ಗಂಡುಮೆಟ್ಟಿದ ನೆಲದಲ್ಲಿ ‘ರಾಬರ್ಟ್‌’ ಅಬ್ಬರ


Team Udayavani, Feb 23, 2021, 12:56 PM IST

ಗಂಡುಮೆಟ್ಟಿದ ನೆಲದಲ್ಲಿ ‘ರಾಬರ್ಟ್‌’ ಅಬ್ಬರ

ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಬರ್ತ್‌ ಡೇಯಂದು ರಿಲೀಸ್‌ ಆಗಿದ್ದ “ರಾಬರ್ಟ್‌’ ಟ್ರೇಲರ್‌, ಬಿಡುಗಡೆಯಾದ ಒಂದೇ ವಾರದಲ್ಲಿ ಯು-ಟ್ಯೂಬ್‌ನಲ್ಲಿ 10 ಮಿಲಿಯನ್‌ ವೀವ್ಸ್‌ ಪಡೆದುಕೊಂಡಿದೆ. ಸದ್ಯ “ರಾಬರ್ಟ್‌’ಗೆ ಭರ್ಜರಿ ರೆಸ್ಪಾನ್ಸ್‌ ಸಿಗುತ್ತಿರುವ ಸಮಯದಲ್ಲೇ ಚಿತ್ರತಂಡ, ಉತ್ತರ ಕರ್ನಾಟಕದ ಗಂಡುಮೆಟ್ಟಿದ ನೆಲ ಹುಬ್ಬಳ್ಳಿಯಲ್ಲಿ “ರಾಬರ್ಟ್‌’ ಚಿತ್ರದ ಪ್ರೀ-ರಿಲೀಸ್‌ ಕಾರ್ಯಕ್ರಮ ಆಯೋಜಿಸಲು ಮುಂದಾಗಿದೆ.

ಹೌದು, ಇದೇ ಫೆ. 28ರಂದು ಹುಬ್ಬಳ್ಳಿಯ ರೈಲ್ವೇ ಗ್ರೌಂಡ್ಸ್‌ನಲ್ಲಿ “ರಾಬರ್ಟ್‌’ ಪ್ರೀ-ರಿಲೀಸ್‌ ಇವೆಂಟ್‌ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ನಟ ದರ್ಶನ್‌, ನಾಯಕಿ ಆಶಾ ಭಟ್‌ ಸೇರಿದಂತೆ “ರಾಬರ್ಟ್‌’ ಚಿತ್ರದ ಬಹುತೇಕ ಎಲ್ಲ ಕಲಾವಿದರು ಮತ್ತು ತಂತ್ರಜ್ಞರು ಭಾಗಿಯಾಗಲಿದ್ದಾರೆ.

ಈ ಕಾರ್ಯಕ್ರಮದ ಬಗ್ಗೆ “ಉದಯವಾಣಿ’ ಜೊತೆ ಮಾತನಾಡಿದ “ರಾಬರ್ಟ್‌’ ಚಿತ್ರದ ನಿರ್ದೇಶಕ ತರುಣ್‌ ಸುಧೀರ್‌, “ಸಾಮಾನ್ಯವಾಗಿ ಬಹುತೇಕ ಎಲ್ಲ ಸಿನಿಮಾಗಳ ದೊಡ್ಡ ದೊಡ್ಡ ಕಾರ್ಯಕ್ರಮಗಳು ಉತ್ತರ ಕರ್ನಾಟಕ ಭಾಗದಲ್ಲಿ ನಡೆಯುವುದು ಕಡಿಮೆ. ಈ ಬಾರಿ ಉತ್ತರ ಕರ್ನಾಟಕದ ಸಿನಿಮಾ ಪ್ರೇಕ್ಷಕರನ್ನೂ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾಡಿಕೊಳ್ಳಬೇಕು ಎಂಬ ಉದ್ದೇಶದಿಂದ “ರಾಬರ್ಟ್‌’ ಪ್ರೀ-ರಿಲೀಸ್‌ ಇವೆಂಟ್‌ನ ಹುಬ್ಬಳ್ಳಿಯಲ್ಲಿ ನಡೆಸಲು ನಿರ್ಧರಿಸಿದ್ದೇವೆ. ಕೋವಿಡ್‌ ನಂತರ ದರ್ಶನ್‌ ಅವರನ್ನ ಮತ್ತು ಅವರ ಸಿನಿಮಾವನ್ನು ನೋಡಬೇಕು ಎಂಬ ಉತ್ತರ ಕರ್ನಾಟಕದ ಅಭಿಮಾನಿಗಳ ಆಶಯವನ್ನು ಈ ಮೂಲಕ ಈಡೇರಿಸುವ ಪ್ರಯತ್ನ ಮಾಡುತ್ತಿದ್ದೇವೆ’ ಎನ್ನುತ್ತಾರೆ.

