ದೊಡ್ಡ ಮೊತ್ತಕ್ಕೆ “ಸಲಗʼ ಆಡಿಯೋ ಸೇಲ್‌

ಡಿ.18 ರಂದು ಮೇಕಿಂಗ್‌ ವಿಡಿಯೋ ಬಿಡುಗಡೆ

Team Udayavani, Dec 14, 2019, 7:01 AM IST

Salaga

“ದುನಿಯಾ’ ವಿಜಯ್‌ ಇದೇ ಮೊದಲ ಬಾರಿಗೆ “ಸಲಗ’ ಚಿತ್ರ ನಿರ್ದೇಶನ ಮಾಡುತ್ತಿರುವುದು ಗೊತ್ತೇ ಇದೆ. ಅವರ ಮೊದಲ ನಿರ್ದೇಶನದ ಚಿತ್ರ ಆಗಿರುವುದರಿಂದ ಎಲ್ಲರಿಗೂ ನಿರೀಕ್ಷೆ ಇದ್ದೇ ಇರುತ್ತೆ. ಮೊದಲ ಪೋಸ್ಟರ್‌ ಮೂಲಕವೇ ನಟ ಕಮ್‌ ನಿರ್ದೇಶಕ “ದುನಿಯಾ’ ವಿಜಯ್‌, ಕುತೂಹಲ ಮೂಡಿಸಿದ್ದು ಸುಳ್ಳಲ್ಲ. ಈಗ ಚಿತ್ರ ಬಿಡುಗಡೆಗೆ ಸಜ್ಜಾಗುತ್ತಿದೆ. ಅದಕ್ಕೂ ಮೊದಲು ಚಿತ್ರದ ಮೇಕಿಂಗ್‌ ವಿಡಿಯೋ ಬಿಡುಗಡೆ ಮಾಡಲು ವಿಜಯ್‌ ಮತ್ತು ಚಿತ್ರತಂಡ ನಿರ್ಧರಿಸಿದೆ.

ಹೌದು, ಡಿಸೆಂಬರ್‌ 18 ರಂದು “ಸಲಗ’ ಚಿತ್ರದ ಮೇಕಿಂಗ್‌ ವಿಡಿಯೋ ಬಿಡುಗಡೆಯಾಗುತ್ತಿದೆ. ಈ ಕುರಿತು ಸ್ವತಃ “ದುನಿಯಾ’ ವಿಜಯ್‌ ಅವರೇ, ತಮ್ಮ ಮುಖಪುಟದಲ್ಲಿ ಬರೆದುಕೊಂಡಿದ್ದಾರೆ. ನಟನೆ ಜೊತೆಯಲ್ಲೂ ನಿರ್ದೇಶನಕ್ಕಿಳಿದಿರುವ “ದುನಿಯಾ’ ವಿಜಯ್‌, ತುಂಬ ಆಸಕ್ತಿ ಮತ್ತು ಶ್ರದ್ಧೆಯಿಂದ ಮಾಡಿರುವ “ಸಲಗ’ ಚಿತ್ರದಲ್ಲಿ “ಡಾಲಿ’ ಧನಂಜಯ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಧನಂಜಯ್‌ ಹಾಗು ವಿಜಯ್‌ಗೂ ಇದು ಹೊಸ ಕಾಂಬಿನೇಷನ್‌.

ಹಾಗಾಗಿ ಇನ್ನಷ್ಟು ನಿರೀಕ್ಷೆಯೂ ಹೆಚ್ಚಿದೆ. ಚಿತ್ರದ ಶೀರ್ಷಿಕೆಯೇ ಹೇಳುವಂತೆ, ಇದೊಂದು ಪಕ್ಕಾ ರೌಡಿಸಂ ಸಬ್ಜೆಕ್ಟ್. ಅದರಲ್ಲೂ ಇಡೀ ಚಿತ್ರ ಆ್ಯಕ್ಷನ್‌ಮಯವಾಗಿರುತ್ತೆ. ಅಷ್ಟೇ ಅಲ್ಲ, ಚಿತ್ರದಲ್ಲಿ ಒಂದಷ್ಟು ಗೊತ್ತಿರದ ಅಂಶಗಳೂ ಇರಲಿವೆ ಎಂಬುದು ವಿಶೇಷ. ಪಕ್ಕಾ ಮಾಸ್‌ ಎಂಟರ್‌ಟೈನ್‌ಮೆಂಟ್‌ ಎನ್ನುವ ಚಿತ್ರತಂಡ, ಮಾಸ್‌ ಪ್ರಿಯರಿಗೆ ಹೇಳಿ ಮಾಡಿಸಿದ ಚಿತ್ರ ಎಂಬ ಗ್ಯಾರಂಟಿ ಕೊಡುತ್ತದೆ. ಈ ಚಿತ್ರವನ್ನು ಕೆ.ಪಿ.ಶ್ರೀಕಾಂತ್‌ ನಿರ್ಮಾಣ ಮಾಡುತ್ತಿದ್ದಾರೆ.

