ಇಂದಿನಿಂದ ರಿಷಭ್‌ ಹೀರೋಯಿಸಂ: ಹೊಸ ಜಾನರ್‌ ಜತೆ ಶೆಟ್ರ ಎಂಟ್ರಿ


Team Udayavani, Mar 5, 2021, 8:51 AM IST

rishab shetty hero movie

“ಬೆಲ್‌ ಬಾಟಂ’ ಚಿತ್ರದ ಸಕ್ಸಸ್‌ ಬಳಿಕ ರಿಷಭ್‌ ಶೆಟ್ಟಿ ನಾಯಕನಾಗಿ ಕಾಣಿಸಿಕೊಂಡಿರುವ ಮತ್ತೂಂದು ಚಿತ್ರ “ಹೀರೋ’ ಈ ವಾರ ತೆರೆಗೆ ಬರುತ್ತಿದೆ. “ರಿಷಭ್‌ ಶೆಟ್ಟಿ ಫಿಲಂಸ್‌’ ಬ್ಯಾನರ್‌ನಲ್ಲಿ ರಿಷಭ್‌ ಶೆಟ್ಟಿ ಅವರೇ ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ಭರತ್‌ ರಾಜ್‌ ಆ್ಯಕ್ಷನ್‌-ಕಟ್‌ ಹೇಳಿದ್ದಾರೆ. ಚಿತ್ರದಲ್ಲಿ “ಮಗಳು ಜಾನಕಿ’ ಧಾರಾವಾಹಿ ಖ್ಯಾತಿಯ ನಟಿ ಗಾನವಿ ಲಕ್ಷ್ಮಣ್‌ ನಾಯಕಿಯಾಗಿ ಅಭಿನಯಿಸಿದ್ದಾರೆ.

ಇನ್ನೊಂದು ವಿಶೇಷವೆಂದರೆ ಹೀರೋ’ ಚಿತ್ರದ ಸಂಪೂರ್ಣ ಚಿತ್ರೀಕರಣವನ್ನು ಚಿತ್ರತಂಡ ಕೋವಿಡ್‌ ಲಾಕ್‌ಡೌನ್‌ ಅವಧಿಯಲ್ಲಿ ಮಾಡಿ ಮುಗಿಸಿರುವುದ ಈ ಬಗ್ಗೆ ಮಾತನಾಡುವ ಚಿತ್ರದ ನಾಯಕ ನಟ ಕಂ ನಿರ್ಮಾಪಕ ರಿಷಭ್‌ ಶೆಟ್ಟಿ, “ಎಲ್ಲ ಸಿಗುತ್ತಿರುವ ಸಮಯದಲ್ಲೇ ಪ್ಲಾನಿಂಗ್‌ ಪ್ರಕಾರ ಸಿನಿಮಾ ಶೂಟಿಂಗ್‌ ಮಾಡೋದು ಕಷ್ಟ. ಹೀಗಿರುವಾಗ, ಲಾಕ್‌ಡೌನ್‌ ಟೈಮ್‌ನಲ್ಲಿ ನಾವು ಶೂಟಿಂಗ್‌ ಪ್ಲಾನ್‌ ಮಾಡಿಕೊಂಡಿದ್ದೆವು. ಹಾಗಾಗಿ ಎಷ್ಟು ಸಾಧ್ಯವೋ ಅಷ್ಟು, ಕಡಿಮೆ ಕಲಾವಿದರು – ತಂತ್ರಜ್ಞರನ್ನು ಇಟ್ಟುಕೊಂಡ ಶೂಟಿಂಗ್‌ ಮಾಡಲು ಮುಂದಾದೆವು. ತುಂಬಾ ರಿಸ್ಕ್ ಇದ್ದರೂ, ನಮಗೆ ಬೇರೆ ದಾರಿ ಇರಲಿಲ್ಲ. ಅಂದುಕೊಂಡಂತೆ ಸಿನಿಮಾ ಶೂಟಿಂಗ್‌ ಮಾಡಿ ಮುಗಿಸುವುದು ನಮಗಿದ್ದ ದೊಡ್ಡ ಚಾಲೆಂಜ್‌ ಆಗಿತ್ತು. ಅದರಂತೆ, ಕೊನೆಗೂ ಕೇವಲ 24 ಜನರ ಟೀಮ್‌ ಇಟ್ಟುಕೊಂಡು ಅಂದುಕೊಂಡಂತೆ ಶೂಟಿಂಗ್‌ ಮಾಡಿ ಮುಗಿಸಿದೆವು. ಇಡೀ ಟೀಮ್‌ ಎಫ‌ರ್ಟ್‌ನಿಂದ ಇಂಥದ್ದೊಂದು ಸಿನಿಮಾ ಮಾಡೋದಕ್ಕೆ ಸಾಧ್ಯವಾಯ್ತು. ನಿಜವಾಗ್ಲೂ ಹೇಳಬೇಕು ಅಂದ್ರೆ, “ಹೀರೋ’ ಸಿನಿಮಾದಲ್ಲಿ ತೆರೆಮುಂದೆ, ತೆರೆಹಿಂದೆ ಎಲ್ಲರೂ, ಎಲ್ಲ ಕೆಲಸವನ್ನೂ ಮಾಡಿದ್ದಾರೆ. ಇವರೇ ಸಿನಿಮಾದ ನಿಜವಾದ “ಹೀರೋ’ಗಳು’ ಎನ್ನುತ್ತಾರೆ.

