ರಫ್ ಅಂಡ್ ಟಫ್ ಮದಗಜ: ಡಿಸೆಂಬರ್ 3ರಂದು ರಿಲೀಸ್
Team Udayavani, Nov 22, 2021, 9:57 AM IST
ಶ್ರೀಮುರಳಿ ನಟನೆಯ “ಮದಗಜ’ ಚಿತ್ರ ಡಿಸೆಂಬರ್ 03ರಂದು ಬಿಡುಗಡೆಯಾಗುತ್ತಿದೆ. ಮೊದಲ ಹಂತವಾಗಿ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಶುಭಕೋರಿದ್ದಾರೆ. ಇದೇ ವೇಳೆ ಮಾತನಾಡಿದ ಸಿಎಂ, “ಚಿತ್ರದ ಟ್ರೇಲರ್ ಇಷ್ಟು ಚೆನ್ನಾಗಿದೆ ಎಂದರೆ, ಇನ್ನೂ ಸಿನಿಮಾ ಹೇಗೆ ಇರಬೇಡ… ಒಳ್ಳೆ ಹಾಲಿವುಡ್ ಚಿತ್ರದಲ್ಲಿ ಮಾಡಿದ ಹಾಗೆ ಮಾಡಿದ್ದೀರಿ’ ಎಂದರು.
ಇನ್ನು, ನಾಯಕ ಮುರಳಿ ಟ್ರೇಲರ್ ಬಿಡುಗಡೆ ಮುನ್ನ, ಪುನೀತ್ ರಾಜ್ಕುಮಾರ್ ಅವರಿಗೆ ಬೊಂಬೆ ಹೇಳುತೈತೆ… ನೀನೆ ರಾಜಕುಮಾರ ಹಾಡು ಹೇಳಿ ಗಾನನಮನ ಸಲ್ಲಿಸಿದರು. ಬಳಿಕ ಮಾತನಾಡಿದ ಮುರಳಿ, “ನಮ್ಮ ಚಿತ್ರದ ಮೊದಲ ಹೀರೋ ನಿರ್ಮಾಪಕ ಉಮಾಪತಿ. ಅವರ ಸಹಕಾರ ದಿಂದ ಚಿತ್ರ ಇಷ್ಟು ಚೆನ್ನಾಗಿ ಬಂದಿದೆ. ನಿರ್ದೇ ಶಕ ಮಹೇಶ್ ಕುಮಾರ್ ಶ್ರಮಪಟ್ಟು ಈ ಸಿನಿಮಾ ಮಾಡಿದ್ದಾರೆ. ನಿರ್ದೇಶಕರು ಹೇಳಿ ದಂತೆ ನಾನು ನಟಿಸಿದ್ದೇನೆ’ ಎಂದರು. ಚಿತ್ರದಲ್ಲಿ ಆಶಿಕಾ ರಂಗನಾಥ್ ನಾಯಕಿ. ಇಲ್ಲಿ ಅವರು ಪಲ್ಲವಿ ಎಂಬ ಪಾತ್ರದಲ್ಲಿ ನಟಿಸಿದ್ದಾರಂತೆ.
ಇದನ್ನೂ ಓದಿ:ಇನ್ನಿಂಗ್ಸಿನ ಎಲ್ಲ 10 ವಿಕೆಟ್ ಕೆಡವಿದ ದಕ್ಷಿಣ ಆಫ್ರಿಕಾದ ಸ್ಯಾಮ್ ವೈಟ್ಹೆಡ್
ಈ ಚಿತ್ರವನ್ನು ಉಮಾಪತಿ ನಿರ್ಮಿಸಿದ್ದಾರೆ. ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, “ಯಾವುದೇ ಒಂದು ವ್ಯಕ್ತಿ ಕೂಡ ಮೊದಲು ತನ್ನ ಕುಟುಂಬವನ್ನು ಚೆನ್ನಾಗಿಟ್ಟುಕೊಳ್ಳ ಬೇಕು.ನಾನು ಆ ವಿಚಾರದಲ್ಲಿ ಅದೃಷ್ಟವಂತ. ನನ್ನ ಕುಟುಂಬ ತುಂಬಾ ಚೆನ್ನಾಗಿದೆ. ಮುಖ್ಯಮಂತ್ರಿಗಳು ಈ ಸಮಾರಂಭಕ್ಕೆ ಬರಲು ನನ್ನ ಕುಟುಂಬ ಕಾರಣ’ ಎಂದ ಅವರು, ನನ್ನ ಪ್ರಕಾರ, ಸಿನಿಮಾ ಎಂದರೆ ಮಾಯಾ ಬಜಾರ್ ಅಲ್ಲ. ಇಲ್ಲಿ ಸಾಕಷ್ಟು ಜನರ ಶ್ರಮವಿರುತ್ತದೆ. ಒಂದು ಒಳ್ಳೆಯ ಚಿತ್ರ ಮೂಡಿಬರಲು ಎಲ್ಲರು ಒಟ್ಟಾಗಿ ಶ್ರಮಿಸಬೇಕು. ನಮ್ಮ ಚಿತ್ರ ಚೆನ್ನಾಗಿ ಮೂಡಿಬಂದಿದೆ. ಇದೇ ಡಿಸೆಂಬರ್ 3 ರಂದು ಬಿಡುಗಡೆಯಾಗುತ್ತಿದೆ’ ಎಂದರು.
ನಿರ್ದೇಶಕ ಮಹೇಶ್ ಕುಮಾರ್ ಸಿನಿಮಾಕ್ಕೆ ಸಹಕರಿಸಿದ ಹಾಗೂ ತನ್ನನ್ನು ನಂಬಿ ಬಂಡವಾಳ ಹೂಡಿದ ನಿರ್ಮಾಪಕರಿಗೆ ಧನ್ಯವಾದ ಹೇಳಿದರು. ಸಚಿವರಾದ ಅಶ್ವತ್ ನಾರಾಯಣ್ ಹಾಗೂ ಮುನಿರತ್ನ ಅವರು ಟ್ರೇಲರ್ ಬಿಡುಗಡೆ ಸಮಾರಂಭಕ್ಕೆ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