ಇಂದು ರಾಕಿಂಗ್ ಸ್ಟಾರ್ ಯಶ್‌ ಬರ್ತ್‌ಡೇ: ಮುಂದಿನ ಸಿನಿಮಾ ಬಗ್ಗೆ ಹೆಚ್ಚಿದ ಕುತೂಹಲ


Team Udayavani, Jan 8, 2022, 8:46 AM IST

ಇಂದು ರಾಕಿಂಗ್ ಸ್ಟಾರ್ ಯಶ್‌ ಬರ್ತ್‌ಡೇ: ಮುಂದಿನ ಸಿನಿಮಾ ಬಗ್ಗೆ ಹೆಚ್ಚಿದ ಕುತೂಹಲ

ನಟ ಯಶ್‌ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಆದರೆ, ಈ ವರ್ಷವೂ ಯಶ್‌ ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳ ಜೊತೆ ಆಚರಿಸಿಕೊಳ್ಳುತ್ತಿಲ್ಲ. ಅದಕ್ಕೆ ಕಾರಣ ಗೊತ್ತೇ ಇದೆ. ಒಂದು ಕಡೆ ಕೋವಿಡ್‌ ಹೆಚ್ಚಾಗುತ್ತಿದ್ದರೆ ಮತ್ತೂಂದು ಕಡೆ ವೀಕೆಂಡ್‌ ಲಾಕ್‌ಡೌನ್‌. ಸರ್ಕಾರ ವೀಕೆಂಡ್‌ ಲಾಕ್‌ಡೌನ್‌ ಘೋಷಿಸುವ ಮುನ್ನವೇ ಯಶ್‌, ಈ ವರ್ಷವೂ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸುತ್ತಿಲ್ಲ. ಅವರು ಎಲ್ಲಿರುತ್ತಾರೋ, ಅಲ್ಲಿಂದಲೇ ಶುಭಕೋರಿದರೆ ಸಾಕು, ಎಲ್ಲವೂ ಸರಿ ಹೋದ ನಂತರ ಅದ್ಧೂರಿಯಾಗಿ ಆಚರಿಸೋಣ ಎಂದಿದ್ದರು. ಹಾಗಾಗಿ, ಈ ವರ್ಷವೂ ಅಭಿಮಾನಿಗಳು ತಮ್ಮ ನೆಚ್ಚಿನ ನಟನಿಗೆ ದೂರದಿಂದಲೇ ಶುಭಕೋರಲಿದ್ದಾರೆ.

ಇನ್ನು, ಯಶ್‌ ಬರ್ತ್‌ಡೇಗೆ ಬಹುನಿರೀಕ್ಷಿತ “ಕೆಜಿಎಫ್-2′ ಚಿತ್ರದ ಟ್ರೇಲರ್‌ ಬಿಡುಗಡೆಯಾಗಬಹುದೆಂಬ ನಿರೀಕ್ಷೆಯಲ್ಲಿ ಅಭಿಮಾನಿಗಳಿದ್ದರು. ಆದರೆ, ಚಿತ್ರದ ಟ್ರೇಲರ್‌ ಬಿಡುಗಡೆಯಾಗುತ್ತಿಲ್ಲ. ಈ ಬಗ್ಗೆ ಮಾತನಾಡಿರುವ ಯಶ್‌, “ಈಗಲೇ ಟ್ರೇಲರ್‌ ಬಿಡುಗಡೆ ಮಾಡಿದರೆ ತುಂಬಾನೇ ಬೇಗ ಬಿಡುಗಡೆ ಮಾಡಿದಂತಾಗುತ್ತದೆ. ಏಕೆಂದರೆ ಚಿತ್ರ ಏಪ್ರಿಲ್‌ 14ಕ್ಕೆ ಬಿಡುಗಡೆ ಇರುವುದರಿಂದ ದೊಡ್ಡ ಗ್ಯಾಪ್‌ ಆಗುತ್ತದೆ’ ಎಂದಿದ್ದಾರೆ.

ಇದನ್ನೂ ಓದಿ:ಉದ್ಯಮಿ ಜುಂಜನ್‌ವಾಲಾಗೆ ಶೀಘ್ರ ಸಿಗಲಿದೆ 14 ಅಂತಸ್ತಿನ ಮನೆ!

