ಮಗ ನಾಯಕ; ಅಪ್ಪ ನಿರ್ದೇಶಕ; ತೆಲುಗು ಮಂದಿಯ ಕನ್ನಡ ಸಿನಿಮಾ


Team Udayavani, Jul 19, 2018, 12:56 PM IST

romeo-juliet104.jpg

ತೆಲುಗಿನ ಅನೇಕ ಮಂದಿ ಕನ್ನಡದಲ್ಲಿ ಸಿನಿಮಾ ಮಾಡಲು ಬರುತ್ತಿದ್ದಾರೆ. ಈಗಾಗಲೇ ಅನೇಕ ಸಿನಿಮಾಗಳು ಸೆಟ್ಟೇರಿವೆ. ಈಗ ಅದಕ್ಕೆ ಹೊಸ ಸೇರ್ಪಡೆ “ರೋಮಿಯೋ ಜೂಲಿಯಟ್‌’. ಹೌದು, “ರೋಮಿಯೋ ಜೂಲಿಯಟ್‌’ ಎಂಬ ಸಿನಿಮಾವೊಂದು ಇತ್ತೀಚೆಗೆ ಸೆಟ್ಟೇರಿದೆ. ಭರತ್‌ ಪಾರೆಪಲ್ಲಿ ಎನ್ನುವವರು ಈ ಸಿನಿಮಾದ ನಿರ್ದೇಶಕರು. ತೆಲುಗಿನಲ್ಲಿ ಮೂವತ್ತಕ್ಕೂ ಹೆಚ್ಚು ಸಿನಿಮಾಗಳನ್ನು ನಿರ್ದೇಶಿಸಿರುವ ಭರತ್‌ ಈಗ ಮೊದಲ ಬಾರಿಗೆ ಕನ್ನಡದಲ್ಲಿ ಸಿನಿಮಾ ಮಾಡುತ್ತಿದ್ದಾರೆ.

“ರೋಮಿಯೋ ಜೂಲಿಯಟ್‌’ ಚಿತ್ರ ಕೇವಲ ಕನ್ನಡ, ಹಿಂದಿ ಹಾಗೂ ತೆಲುಗಿನಲ್ಲಿ ತಯಾರಾಗುತ್ತಿದೆ. ಈ ಚಿತ್ರದ ಮೂಲಕ ಭರತ್‌, ತಮ್ಮ ಮಗ ಧನುಶ್‌ ಅವರನ್ನು ಹೀರೋ ಆಗಿ ಲಾಂಚ್‌ ಮಾಡುತ್ತಿದ್ದಾರೆ. ಚಿತ್ರಕ್ಕೆ ಸ್ವಾತಿ ಮಂಡಲ್‌ ನಾಯಕಿ. “ನಾನು ರಾಜಕುಮಾರ್‌ ಸೇರಿದಂತೆ ಅನೇಕ ಕನ್ನಡ ನಟರ ಸಿನಿಮಾಗಳನ್ನು ನೋಡಿದ್ದೇನೆ. ಆ ಕಾರಣದಿಂದ ನನ್ನ ಮಗನನ್ನು ಕನ್ನಡದಲ್ಲೂ ಲಾಂಚ್‌ ಮಾಡಬೇಕೆಂಬ ಮನಸ್ಸಾಯಿತು’ ಎನ್ನುವುದು ಭರತ್‌ ಮಾತು. 

ಹೆಸರಿಗೆ ತಕ್ಕಂತೆ “ರೋಮಿಯೋ ಜೂಲಿಯಟ್‌’ ಒಂದು ಲವ್‌ಸ್ಟೋರಿ. ಹಾಗಂತ ರೆಗ್ಯುಲರ್‌ ಶೈಲಿಯಲ್ಲಿ ಈ ಸಿನಿಮಾ ಇರೋದಿಲ್ಲ. ಹೊಸದಾದ ಕಥೆ, ನಿರೂಪಣೆ ಇರುತ್ತದೆ ಎಂಬುದು ನಿರ್ಮಾಪಕರ ಮಾತು. ಈ ಚಿತ್ರದ ನಿರ್ದೇಶನದ ಜೊತೆಗೆ ನಿರ್ಮಾಣ, ಛಾಯಾಗ್ರಹಣ ಕೂಡಾ ಭರತ್‌ ಅವರದೇ. 

ಮೊದಲ ಬಾರಿಗೆ ನಾಯಕರಾಗಿ ನಟಿಸುತ್ತಿರುವ ಧನುಶ್‌ಗೆ ಅವರ ತಂದೆ ಮಾಡಿಕೊಂಡಿರುವ ಕಥೆ ಇಷ್ಟವಾಯಿತಂತೆ. “ಕಥೆ ತುಂಬಾ ಚೆನ್ನಾಗಿದೆ. ಒಬ್ಬ ಹೊಸ ಹುಡುಗನ ಲಾಂಚ್‌ಗೆ ಏನೆಲ್ಲಾ ಬೇಕೋ ಆ ಅಂಶದೊಂದಿಗೆ ಕಥೆ ಮಾಡಿದ್ದಾರೆ. ತಂದೆಯ ನಿರ್ದೇಶನದಲ್ಲಿ ಲಾಂಚ್‌ ಆಗುತ್ತಿರುವುದು ಖುಷಿಕೊಟ್ಟಿದೆ’ ಎನ್ನುತ್ತಾರೆ ಧನುಶ್‌. ನಾಯಕಿ ಸ್ವಾತಿ ಕೂಡಾ ತಮ್ಮ ಪಾತ್ರದ ಬಗ್ಗೆ ಹೇಳಿಕೊಂಡರು. ಸಕಲೇಶಪುರ, ಚಿಕ್ಕಮಗಳೂರು ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ. 

ಟಾಪ್ ನ್ಯೂಸ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.