![Thirthahalli: ಅರಣ್ಯ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ಆರಗ ಜ್ಞಾನೆಂದ್ರ](https://www.udayavani.com/wp-content/uploads/2024/07/araga-415x266.jpg)
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Team Udayavani, Apr 18, 2024, 5:18 PM IST
![ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!](https://www.udayavani.com/wp-content/uploads/2024/04/3-13-620x372.jpg)
ಬೆಂಗಳೂರು: ನಟ – ನಿರ್ದೇಶಕ ರಿಷಬ್ ಶೆಟ್ಟಿ ಅವರ ʼಕಾಂತಾರ ಪ್ರೀಕ್ವೆಲ್ʼ ಸಿನಿಮಾಕ್ಕಾಗಿ ಪ್ರೇಕ್ಷಕರು ಕಾಯುತ್ತಿದ್ದಾರೆ. ಮುಹೂರ್ತದ ಬಳಿಕ ಸಿನಿಮಾ ತಂಡದಿಂದ ಯಾವ ಅಪ್ಡೇಟ್ ಕೂಡ ಹೊರಬಿದ್ದಿಲ್ಲ.
ʼಕಾಂತಾರ ಪ್ರೀಕ್ವೆಲ್ʼ ನಲ್ಲಿ ನಟಿಸುವ ಕಲಾವಿದರ ಬಗ್ಗೆ ಇನ್ನು ಕೂಡ ಯಾವ ಮಾಹಿತಿಯೂ ಹೊರಬಿದಿಲ್ಲ. ಯಾರೆಲ್ಲಾ ನಟಿಸುತ್ತಾರೆ ಎಂಬ ಕುತೂಹಲ ಪ್ರೇಕ್ಷಕರಲ್ಲಿ ಹೆಚ್ಚಿದೆ. ಕೆಲ ದಿನಗಳ ಹಿಂದೆ ಜೂ.ಎನ್ ಟಿಆರ್ ʼಕಾಂತಾರʼದ ಭಾಗವಾಗಲಿದ್ದಾರೆ ಎನ್ನುವ ವದಂತಿಗಳು ಸೋಶಿಯಲ್ ಮೀಡಿಯಾದಲ್ಲಿ ಹರದಾಡಿತ್ತು.
ಇದೀಗ ಮತ್ತೊಂದು ನಟನ ಹೆಸರು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಮಾಲಿವುಡ್ ಸೂಪರ್ ಸ್ಟಾರ್ ಮೋಹನ್ ಲಾಲ್ ಅವರನ್ನು ರಿಷಬ್ ಶೆಟ್ಟಿ ದಂಪತಿ ಭೇಟಿ ಆಗಿದ್ದಾರೆ. ದಿಗ್ಗಜರನ್ನು ಭೇಟಿ ಆದದ್ದಕ್ಕೆ ಸಂತೋಷವಿದೆ ಎಂದು ರಿಷಬ್ ಫೋಟೋವನ್ನು ಹಂಚಿಕೊಂಡಿದ್ದಾರೆ.
ಈ ಫೋಟೋ ನೋಡಿದ ಬಳಿಕ ನೆಟ್ಟಿಗರು ನಾನಾ ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ. ಹೆಚ್ಚಾಗಿ ಮೋಹನ್ ಲಾಲ್ ಅವರು ʼಕಾಂತಾರʼ ಸಿನಿಮಾದಲ್ಲಿ ನಟಿಸಲಿದ್ದಾರೆ. ಅದಕ್ಕಾಗಿ ಈ ಭೇಟಿ ಎಂದು ಕಮೆಂಟ್ ಮಾಡಿದ್ದಾರೆ. ಇನ್ನು ಕೆಲವರು ಇಬ್ಬರು ಜೊತೆಯಾಗಿ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಕಮೆಂಟ್ ಮಾಡಿದ್ದಾರೆ.