ಇದನ್ನೂ ಓದಿ:“ಒಟಿಟಿ ಶೋ ಸೆನ್ಸಾರ್‌ ಅಗತ್ಯ’

ಈಗಾಗಲೇ “ಹೀರೋ’ ಚಿತ್ರದ ಪೋಸ್ಟರ್‌, ಟ್ರೇಲರ್‌ ಬಿಡುಗಡೆಯಾಗಿದ್ದು, ಇದೊಂದು ಕ್ರೈಂ-ಥ್ರಿಲ್ಲರ್‌ ಹಾಗೂ ಕಾಮಿಡಿ ಜಾನರ್‌ ಕಥೆ ಹೊಂದಿದೆ ಎಂದು ಹೇಳಲಾಗುತ್ತಿದೆ. ಆದರೆ ಚಿತ್ರದ ಕಥಾಹಂದರದ ಗುಟ್ಟು ಬಿಟ್ಟುಕೊಡದ ಚಿತ್ರತಂಡ, ಅದನ್ನು ತೆರೆಮೇಲೆ ನೋಡಬೇಕು ಎನ್ನುತ್ತದೆ. ಸದ್ಯ ಕಳೆದ ಕೆಲ ದಿನಗಳಿಂದ ಭರ್ಜರಿಯಾಗಿ ಚಿತ್ರದ ಪ್ರಚಾರ ಕಾರ್ಯಗಳಲ್ಲಿ ನಿರತವಾಗಿರುವ ಚಿತ್ರತಂಡ, ಇಂದು “ಹೀರೋ’ವನ್ನು ತೆರೆಮೇಲೆ ತರುತ್ತಿದೆ.

ಚಿತ್ರದ ಬಿಡುಗಡೆಯ ತಯಾರಿ ಬಗ್ಗೆ ಮಾತನಾಡುವ ರಿಷಭ್‌ ಶೆಟ್ಟಿ, “ಕಳೆದ ಎರಡು ತಿಂಗಳಿನಿಂದ ಬೇರೆ ಬೇರೆ ರೀತಿಯಲ್ಲಿ ಸಿನಿಮಾದ ಪ್ರಮೋಶನ್‌ ಕೆಲಸಗಳನ್ನು ಮಾಡುತ್ತಿದ್ದೇವೆ. ಈಗಾಗಲೇ ರಿಲೀಸ್‌ ಆಗಿರುವ ಟ್ರೇಲರ್‌, ಹಾಡುಗಳಿಗೆ ಆಡಿಯನ್ಸ್‌ ಕಡೆಯಿಂದ ಒಳ್ಳೆಯ ರೆಸ್ಪಾನ್ಸ್‌ ಸಿಗುತ್ತಿದೆ. ಆಡಿಯನ್ಸ್‌ ಮತ್ತು ಇಂಡಸ್ಟ್ರಿ ಕಡೆಯಿಂದಲೂ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಯ ಮಾತುಗಳು ಕೇಳಿ ಬರುತ್ತಿದೆ. ಆ ನಿರೀಕ್ಷೆಯನ್ನು ತಲುಪುತ್ತೇವೆ ಎಂಬ ವಿಶ್ವಾಸದಲ್ಲಿ, ಈ ವಾರ “ಹೀರೋ’ ಸಿನಿಮಾ ರಿಲೀಸ್‌ ಮಾಡುತ್ತಿದ್ದೇವೆ’ ಎನ್ನುತ್ತಾರೆ.

“ಈ ವಾರ ಕರ್ನಾಟಕ ರಾಜ್ಯಾದ್ಯಂತ ಸುಮಾರು 160ಕ್ಕೂ ಅಧಿಕ ಸೆಂಟರ್‌ಗಳಲ್ಲಿ “ಹೀರೋ’ ಸಿನಿಮಾ ರಿಲೀಸ್‌ ಮಾಡಲು ಸಿದ್ಧತೆ ಮಾಡಿಕೊಂಡಿದ್ದೇವೆ. ಜೊತೆಗೆ ಕರ್ನಾಟಕದ ಹೊರಗಿನ ಕೆಲವು ರಾಜ್ಯಗಳಲ್ಲೂ ಸಿನಿಮಾ ರಿಲೀಸ್‌ ಆಗುತ್ತಿದೆ. ನಾಲ್ಕು ವಾರಗಳ ನಂತರ ಸಿನಿಮಾವನ್ನು ಓವರ್‌ಸೀಸ್‌ ಕೂಡ ರಿಲೀಸ್‌ ಮಾಡುವ ಪ್ಲಾನ್‌ ಮಾಡಿಕೊಳ್ಳುತ್ತಿದ್ದೇವೆ’ ಎನ್ನುತ್ತಾರೆ ರಿಷಭ್‌ ಶೆಟ್ಟಿ.

ಒಟ್ಟಾರೆ ಹೊಸ ವರ್ಷದಲ್ಲಿ ತೆರೆಮೇಲೆ “ಹೀರೋ’ ಮೂಲಕ ಹೊಸ ಎಂಟ್ರಿ ಕೊಡಲು ರೆಡಿಯಾಗಿರುವ ರಿಷಭ್‌ ಶೆಟ್ಟಿ, ಪ್ರೇಕ್ಷಕ ಪ್ರಭುಗಳಿಗೆ ಎಷ್ಟರ ಮಟ್ಟಿಗೆ ಇಷ್ಟವಾಗುತ್ತಾರೆ ಅನ್ನೋದನ್ನು ಕಾದು ನೋಡಬೇಕು.

ಜಿ. ಎಸ್‌. ಕಾರ್ತಿಕ ಸುಧನ್‌

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

marigold

Marigold; ನಿರ್ಮಾಪಕರ ಮೊಗದಲ್ಲಿ ಮಾರಿಗೋಲ್ಡ್‌ ನಗು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.