ಯಶ್‌ “ಕೆಜಿಎಫ್-2′ ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿದೆ. ಆ ಸಿನಿಮಾದಲ್ಲಿ ಕೆಲಸ ಮಾಡಿದವರೆಲ್ಲರೂ ಈಗ ಬೇರೆ ಬೇರೆ ಸಿನಿಮಾಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಆದರೆ, ಯಶ್‌ ಮಾತ್ರ ಯಾವ ಸಿನಿಮಾವನ್ನು ಒಪ್ಪಿಕೊಂಡಿಲ್ಲ. ಹಾಗಾದರೆ, ಯಶ್‌ ಯಾಕೆ ಯಾವ ಸಿನಿಮಾವನ್ನು ಒಪ್ಪಿಲ್ಲ, ಸಿನಿಮಾದಲ್ಲಿ ನಟಿಸುತ್ತಿಲ್ಲ ಎಂಬ ಪ್ರಶ್ನೆ ಸಹಜ. ಇದಕ್ಕೆ ಯಶ್‌ ಉತ್ತರಿಸೋದು ಹೀಗೆ

“ಒಂದು ಸಿನಿಮಾ ಪೂರ್ಣವಾದ ಮೇಲೆಯೇ ನಾನು ಇನ್ನೊಂದು ಸಿನಿಮಾ ಒಪ್ಪೋದು. ಅದಕ್ಕಿಂತ ಹೆಚ್ಚಾಗಿ ನನಗೆ ಮನೆಯಲ್ಲೂ ಸಿನಿಮಾ ಮಾಡಲೇಬೇಕು ಎಂಬ ಪ್ರಶರ್‌ ಇಲ್ಲ. ದುಡಿಲೇಬೇಕು ಅಥವಾ ದುಡ್ಡಿಗೋಸ್ಕರನೇ ಕೆಲಸ ಮಾಡ್ತೀನಿ ಅಂತೇನೂ ಇಲ್ಲ. ಒಳ್ಳೆಯ ಕೆಲಸ ಮಾಡಬೇಕು. ಈ ಸ್ಥಾನ ಜನಗಳು ಕೊಟ್ಟಿರೋದು ಅದನ್ನು ಉಳಿಸಿಕೊಂಡು ಹೋಗಬೇಕು. ಇವತ್ತು ಯಾವುದೇ ಭಾಷೆಯ ಯಾವುದೇ ಸಿನಿಮಾ ಬಂದ್ರು ನಾವೆಲ್ಲ ಹೆಮ್ಮೆಯಿಂದ ಹೇಳಿಕೊಳ್ಳುವಂತಹ ಒಂದು ಕೆಲಸ ಆಗಿದೆ. ಮುಂದಿನ ಹೆಜ್ಜೆಯೂ ಹಾಗೇ ಇರಬೇಕೆಂಬುದು ನನ್ನ ಆಸೆ. ಕೆಜಿಎಫ್ 1 ಎಲ್ಲರೂ ನೋಡಿದ್ದಾರೆ. ಕೆಜಿಎಫ್ 2 ಹೇಗಿದೆ ಎಂಬುದು ನನಗೆ ಗೊತ್ತು .ನಾವು ಏನು ಸೃಷ್ಟಿ ಮಾಡ್ತಿವೋ, ಅದೇ ನಮಗೆ ದೊಡ್ಡ ಕಾಂಪಿಟೇಶನ್‌. ಮುಂದೆ ಏನು ಮಾಡಬೇಕೆಂಬ ಚರ್ಚೆ ನಡೆಯುತ್ತಿದೆ. ಅದಕ್ಕೆ ಸ್ವಲ್ಪ ಸಮಯಬೇಕಾಗುತ್ತದೆ’ ಎನ್ನುವ ಮೂಲಕ ತಮ್ಮ ಮುಂದಿನ ಸಿನಿಮಾ ಕೂಡಾ ದೊಡ್ಡ ಹೆಜ್ಜೆಯಾಗಿರುತ್ತದೆ ಎಂಬ ಸುಳಿವು ನೀಡುತ್ತಾರೆ ಯಶ್‌.

ಟಾಪ್ ನ್ಯೂಸ್

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.