ಒಂದೇ ದಿನ ‘ಸೀತಾರಾಮ ..’ ‘ಐ ಲವ್‌ ಯು’ ಕಾರ್ಯಕ್ರಮ!


Team Udayavani, Jan 17, 2019, 11:10 AM IST

actress.jpg

ರಚಿತಾ ರಾಮ್‌ ನಾಯಕಿಯಾಗಿರುವ ಸಾಲು ಸಾಲು ಸಿನಿಮಾಗಳು ಈ ವರ್ಷ ಬಿಡುಗಡೆಯಾಗಲಿದೆ ಎಂಬ ವಿಚಾರ ನಿಮಗೆ ಗೊತ್ತೆ ಇದೆ. ‘ಸೀತಾರಾಮ ಕಲ್ಯಾಣ’ ಚಿತ್ರ ಬಿಡುಗಡೆಯಾಗುವ ಮೂಲಕ ರಚಿತಾ ಅವರ ಈ ವರ್ಷ ಸಿನಿ ಅಕೌಂಟ್ ಆರಂಭವಾಗುತ್ತಿದೆ. ಆ ನಂತರ ‘ನಟಸಾರ್ವಭೌಮ’. ಅದರ ಬೆನ್ನಲ್ಲೇ ‘ಐ ಲವ್‌ ಯು’ ಚಿತ್ರಗಳು ಬಿಡುಗಡೆಯಾಗಲಿದೆ.

ಸಿನಿಮಾ ಬಿಡುಗಡೆಗೆ ಮೊದಲು ಸಿನಿಮಾ ತಂಡಗಳು ದೊಡ್ಡ ಕಾರ್ಯಕ್ರಮ ಮಾಡಿ, ಸಿನಿಮಾ ಪ್ರಚಾರ ಕೈಗೊಳ್ಳುವುದು ವಾಡಿಕೆ. ಈಗ ರಚಿತಾ ನಾಯಕಿಯಾಗಿರುವ ಎರಡು ಚಿತ್ರಗಳು ಒಂದೇ ದಿನ ಕಾರ್ಯಕ್ರಮ ಆಯೋಜಿಸಿದೆ. ಈ ಮೂಲಕ ರಚಿತಾಗೆ ಯಾವ ಕಾರ್ಯಕ್ರಮಕ್ಕೆ ಹೋಗೋದು ಎಂಬ ಗೊಂದಲವೂ ಉಂಟಾಗಿದೆ.

ನಿಮಗೆ ಗೊತ್ತಿರುವಂತೆ ಎ.ಹರ್ಷ ನಿರ್ದೇಶನದ, ನಿಖೀಲ್‌ ಕುಮಾರ್‌ ನಾಯಕರಾಗಿರುವ ‘ಸೀತಾರಾಮ ಕಲ್ಯಾಣ’ ಚಿತ್ರ ಇದೇ ಜ.25 ರಂದು ಬಿಡುಗಡೆಯಾಗುತ್ತಿದೆ. ಬಿಡುಗಡೆಗೆ ಮೊದಲು ಚಿತ್ರತಂಡ ಜನವರಿ 19 ರಂದು ಮೈಸೂರಿನಲ್ಲಿ ಅದ್ಧೂರಿಯಾಗಿ ಪ್ರೀ ರಿಲೀಸ್‌ ಇವೆಂಟ್ ಮಾಡುತ್ತಿದೆ. ಈ ಮೂಲಕ ಆ ಭಾಗದ ಜನರ ಮುಂದೆ ಚಿತ್ರತಂಡ ತಮ್ಮ ಸಿನಿ ಮಾಹಿತಿ ಹಂಚಿಕೊಳ್ಳಲಿದೆ.

