ಪಾತ್ರ ಮೂರು ನಿರೀಕ್ಷೆ ನೂರು… ಚಂದನವನದ ‘ರುಕ್ಮಿಣಿ’ ಜೊತೆ ಮಾತುಕತೆ


Team Udayavani, Jan 17, 2023, 11:54 AM IST

rukmini vasanth

ಶ್ರೀನಿ ನಟನೆ ಮತ್ತು ನಿರ್ದೇಶನದ “ಬೀರ್‌ಬಲ್‌’ ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ಗೆ ಪರಿಚಯವಾದ ನಟಿ ರುಕ್ಮಿಣಿ ವಸಂತ್‌. ಮೊದಲ ಸಿನಿಮಾದಲ್ಲೇ ಸಿನಿಪ್ರಿಯರ ಗಮನ ಸೆಳೆಯುವಲ್ಲಿ ಯಶಸ್ವಿಯಾದ ರುಕ್ಮಿಣಿ ವಸಂತ್‌, ಈ ವರ್ಷ ಬ್ಯಾಕ್‌ ಟು ಬ್ಯಾಕ್‌ ಸಿನಿಮಾಗಳಲ್ಲಿ ಪ್ರೇಕ್ಷಕರ ಮುಂದೆ ಬರಲು ತಯಾರಾಗಿದ್ದಾರೆ. ಹೌದು, ಸದ್ಯ ರುಕ್ಮಿಣಿ ವಸಂತ್‌ ಮೂರು ಸಿನಿಮಾಗಳಲ್ಲಿ ನಾಯಕಿಯಾಗಿ, ಮೂರು ವಿಭಿನ್ನ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. “ಉದಯವಾಣಿ’ ಜೊತೆಗೆ ಮಾತನಾಡಿದ ರುಕ್ಮಿಣಿ ವಸಂತ್‌ ತಮ್ಮ ಮುಂಬರುವ ಸಿನಿಮಾಗಳ ಬಗ್ಗೆ ಒಂದಷ್ಟು ಮಾತನಾಡಿದ್ದಾರೆ.

ತಮ್ಮ ಕೈಯಲ್ಲಿರುವ ಸಿನಿಮಾಗಳ ಬಗ್ಗೆ ಹೇಳಿ?

ಸದ್ಯ ಮೂರು ಸಿನಿಮಾಗಳಲ್ಲಿ ಹೀರೋಯಿನ್‌ ಆಗಿ ಕಾಣಿಸಿಕೊಳ್ಳುತ್ತಿದ್ದೇನೆ. ಗಣೇಶ್‌ ಅಭಿನಯದ “ಬಾನ ದಾರಿಯಲ್ಲಿ’, ರಕ್ಷಿತ್‌ ಶೆಟ್ಟಿ ಅಭಿನಯದ “ಸಪ್ತ ಸಾಗರದಾಚೆ ಎಲ್ಲೋ’ ಮತ್ತು ಶ್ರೀಮುರಳಿ ಅಭಿನಯದ “ಬಘೀರ’ ನಾನು ಅಭಿನಯಿಸುತ್ತಿರುವ ಮೂರು ಸಿನಿಮಾಗಳು.

ಈ ಸಿನಿಮಾಗಳಲ್ಲಿ ನಿಮ್ಮ ಪಾತ್ರಗಳು ಹೇಗಿದೆ..?

“ಬಾನ ದಾರಿಯಲ್ಲಿ’ ಸಿನಿಮಾದಲ್ಲಿ ಲೀಲಾ ಎಂಬ ಸ್ವಿಮ್ಮಿಂಗ್‌ ಕೋಚ್‌ ಪಾತ್ರ ನನ್ನದು. ಇನ್ನು “ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದಲ್ಲಿ ಪ್ರಿಯಾ ಎಂಬ ಸಿಂಗರ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. “ಬಘೀರ’ ಸಿನಿಮಾದಲ್ಲಿ ಸ್ನೇಹ ಎಂಬ ಡಾಕ್ಟರ್‌ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ.

ಮೂರು ಸಿನಿಮಾಗಳಲ್ಲಿ ಮೊದಲು ಯಾವುದು ತೆರೆಗೆ?

ಬಹುಶಃ “ಬಾನ ದಾರಿಯಲ್ಲಿ’ ಸಿನಿಮಾ ಮೊದಲು ತೆರೆಗೆ ಬರುತ್ತದೆ. ಈಗಾಗಲೇ ಈ ಸಿನಿಮಾದ ಕೆಲಸಗಳು ಕಂಪ್ಲೀಟ್‌ ಆಗಿದ್ದು, ಸಿನಿಮಾದ ಪ್ರಮೋಶನ್ಸ್‌ ಕೂಡ ಜೋರಾಗಿ ನಡೆಯುತ್ತಿದೆ. ಎಲ್ಲ ಅಂದುಕೊಂಡಂತೆ ನಡೆದರೆ, ಮಾರ್ಚ್‌ನಲ್ಲಿ “ಬಾನ ದಾರಿಯಲ್ಲಿ’ ಸಿನಿಮಾ ರಿಲೀಸ್‌ ಆಗುತ್ತದೆ.