“ಟಗರು’ ಬಳಿಕ ಶ್ರೀಕಾಂತ್‌ ಅವರು, ಈ ಚಿತ್ರ ನಿರ್ಮಿಸುತ್ತಿದ್ದು, ಚಿತ್ರವನ್ನು ಅದ್ಧೂರಿಯಾಗಿಯೇ ನಿರ್ಮಿಸಿದ್ದಾರೆ. “ಟಗರು’ ಚಿತ್ರಕ್ಕೆ ಸಂಗೀತ ನೀಡಿದ್ದ ಚರಣ್‌ ರಾಜ್‌ ಅವರೇ “ಸಲಗ’ ಚಿತ್ರಕ್ಕೂ ಸಂಗೀತ ನೀಡುತ್ತಿದ್ದಾರೆ. ಡಿ.18 ರಂದು ಬಿಡುಗಡೆಯಾಗಲಿರುವ ಮೇಕಿಂಗ್‌ ವಿಡಿಯೋ ಮೂಲಕ ಹೊಸದೊಂದು ಛಾಪು ಮೂಡಿಸುವ ನಿರೀಕ್ಷೆ ಚಿತ್ರತಂಡಕ್ಕಿದೆ. ಅಂದಹಾಗೆ, ಈ ಚಿತ್ರಕ್ಕೆ ಸಂಜನಾ ನಾಯಕಿಯಾಗಿದ್ದಾರೆ. ಈ ಹಿಂದೆ ಸಂಜನಾ ಅವರು “ಕೆಮಿಸ್ಟ್ರಿ ಆಫ್ ಕರಿಯಪ್ಪ’ ಚಿತ್ರದಲ್ಲಿ ನಟಿಸಿದ್ದರು.

ದೊಡ್ಡ ಮೊತ್ತಕ್ಕೆ ಆಡಿಯೋ ಖರೀದಿ: “ಸಲಗ’ ಚಿತ್ರದ ಆಡಿಯೋ ಹಕ್ಕು ದಾಖಲೆಯ ಮೊತ್ತಕ್ಕೆ ಮಾರಾಟವಾಗಿದೆ ಎಂಬುದು ಇನ್ನೊಂದು ವಿಶೇಷ. ಈ ಚಿತ್ರಕ್ಕೆ “ಟಗರು’ ಖ್ಯಾತಿಯ ಚರಣ್‌ರಾಜ್‌ ಸಂಗೀತ ನೀಡಿದ್ದಾರೆ. ಎ2 ಆಡಿಯೋ ಕಂಪೆನಿಗೆ ಚಿತ್ರದ ಹಾಡುಗಳು ದಾಖಲೆಯ ಮೊತ್ತಕ್ಕೆ ಮಾರಾಟವಾಗಿವೆ. ಆದರೆ, ಆ ಮೊತ್ತ ಎಷ್ಟು ಎಂಬುದನ್ನು ಚಿತ್ರತಂಡ ಮಾತ್ರ ಹೇಳಿಕೊಂಡಿಲ್ಲ. ಎ2 ಹೆಸರಲ್ಲಿ ಹೊಸ ಆಡಿಯೋ ಕಂಪೆನಿ ಶುರು ಮಾಡಿರುವುದು ಬೇರಾರು ಅಲ್ಲ, “ಜೋಗಿ’ ನಿರ್ಮಾಪಕ ಕೃಷ್ಣ ಪ್ರಸಾದ್‌.

ಅಶ್ವಿ‌ನಿ ಆಡಿಯೋದ ಕೃಷ್ಣ ಪ್ರಸಾದ್‌ ಅವರು ಈಗ “ಸಲಗ’ ಚಿತ್ರದ ಮೂಲಕ ಪುನಃ ಹಿಂದಿರುಗಿದ್ದಾರೆ. ಅಶ್ವಿ‌ನಿ ಆಡಿಯೋ ಕಂಪೆನಿ ಹೆಸರನ್ನು ಈಗ ಎ2 ಆಡಿಯೋ, ಎ2 ಎಂಟರ್‌ಟೈನ್‌ಮೆಂಟ್‌ ಹೆಸರಲ್ಲಿ ಮರು ನಾಮಕರಣ ಮಾಡಿಕೊಂಡು “ಸಲಗ’ ಚಿತ್ರದ ಆಡಿಯೋ ಖರೀದಿಸಿದ್ದಾರೆ. ಸದ್ಯದಲ್ಲೇ ಚಿತ್ರದ ಲಿರಿಕಲ್ ವಿಡಿಯೋ ಬಿಡುಗಡೆ ಮಾಡುವ ತಯಾರಿಯಲ್ಲಿರುವ ಚಿತ್ರತಂಡ, ಮೊದಲು ಚಿತ್ರದ ಮೇಕಿಂಗ್‌ ವಿಡಿಯೋ ಬಿಡುಗಡೆ ಮಾಡಿ, ನಂತರ ಆಡಿಯೋ ಬಿಡುಗಡೆ ಮಾಡಲಿದೆ.

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.