ಇತ್ತ ಕಡೆ ಆರ್‌.ಚಂದ್ರು ನಿರ್ಮಾಣ, ನಿರ್ದೇಶನದ, ಉಪೇಂದ್ರ ನಾಯಕರಾಗಿರುವ ‘ಐ ಲವ್‌ ಯು’ ಚಿತ್ರದ ಆಡಿಯೋ ಬಿಡುಗಡೆ ಜನವರಿ 19 ರಂದು ದಾವಣಗೆರೆಯಲ್ಲಿ ನಡೆಯಲಿದೆ. ಈ ಎರಡೂ ಚಿತ್ರಗಳಿಗೂ ರಚಿತಾ ರಾಮ್‌ ನಾಯಕಿ. ಸಹಜವಾಗಿಯೇ ರಚಿತಾ ಅಭಿಮಾನಿಗಳಲ್ಲಿ ಯಾವ ಕಾರ್ಯಕ್ರಮಕ್ಕೆ ರಚಿತಾ ಹೋಗುತ್ತಾರೆಂಬ ಕುತೂಹಲವಿದೆ. ಏಕೆಂದರೆ ಎರಡು ಕೂಡಾ ರಚಿತಾ ರಾಮ್‌ ಸಿನಿಮಾಗಳೆ.

ಈ ಬಗ್ಗೆ ರಚಿತಾ ರಾಮ್‌ ಅವರನ್ನು ಕೇಳಿದರೆ, ಮೊದಲು ಯಾವ ಸಿನಿಮಾ ಬಿಡುಗಡೆಯಾಗುತ್ತದೆಯೋ ಆ ಸಿನಿಮಾಕ್ಕೆ ನನ್ನ ಮೊದಲ ಆದ್ಯತೆ ಎಂಬ ಉತ್ತರ ಬರುತ್ತದೆ. ಈ ಬಗ್ಗೆ ಮಾತನಾಡುವ ರಚಿತಾ, ‘ನಾನು ಕೂಡಾ ಸಾಕಷ್ಟು ಗೊಂದಲದಲ್ಲಿದ್ದೇನೆ.

ಆದರೆ, ಪ್ರೊಫೆಶನಲ್‌ ಆಗಿ ನಾನು ಯೋಚಿಸಿದರೆ ಯಾವ ಸಿನಿಮಾ ಮೊದಲು ಬಿಡುಗಡೆಯಾಗುತ್ತದೋ ಆ ಸಿನಿಮಾಕ್ಕೆ ಮೊದಲ ಆದ್ಯತೆ ಕೊಡಬೇಕು. ಆ ಸಿನಿಮಾದ ಪ್ರಚಾರದಲ್ಲಿ ಭಾಗಿಯಾಗುವುದು ನನ್ನ ಕರ್ತವ್ಯ. ಆ ನಿಟ್ಟಿನಲ್ಲಿ ಹೇಳುವುದಾದರೆ ‘ಸೀತಾರಾಮ ಕಲ್ಯಾಣ’ ಮೊದಲು ಬಿಡುಗಡೆಯಾಗುತ್ತಿದೆ. ಜ.25 ರಂದು ಚಿತ್ರ ತೆರೆಗೆ ಬರುತ್ತದೆ. ಬಿಡುಗಡೆಯ ಹಂತದಲ್ಲಿರುವ ಚಿತ್ರವನ್ನು ಪ್ರಮೋಶನ್‌ ಮಾಡಬೇಕು. ಆ ನಂತರ ‘ನಟಸಾರ್ವಭೌಮ’ ಚಿತ್ರ ಬಿಡುಗಡೆಯಾಗಲಿದೆ.

ಆ ಚಿತ್ರ ತೆರೆಕಂಡ ನಂತರ ‘ಐ ಲವ್‌ ಯು’ ಬರಲಿದೆ. ಹೀಗಾಗಿ, ಮೊದಲು ಬಿಡುಗಡೆಯಾಗುವ ಚಿತ್ರಕ್ಕೆ ಮೊದಲ ಆದ್ಯತೆ ಕೊಡಬೇಕೆಂದಿದ್ದೇನೆ. ಎಲ್ಲವೂ ನನ್ನ ಸಿನಿಮಾಗಳೇ. ನಾನು ಖುಷಿಯಿಂದ ಒಪ್ಪಿಕೊಂಡ ಸಿನಿಮಾಗಳು. ಅವುಗಳ ಪ್ರಚಾರದಲ್ಲಿ, ಸಮಯಕ್ಕೆ ಸರಿಯಾಗಿ ಭಾಗಿಯಾಗುತ್ತೇನೆ’ ಎನ್ನುವುದು ರಚಿತಾ ರಾಮ್‌ ಮಾತು.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.