ಇದನ್ನೂ ಓದಿ:‘ಕಾಲಾ ಪತ್ಥರ್‌’ ನಾಯಕಿಯಾಗಿ ಅಪೂರ್ವ

“ಫೆ. 28ರ ಸಂಜೆ 6 ರಿಂದ ಹುಬ್ಬಳ್ಳಿಯ ರೈಲ್ವೇ ಗ್ರೌಂಡ್ಸ್‌ ನಲ್ಲಿ ನಡೆಯಲಿರುವ ಈ ವರ್ಣರಂಜಿತ ಕಾರ್ಯಕ್ರಮದಲ್ಲಿ ನಾಯಕ ನಟ ದರ್ಶನ್‌ ಸೇರಿದಂತೆ ಇಡೀ “ರಾಬರ್ಟ್‌’ ಸಿನಿಮಾದ ಎಲ್ಲ ಕಲಾವಿದರು ಮತ್ತು ತಂತ್ರಜ್ಞರು ಹಾಜರಾಗಲಿದ್ದಾರೆ. ಉತ್ತರ ಕರ್ನಾಟಕ ಭಾಗದ ದರ್ಶನ್‌ ಅಭಿಮಾನಿಗಳಿಗಾಗಿ ಈ ಕಾರ್ಯಕ್ರಮ ಆಯೋಜಿಸಿದ್ದೇವೆ. ಈಗಾಗಲೇ ಈ ಇವೆಂಟ್‌ಗೆ ತಯಾರಿಗಳು ಆರಂಭವಾಗಿದ್ದು, ಉತ್ತರ ಕರ್ನಾಟಕದಲ್ಲಿ ಇಂಥದ್ದೊಂದು ಕಾರ್ಯಕ್ರಮ ಮಾಡುವುದಕ್ಕೆ ನಮ್ಮ ಸಿನಿಮಾ ತಂಡ ಉತ್ಸುಕವಾಗಿದೆ’ ಎನ್ನುತ್ತಾರೆ ನಿರ್ದೇಶಕ ತರುಣ್‌ ಸುಧೀರ್‌.

ಇತ್ತೀಚೆಗಷ್ಟೇ “ರಾಬರ್ಟ್‌’ ಚಿತ್ರದ ರೊಮ್ಯಾಂಟಿಕ್‌ ಹಾಡನ್ನು ಬಿಡುಗಡೆ ಗೊಳಿಸಿದ್ದ ಚಿತ್ರತಂಡ, ಮುಂಬರುವ ಪ್ರೀ-ರಿಲೀಸ್‌ ಕಾರ್ಯಕ್ರಮದಲ್ಲಿ ಚಿತ್ರದ ಮತ್ತೂಂದು ಹಾಡನ್ನು ಬಿಡುಗಡೆ ಮಾಡಲು ಪ್ಲಾನ್‌ ಮಾಡಿಕೊಂಡಿದೆ.

ಒಟ್ಟಾರೆ ಈ ವರ್ಷದ ಬಹುನಿರೀಕ್ಷಿತ ಚಿತ್ರ “ರಾಬರ್ಟ್‌’ ಬಿಡುಗಡೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ, ಚಿತ್ರತಂಡ ಕೂಡ ಭರ್ಜರಿಯಾಗಿ ಚಿತ್ರದ ಪ್ರಚಾರ ಕಾರ್ಯಗಳಲ್ಲಿ ನಿರತವಾಗಿದೆ. ಸದ್ಯ ಉತ್ತರ ಕರ್ನಾಟಕದ ಸಿನಿಪ್ರಿಯ ಅಭಿಮಾನಿಗಳ ಗಮನ ಸೆಳೆಯಲು ಮುಂದಾಗಿರುವ “ರಾಬರ್ಟ್‌’ ಚಿತ್ರತಂಡ, ಅದಕ್ಕಾಗಿ ಈ ಬಾರಿ ಪ್ರೀ-ರಿಲೀಸ್‌ ಇವೆಂಟ್‌ಗಾಗಿ ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಯನ್ನು ಆಯ್ಕೆ ಮಾಡಿಕೊಂಡಿದೆ.

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

vasishta simha’s VIP movie

Vasishta Simha: ಫ‌ಸ್ಟ್‌ಲುಕ್‌ ನಲ್ಲಿ ‘ವಿಐಪಿ’ ಎಂಟ್ರಿ

MariGold: ಸಿನಿಮಾ ನೋಡಿ ನನ್ನ ಬೆನ್ನು ನಾನೇ ತಟ್ಟಿಕೊಂಡೆ…; ದಿಗಂತ್‌

MariGold ಸಿನಿಮಾ ನೋಡಿ ನನ್ನ ಬೆನ್ನು ನಾನೇ ತಟ್ಟಿಕೊಂಡೆ…; ದಿಗಂತ್‌

Ramya: ಉತ್ತರಕಾಂಡದಿಂದ ಹೊರನಡೆದ ರಮ್ಯಾ

Ramya: ಉತ್ತರಕಾಂಡದಿಂದ ಹೊರನಡೆದ ರಮ್ಯಾ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.