ಎಸ್.ನಾರಾಯಣ ಆ್ಯಕ್ಷನ್ ಕಟ್ ಗೆ HDK ಬಂಡವಾಳ | ಮತ್ತೊಮ್ಮೆ ಒಂದಾದ ಹಿಟ್ ಸಿನಿಮಾಗಳ ಸರದಾರರು
Team Udayavani, Aug 14, 2021, 1:47 PM IST
ಬೆಂಗಳೂರು: ರಾಜಕೀಯದಲ್ಲಿ ಬ್ಯುಝಿ ಇರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಇದೀಗ ಮತ್ತೆ ಚಿತ್ರರಂಗದತ್ತೂ ವಾಲಿದ್ದಾರೆ. ಇದೀಗ ಸಿನಿಮಾ ನಿರ್ಮಾಣವೊಂದಕ್ಕೆ ಮುಂದಾಗಿರುವ ಅವರು, ಖ್ಯಾತ ನಿರ್ದೇಶಕ ಎಸ್. ನಾರಾಯಣ ಅವರ ಜೊತೆ ಕೈ ಜೋಡಿಸಿದ್ದಾರೆ.
ನಿರ್ದೇಶಕ ಎಸ್. ನಾರಾಯಣ ಅವರಿಗೂ ಇದು ಸೆಕೆಂಡ್ ಇನ್ಸಿಂಗ್ಸ್ ಅಂತಾನೇ ಹೇಳಬಹುದು. ಬಹುದಿನಗಳ ನಂತರ ಮತ್ತೆ ನಿರ್ದೇಶಕರ ಕ್ಯಾಪ್ ಧರಿಸಿರುವ ಅವರು, 5ಡಿ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಈ ಚಿತ್ರ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು, ಶೀಘ್ರವೆ ತೆರೆ ಕಾಣಲಿದೆ. ಈ ಚಿತ್ರ ಬಿಡುಗಡೆಯಾಗುವ ಮುನ್ನವೆ ಮತ್ತೊಂದು ಸಿನಿಮಾ ಕೈಗೆತ್ತಿಕೊಂಡಿದ್ದಾರೆ. ಕನ್ನಡದ ಖ್ಯಾತ ಸಾಹಿತಿ ವ್ಯಾಸರಾಯ ಬಲ್ಲಾಳರ ‘ಹೆಜ್ಜೆ’ ಕಾದಂಬರಿ ಆಧಾರಿತ ಸಿನಿಮಾ ಮಾಡಲಿದ್ದಾರೆ.ಈ ಕಾದಂಬರಿ ಸ್ವಾತಂತ್ರ್ಯಪೂರ್ವದಲ್ಲಿನ ಒಂದು ಕುಟುಂಬದ ಕಥೆ ಹೊಂದಿದೆಯಂತೆ. ಈ ಚಿತ್ರಕ್ಕೆ ಕುಮಾರ ಸ್ವಾಮಿ ಅವರು ಹಣ ಹೂಡಲಿದ್ದಾರೆ.
ಇನ್ನು ಕುಮಾರಸ್ವಾಮಿ ಅವರಿಗೂ ಸಿನಿಮಾರಂಗಕ್ಕೂ ಹಳೆಯ ಪರಿಚಯ. ರಾಜಕೀಯಕ್ಕೆ ಕಾಲಿಡುವ ಮುನ್ನ ಸಿನಿಮಾ ರಂಗದ ಜೊತೆ ಸಖ್ಯ ಬೆಳೆಸಿಕೊಂಡಿದ್ದ ಇವರು, ವಿತರಕರಾಗಿ ಹಾಗೂ ನಿರ್ಮಾಪಕರಿ ಸಾಕಷ್ಟು ಹೆಸರು ಮಾಡಿದ್ದಾರೆ. ಅದರಲ್ಲೂ ನಿರ್ದೇಶಕ ಎಸ್. ನಾರಾಯಣ್ ಮತ್ತು ಕುಮಾರಸ್ವಾಮಿ ಅವರು ಜೊತೆಯಾಗಿ. ಸೂರ್ಯವಂಶ’, ‘ಚಂದ್ರಚಕೋರಿ’, ‘ಗಲಾಟೆ ಅಳಿಯಂದ್ರು’ ಸೇರಿದಂತೆ ಸಾಕಷ್ಟು ಹಿಟ್ ಚಿತ್ರಗಳನ್ನು ಕನ್ನಡ ಚಿತ್ರರಂಗಕ್ಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