ತೆರೆಗೆ ಬಂತು ‘ಸದ್ದು ವಿಚಾರಣೆ ನಡೆಯುತ್ತಿದೆ’ ಸಿನಿಮಾ
Team Udayavani, Nov 25, 2022, 12:24 PM IST
ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸಿರುವ “ಸದ್ದು ವಿಚಾರಣೆ ನಡೆಯುತ್ತಿದೆ’ ಸಿನಿಮಾ ಇಂದು ತೆರೆಗೆ ಬಂದಿದೆ. ಸಸ್ಪೆನ್ಸ್ ಕಂ ಕ್ರೈಂ-ಥ್ರಿಲ್ಲರ್ ಕಥಾಹಂದರ ಹೊಂದಿರುವ “ಸದ್ದು ವಿಚಾರಣೆ ನಡೆಯುತ್ತಿದೆ’ ಸಿನಿಮಾದಲ್ಲಿ ರಾಕೇಶ್ ಮಯ್ಯ, ಪಾವನಾ ಗೌಡ, ಯದುನಂದನ್, ಅಚ್ಯುತ್ ಕುಮಾರ, ಕೃಷ್ಣ ಹೆಬ್ಟಾಳೆ, ರಾಘು ಶಿವಮೊಗ್ಗ, ಜಾಹಂಗೀರ್, ರೋಹಿಣಿ ಮೊದಲಾದವರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
“ಎಂ. ಎಂ. ಸಿನಿಮಾಸ್’ ಬ್ಯಾನರ್ನಡಿ ನಿರ್ಮಾಣವಾಗಿರುವ “ಸದ್ದು ವಿಚಾರಣೆ ನಡೆಯುತ್ತಿದೆ’ ಸಿನಿಮಾಕ್ಕೆ ಅಶ್ವಿನಿ ಕೆ. ಎನ್ ಕಥೆ ಬರೆದಿದ್ದು, ರಂಗಭೂಮಿ ಪ್ರತಿಭೆ ಭಾಸ್ಕರ್ ಆರ್. ನೀನಾಸಂ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.
‘ಒಂದಷ್ಟು ನೈಜ ಘಟನೆಗಳಿಂದ ಸ್ಫೂರ್ತಿ ಪಡೆದು ಹೆಣೆದ ಕಥೆಯನ್ನು ಈ ಸಿನಿಮಾದಲ್ಲಿ ಹೇಳಲಾಗಿದೆ. ಸಸ್ಪೆನ್ಸ್ ಕಂ ಕ್ರೈಂ-ಥ್ರಿಲ್ಲರ್ ಕಥಾಹಂದರವನ್ನು ಆದಷ್ಟು ನೈಜವಾಗಿ ಚಿತ್ರಿಸಿ ತೆರೆಗೆ ತಂದಿದ್ದೇವೆ’ ಎಂಬುದು ಚಿತ್ರತಂಡದ ಮಾತು. ಚಿತ್ರದಲ್ಲಿ ರಾಘು ಶಿವಮೊಗ್ಗ ಪ್ರಮುಖ ಪಾತ್ರ ಮಾಡಿದ್ದಾರೆ.