ಕುಂದಾಪುರದಲ್ಲಿ ಚಿತ್ರೀಕರಣಕ್ಕಾಗಿ ದೊಡ್ಡ ಸೆಟ್ ವೊಂದನ್ನು ಹಾಕಲಾಗಿದೆ. ಶೀಘ್ರದಲ್ಲಿ ಸಿನಿಮಾದ ಚಿತ್ರೀಕರಣ ಆರಂಭಗೊಳ್ಳುವ ಸಾಧ್ಯತೆಯಿದೆ.
ಮೋಹನ್ ಲಾಲ್ ಬುಧವಾರ(ಏ.17 ರಂದು) ಕೊಲ್ಲೂರು ಶ್ರೀಮೂಕಾಂಬಿಕ ದೇಗುಲಕ್ಕೆ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಈಗಾಗಲೇ ಚಿತ್ರತಂಡ ತಂಡವು ಜೂನಿಯರ್ ಆರ್ಟಿಸ್ಟ್ಗಳಿಗೆ ಆಡಿಷನ್ಗಳನ್ನು ನಡೆಸಿದೆ. ಪ್ರಮುಖ ಪಾತ್ರದಲ್ಲಿ ಯಾರೆಲ್ಲಾ ನಟಿಸಲಿದ್ದಾರೆ ಎನ್ನುವ ಬಗ್ಗೆ ಇನ್ನಷ್ಟೇ ಮಾಹಿತಿ ಬರಬೇಕಿದೆ.
ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ʼಕಾಂತಾರ ಪ್ರೀಕ್ವೆಲ್ʼ ಪಂಜರ್ಲಿ ದೈವದ ಹುಟ್ಟು ಮತ್ತು ಇತಿಹಾಸದ ಕಥೆಯನ್ನೊಳಗೊಳ್ಳಲಿದೆ ಎನ್ನಲಾಗಿದೆ. ಮುಂದಿನ ವರ್ಷ ಸಿನಿಮಾ ತೆರೆ ಕಾಣುವ ಸಾಧ್ಯತೆಯಿದೆ.
View this post on Instagram
ಟಾಪ್ ನ್ಯೂಸ್
![Thirthahalli: ಅರಣ್ಯ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ಆರಗ ಜ್ಞಾನೆಂದ್ರ](https://www.udayavani.com/wp-content/uploads/2024/07/araga-415x266.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Thirthahalli: ಅರಣ್ಯ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ಆರಗ ಜ್ಞಾನೆಂದ್ರ](https://www.udayavani.com/wp-content/uploads/2024/07/araga-150x96.jpg)
Thirthahalli: ಅರಣ್ಯ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ಆರಗ ಜ್ಞಾನೆಂದ್ರ
![1-aasa](https://www.udayavani.com/wp-content/uploads/2024/07/1-aasa-150x88.jpg)
Paris Olympics ; ಮೊದಲ ಎರಡು ಚಿನ್ನದ ಪದಕ ಗೆದ್ದ ಚೀನಾ!
![Hostelನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ನಾಪತ್ತೆ.. ನದಿ ದಂಡೆಯಲ್ಲಿ ಬ್ಯಾಗ್, ಮೊಬೈಲ್ ಪತ್ತೆ](https://www.udayavani.com/wp-content/uploads/2024/07/missing-4-150x99.jpg)
Hostelನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ನಾಪತ್ತೆ.. ನದಿ ದಂಡೆಯಲ್ಲಿ ಬ್ಯಾಗ್, ಮೊಬೈಲ್ ಪತ್ತೆ
![9-uv-fusion](https://www.udayavani.com/wp-content/uploads/2024/07/9-uv-fusion-150x90.jpg)
College Days: ಕಾಲೇಜೆಂಬ ನೆನಪಿನ ದೋಣಿಯಲಿ
![new-parli](https://www.udayavani.com/wp-content/uploads/2024/07/new-parli-150x85.jpg)
Lok Sabha, Assembly ಕ್ಷೇತ್ರಗಳ ಪುನರ್ವಿಂಗಡಣೆ: ದಕ್ಷಿಣ ತಕರಾರು ಏನು?ಮಾಹಿತಿ ಇಲ್ಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.