ನನಗೇನು ಆಗಿಲ್ಲ, ನಾನು ಚೆನ್ನಾಗಿದ್ದೇನೆ : ಸಾವಿನ ವದಂತಿಗೆ ತೆರೆ ಎಳೆದ ಕುರಿ ಪ್ರತಾಪ್
Team Udayavani, May 18, 2021, 8:43 PM IST
ಬೆಂಗಳೂರು: ನಾನು ಚೆನ್ನಾಗಿದ್ದೇನೆ, ಆರಾಮಾಗಿ ಮನೆಯಲ್ಲಿ ಟಿವಿ ನೋಡುತ್ತಿದ್ದೇನೆ, ನನಗೇನು ಆಗಿಲ್ಲ ಎಂದು ಹಾಸ್ಯ ನಟ ಕುರಿ ಪ್ರತಾಪ ಹೇಳಿದ್ದಾರೆ.
ಇಂದು ಸಂಜೆ ಕುರಿ ಪ್ರತಾಪ್ ಅವರ ಆರೋಗ್ಯದ ಕುರಿತು ವದಂತಿಯೊಂದು ಕೇಳಿ ಬಂದಿತ್ತು. ಇವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಸ್ಥಿತಿ ಬಹಳ ಗಂಭೀರವಾಗಿದೆ ಎನ್ನುವ ರೂಮರ್ ಹರಡಿತ್ತು. ಇನ್ನೂ ಹಲವರಿಗೆ ಕುರಿ ಪ್ರತಾಪ್ ಅವರು ನಿಧನರಾಗಿದ್ದಾರೆ ಎನ್ನುವ ಸುದ್ದಿ ತಲುಪಿತ್ತು. ಇದರಿಂದ ಆತಂಕಕ್ಕೊಳಗಾದ ಅವರ ಆಪ್ತರು, ಅಭಿಮಾನಿಗಳು ಪ್ರತಾಪ್ ಅವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ತಮ್ಮ ವಿರುದ್ದ ಹಬ್ಬಿದ್ದ ವದಂತಿಗೆ ತಾವೇ ತೆರೆ ಎಳೆಯುವ ನಿಟ್ಟಿನಲ್ಲಿ ಫೇಸ್ ಬುಕ್ ಲೈವ್ ಬಂದ ಕುರಿ ಪ್ರತಾಪ್, ನಾನು ಆರೋಗ್ಯವಾಗಿದ್ದೇನೆ, ಚೆನ್ನಾಗಿದ್ದೇನೆ, ಮನೆಯಲ್ಲಿ ಟಿವಿ ನೋಡುತ್ತಿದ್ದೇನೆ. ಯಾರೋ ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಇದರಿಂದ ನನ್ನ ಆಪ್ತರು ಕರೆ ಮಾಡುತ್ತಿದ್ದಾರೆ. ಸೃಜನ್ ಲೋಕೇಶ್ ಅವರು ಫೋನ್ ಮಾಡಿ ಆರೋಗ್ಯ ವಿಚಾರಿಸಿದರು. ಸ್ನೇಹಿತರ ಸಲಹೆ ಮೂಲಕ ಫೇಸ್ ಬುಕ್ ಲೈವ್ ಬಂದು ವದಂತಿಗೆ ತೆರೆ ಎಳೆಯುತ್ತಿದ್ದೇನೆ ಎಂದು ತಿಳಿಸಿದರು. ಯಾರೂ ಕೂಡ ವದಂತಿಗೆ ಕಿವಿಗೊಡಬೇಡಿ, ಎಲ್ಲರೂ ಮನೆಯಲ್ಲಿ ಅರಾಮಾಗಿ ಇರಿ ಎಂದು ಮನವಿ ಮಾಡಿಕೊಂಡರು.
ಇನ್ನು ಕೆಲವು ದಿನಗಳ ಹಿಂದೆ ಹಿರಿಯ ನಟ ದೊಡ್ಡಣ್ಣ ಅವರ ಬಗ್ಗೆಯೂ ಇಂತಹದ್ದೇ ವದಂತಿ ಹಬ್ಬಿತ್ತು. ಆಮೇಲೆ ದೊಡ್ಡಣ್ಣ ಅವರು ಸಹ ವಿಡಿಯೋ ಮಾಡುವ ಮೂಲಕ ಅಭಿಮಾನಿಗಳಿಗೆ ಸ್ಪಷ್ಟನೆ ನೀಡಿದ್ದರು. ಸಾವಿನ ಬಗ್ಗೆ ವಂದತಿ ಹಬ್ಬಿಸುವವರ ವಿರುದ್ಧ ಆಕ್ರೋಶವೂ ಹೊರಹಾಕಿದ್ದರು.ಅದೇ ರೀತಿ ಶಕ್ತಿಮಾನ ಧಾರಾವಾಹಿ ಖ್ಯಾತಿಯ ಮುಕೇಶ್ ಖನ್ನಾ ಅವರ ಕುರಿತು ಹೀಗೆ ವದಂತಿ ಕೇಳಿ ಬಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್ ಟೀಂ
MUST WATCH
ಹೊಸ ಸೇರ್ಪಡೆ
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