಮರಿಸಿದ್ದಾರೆ.

 

 

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.