ಉಳಿದ ಸಿನಿಮಾಗಳು ಯಾವ ಹಂತದಲ್ಲಿದೆ?

ಸದ್ಯ “ಬಾನ ದಾರಿಯಲ್ಲಿ’ ಸಿನಿಮಾ ರಿಲೀಸ್‌ಗೆ ರೆಡಿಯಿದೆ. ಉಳಿದಂತೆ, “ಸಪ್ತ ಸಾಗರದಾಚೆ ಎಲ್ಲೋ’ ಮತ್ತು “ಬಘೀರ’ ಸಿನಿಮಾದ ಪ್ರೊಡಕ್ಷನ್‌ ಕೆಲಸಗಳು ಇನ್ನೂ ನಡೆಯುತ್ತಿದೆ. ಬಹುಶಃ ಈ ಸಿನಿಮಾಗಳು ಕೂಡ ಈ ವರ್ಷದ ಕೊನೆಯೊಳಗೆ ತೆರೆಗೆ ಬರಬಹುದು ಎಂಬ ನಿರೀಕ್ಷೆಯಿದೆ.

ನೀವು ನಿರ್ವಹಿಸುವ ಪಾತ್ರಗಳಿಗೆ ತಯಾರಿ ಹೇಗಿರುತ್ತದೆ?

ನಾನು ಸದ್ಯಕ್ಕೆ ಮಾಡುತ್ತಿರುವ ಮೂರು ಸಿನಿಮಾಗಳಲ್ಲೂ ಮೂರು ವಿಭಿನ್ನ ಪಾತ್ರಗಳಿವೆ. ಪ್ರತಿ ಪಾತ್ರಕ್ಕೂ ಅದರದ್ದೇ ಆದ ಇಂಪಾರ್ಟೆನ್ಸ್‌ ಇದೆ. ಹಾಗಾಗಿ ಆಯಾಯ ಪಾತ್ರಗಳು ಏನೇನೂ ಡಿಮ್ಯಾಂಡ್‌ ಮಾಡುತ್ತದೆಯೋ ಅದಕ್ಕೆ ತಕ್ಕಂತೆ, ತಯಾರಿ ಮಾಡಿಕೊಂಡಿದ್ದೆ. “ಬಾನ ದಾರಿಯಲ್ಲಿ’ ಸಿನಿಮಾದ ಪಾತ್ರಕ್ಕಾಗಿ ಸರ್ಫಿಂಗ್‌ ಕಲಿಯಬೇಕಾಯಿತು. ಉಳಿದಂತೆ “ಸಪ್ತ ಸಾಗರದಾಚೆ ಎಲ್ಲೋ’ ಮತ್ತು “ಬಘೀರ’ ಸಿನಿಮಾದ ಪಾತ್ರಗಳಿಗೂ ರಿಹರ್ಸಲ್‌, ವರ್ಕ್‌ಶಾಪ್‌ ಮಾಡಿಕೊಂಡಿದ್ದೆ.

ಸ್ಟಾರ್ ಜೊತೆ ಅಭಿನಯಿಸುತ್ತಿರುವ ಅನುಭವ ಹೇಗಿದೆ?

ತುಂಬ ಚೆನ್ನಾಗಿದೆ. “ಬಾನ ದಾರಿಯಲ್ಲಿ ಸಿನಿಮಾದಲ್ಲಿ ಮೊದಲ ಬಾರಿಗೆ ಗಣೇಶ್‌ ಅವರೊಂದಿಗೆ ಸ್ಕ್ರೀನ್‌ ಶೇರ್‌ ಮಾಡಿಕೊಳ್ಳುವ ಚಾನ್ಸ್‌ ಸಿಕ್ಕಿತು. ನಂತರ ರಕ್ಷಿತ್‌ ಶೆಟ್ಟಿ, ಅದಾದ ನಂತರ ಶ್ರೀಮುರಳಿ ಅವರಂಥ ಬಿಗ್‌ ಸ್ಟಾರ್ ಜೊತೆ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ಪ್ರತಿಯೊಬ್ಬರಿಂದಲೂ ಸಾಕಷ್ಟು ಕಲಿತಿದ್ದೇನೆ. ಇನ್ನೂ ಕಲಿಯುವುದು ಸಾಕಷ್ಟಿದೆ. ಗಣೇಶ್‌, ರಕ್ಷಿತ್‌ ಶೆಟ್ಟಿ, ಶ್ರೀಮುರಳಿ ಬಿಗ್‌ ಸ್ಟಾರ್ ಆದರೂ ಅವರ ಸಿಂಪ್ಲಿಸಿಟಿ ಎಲ್ಲರಿಗೂ ಮಾದರಿಯಾಗುವಂಥದು

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.