ರಿಷಿ ಈಗ ಸಕಲಕಲಾವಲ್ಲಭ


Team Udayavani, Jun 12, 2019, 3:01 AM IST

Rishi-(3)

“ಆಪರೇಷನ್‌ ಅಲಮೇಲಮ್ಮ’ ಚಿತ್ರದ ಬಳಿಕ ನಟ ರಿಷಿ ಬ್ಯುಝಿಯಾಗಿದ್ದು ಗೊತ್ತೇ ಇದೆ. ಆ ನಂತರ ಅವರು ಪುನೀತ್‌ರಾಜಕುಮಾರ್‌ ನಿರ್ಮಾಣದ “ಕವಲುದಾರಿ’ ಚಿತ್ರದಲ್ಲಿ ಕಾಣಿಸಿಕೊಂಡರು. ಅದರ ಜೊತೆ ಜೊತೆಯಲ್ಲೇ ಅವರು “ರಾಮನ ಅವತಾರ’, “ಸಾರ್ವಜನಿಕರಲ್ಲಿ ವಿನಂತಿ’ ಸೇರಿದಂತೆ ಕೈಯಲ್ಲಿನ್ನೂ ಎರಡು ಹೊಸ ಚಿತ್ರಗಳನ್ನಿಟ್ಟುಕೊಂಡು ಬಿಝಿಯಾಗಿದ್ದಾರೆ. ಅದರ ಬೆನ್ನಲ್ಲೇ ಅವರೀಗ ಮತ್ತೂಂದು ಹೊಸ ಚಿತ್ರಕ್ಕೆ ಜೈ ಎಂದಿದ್ದಾರೆ.

ಹೌದು, ಈ ಹಿಂದೆ ರಿಷಿ ಅವರು ಜೇಕಬ್‌ ವರ್ಗೀಸ್‌ ನಿರ್ದೇಶನದ ಚಿತ್ರದಲ್ಲಿ ನಟಿಸುವುದಾಗಿ ಹೇಳಿಕೊಂಡಿದ್ದರು. ಆಗ ಆ ಚಿತ್ರಕ್ಕೆ ನಾಮಕರಣ ಮಾಡಿರಲಿಲ್ಲ. ಈಗ ನಿರ್ದೇಶಕ ಜೇಕಬ್‌ ವರ್ಗೀಸ್‌ ಅವರು ನಾಮಕರಣ ಮಾಡಿದ್ದಾರೆ. ಹೌದು, ರಿಷಿ ಅಭಿನಯಿಸುತ್ತಿರುವ ಚಿತ್ರಕ್ಕೆ “ಸಕಲಕಲಾವಲ್ಲಭ’ ಎಂದು ಹೆಸರಿಡಲಾಗಿದೆ. ಅಲ್ಲಿಗೆ ಇದು ಕೂಡ ಮನರಂಜನೆಯ ಸಿನಿಮಾ ಎಂದು ಪ್ರತ್ಯೇಕವಾಗಿ ಹೇಳುವ ಅಗತ್ಯವಿಲ್ಲ.

ರಿಷಿ ಇಟ್ಟುಕೊಂಡು ಆ್ಯಕ್ಷನ್‌ ಚಿತ್ರ ಮಾಡುವ ಧೈರ್ಯ ಮಾಡುವುದು ಕಡಿಮೆ. ಯಾಕೆಂದರೆ, ರಿಷಿ ಅವರ ಮೊದಲ ಚಿತ್ರ “ಆಪರೇಷನ್‌ ಅಲಮೇಲಮ್ಮ’ ಪಕ್ಕಾ ಮನರಂಜನಾತ್ಮಕವಾಗಿತ್ತು. ಅದರ ಬಳಿಕ ಅವರು ಒಪ್ಪಿಕೊಂಡ “ಕವಲುದಾರಿ’ ಕೂಡ ಹೊಸ ಜಾನರ್‌ನ ಕಥೆಯಾಗಿತ್ತು. ಈಗ ಅವರ ಕೈಯಲ್ಲಿರುವ “ಸಾರ್ವಜನಿಕರಲ್ಲಿ ವಿನಂತಿ’ ಮತ್ತು “ರಾಮನ ಅವತಾರ’ ಚಿತ್ರಗಳು ಸಹ ಆ್ಯಕ್ಷನ್‌ ಸಿನಿಮಾ ಅನ್ನುವುದನ್ನು ಒಪ್ಪಲು ಸಾಧ್ಯವಿಲ್ಲ.

ರಿಷಿ ಸದ್ಯಕ್ಕೆ ಬ್ಯುಝಿಯಾಗಿರುವುದಂತೂ ನಿಜ. ಎಷ್ಟರಮಟ್ಟಿಗೆ ಅಂದರೆ, ಅವರು ಮುಂದಿನ ಮಾರ್ಚ್‌ವರೆಗೂ ಯಾವುದೇ ಹೊಸ ಚಿತ್ರ ಒಪ್ಪಿಕೊಳ್ಳದಷ್ಟು ಬ್ಯುಝಿಯಂತೂ ಹೌದು. ಈಗ ಜೇಕಬ್‌ ವರ್ಗೀಸ್‌ ಅವರ ನಿರ್ದೇಶನದ “ಸಕಲ ಕಲಾವಲ್ಲಭ’ ಚಿತ್ರಕ್ಕೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಆದರೆ, ಈ ಚಿತ್ರ ಯಾವಾಗ ಶುರುವಾಗುತ್ತೆ, ಕಥೆಯ ಎಳೆ ಏನು, ಯಾರೆಲ್ಲಾ ಇರುತ್ತಾರೆ, ಎಲ್ಲೆಲ್ಲಿ ಚಿತ್ರೀಕರಣ ಆಗಲಿದೆ ಎಂಬಿತ್ಯಾದಿ ಪ್ರಶ್ನೆಗಳಿಗೆ ಸದ್ಯಕ್ಕೆ ಉತ್ತರವಿಲ್ಲ.

ರಿಷಿ ಅವರನ್ನು ಹುಡುಕಿಕೊಂಡು ಹಲವು ಕಥೆಗಳು ಬರುತ್ತಿದ್ದರೂ, ರಿಷಿ ಮಾತ್ರ, ಯಾವ ಕಥೆಯನ್ನೂ ಓಕೆ ಮಾಡದೆ, ಸದ್ಯ ಕೈಯಲ್ಲಿರುವ ಚಿತ್ರಗಳನ್ನು ಮುಗಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ. ರಿಷಿ ಕಥೆ ಕೇಳಿದರೆ ಅದು ಮೊದಲು ಒಬ್ಬ ಪ್ರೇಕ್ಷಕನಾಗಿ ಅವರಿಗೆ ಇಷ್ಟವಾಗಬೇಕು. ಕಥೆಯಲ್ಲಿ ಹೀರೋಗೆ ಎಷ್ಟು ಇಂಪಾರ್ಟೆನ್ಸ್‌ ಇದೆ ಅನ್ನೋದಕ್ಕಿಂತ, ನೋಡುವವರಿಗೆ ಇಷ್ಟವಾಗುವ ಎಲಿಮೆಂಟ್ಸ್‌ ಏನಿದೆ ಅನ್ನೋದನ್ನ ಗಮನಿಸಿ, ಅದನ್ನು ಒಪ್ಪುತ್ತಾರಂತೆ. ಹಾಗಾಗಿ, ಅವರು ಎಷ್ಟೇ ಕಥೆ ಬಂದರೂ, ಅಳೆದು-ತೂಗಿ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.