ಸಾಧು ಹೊಸ ಸಾಹಸ

"ಲೂಪ್‌ ಎಂಟರ್‌ಟೈನ್ಮೆಂಟ್‌ ಸ್ಟುಡಿಯೋ'ಗೆ ಎಸ್ಪಿಬಿ ಚಾಲನೆ

Team Udayavani, Jun 17, 2019, 3:00 AM IST

Sadhu-Kokila

ಕನ್ನಡ ಚಿತ್ರರಂಗದಲ್ಲಿ ನಟನಾಗಿ, ನಿರ್ದೇಶಕನಾಗಿ, ಸಂಗೀತ ನಿರ್ದೇಶಕನಾಗಿ ಗುರುತಿಸಿಕೊಂಡಿರುವ ಸಾಧು ಕೋಕಿಲ ಈಗ ಹೊಸ ಸಾಹಸಕ್ಕೆ ಕೈ ಹಾಕಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಮತ್ತು ಕನ್ನಡ ಚಿತ್ರಗಳ ಸಂಪೂರ್ಣ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳಿಗೆ ಅನುಕೂಲವಾಗಲು ಸಾಧು ಕೋಕಿಲ, ಅತ್ಯಾಧುನಿಕ ಮತ್ತು ಸುಸಜ್ಜಿತ ಪೋಸ್ಟ್‌ ಪ್ರೊಡಕ್ಷನ್ಸ್‌ ಸ್ಟುಡಿಯೋವನ್ನು ನಿರ್ಮಿಸಿದ್ದಾರೆ.

“ಲೂಪ್‌ ಎಂಟರ್‌ಟೈನ್ಮೆಂಟ್‌ ಸ್ಟುಡಿಯೋ’ ಹೆಸರಿನ ಈ ಸ್ಟುಡಿಯೋವನ್ನು ಇತ್ತೀಚೆಗೆ ಖ್ಯಾತ ಗಾಯಕ ಎಸ್‌.ಪಿ ಬಾಲಸುಬ್ರಹ್ಮಣ್ಯಂ ಉದ್ಘಾಟಿಸಿದರು. ಇದೇ ವೇಳೆ ಮಾತನಾಡಿದ ಎಸ್‌.ಪಿ ಬಾಲಸುಬ್ರಹ್ಮಣ್ಯಂ, “ಸಾಧುಕೋಕಿಲ ಅವರಿಗೆ ಸಂಗೀತದಲ್ಲಿ ವಿಶೇಷ ಪ್ರತಿಭೆ ಇದೆ. ಸಾಕಷ್ಟು ಅನುಭವವಿದೆ. ಅವರು ಸಂಗೀತ ನಿರ್ದೇಶಿಸಿರುವ ಹಲವು ಹಾಡುಗಳನ್ನು ನಾನು ಹಾಡಿದ್ದೇನೆ.

ಅವರು ಸಂಗೀತದಲ್ಲಿಯೇ ಹೆಚ್ಚು ತೊಡಗಿಸಿಕೊಳ್ಳಬೇಕು ಎನ್ನುವುದು ನನ್ನ ವೈಯಕ್ತಿಕ ಆಶಯ ಕೂಡ. ನನ್ನ ದೃಷ್ಟಿಯಲ್ಲಿ ನನಗೆ ಹಾಡಲು ಅವಕಾಶ ನೀಡುವ ಪ್ರತಿ ಸಂಗೀತ ನಿರ್ದೇಶಕರು ಕೂಡ ಗುರುಗಳಂತೆ. ಹಾಗಾಗಿ ಸಾಧು ಕೋಕಿಲ ಕೂಡ ನನ್ನ ಗುರು. ಮ್ಯೂಸಿಕ್‌ ಡೈರೆಕ್ಟರ್‌ಗಳು ನಮಗೆ ಹಾಡುವ ಅವಕಾಶ ನೀಡಿ, ಹೇಗೆ ಹಾಡಬೇಕು ಎಂದೂ ಹೇಳಿ ಕೊಡುತ್ತಾರೆ. ಅವರಿಂದ ಕಲಿಯುವುದು ಸಾಕಷ್ಟಿರುತ್ತದೆ.

ಹಾಗಾಗಿ ನನಗೆ ಅವರೆಲ್ಲ ಗುರುಗಳು’ ಎಂದಿದ್ದಾರೆ ಬಾಲುಸುಬ್ರಹ್ಮಣ್ಯಂ. ಇನ್ನು “ಲೂಪ್‌ ಎಂಟರ್‌ಟೈನ್ಮೆಂಟ್‌ ಸ್ಟುಡಿಯೋ’ ಸಾಧು ಕೋಕಿಲ ಪುತ್ರ ಸುರಾಗ್‌ ಮತ್ತು ಸಂಕಲನಕಾರ ಜೋ.ನಿ ಹರ್ಷ ಮೇಲುಸ್ತುವಾರಿಯಲ್ಲಿ ನಿರ್ಮಾಣವಾಗಿದೆ. ಈ ಸ್ಟುಡಿಯೋದಲ್ಲಿ ಡಬ್ಬಿಂಗ್‌, ರೀ ರೆಕಾರ್ಡಿಂಗ್‌, ಗ್ರಾಫಿಕ್ಸ್‌, ವಿಎಫ್ಎಕ್ಸ್‌, ಎಸ್‌ಎಫ್ಎಕ್ಸ್‌, ಎಡಿಟಿಂಗ್‌, ಕಲರ್‌ ಗ್ರೇಡಿಂಗ್‌, ಡಿಟಿಎಸ್‌ ಮಿಕ್ಸ್‌ ಸೇರಿದಂತೆ ಚಿತ್ರ ನಿರ್ಮಾಣಕ್ಕೆ ಸಂಬಂಧಿಸಿದ ಬಹುತೇಕ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳು ಒಂದೇ ಸೂರಿನಲ್ಲಿ ನಡೆಯಲಿದೆ.

ಟಾಪ್ ನ್ಯೂಸ್

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.