ಗುರು ಹೊಸ ಚಿತ್ರ ಸಂಹಾರಕ್ಕೆ ಹರಿಪ್ರಿಯ, ಕಾವ್ಯ ನಾಯಕಿಯರು…
Team Udayavani, Apr 20, 2017, 12:25 PM IST
ಮೊನ್ನೆಯಷ್ಟೇ ಪ್ರಜ್ವಲ್ ಮತ್ತು ರವಿಚಂದ್ರನ್ ಅಭಿನಯದಲ್ಲಿ ರಾಜ ಮಾಣಿಕ್ಯ ಎಂಬ ಚಿತ್ರ ಮಾಡುವುದಾಗಿ ಘೋಷಿಸಿದ್ದರು ನಿರ್ದೇಶಕ ಗುರು ದೇಶಪಾಂಡೆ. ಆ ಚಿತ್ರ ಶುರುವಾಗುವ ಮುನ್ನ ಸದ್ದಿಲ್ಲದೆ ಇನ್ನೊಂದು ಹೊಸ ಚಿತ್ರಕ್ಕೆ ಅವರು ಚಾಲನೆ ಕೊಟ್ಟಿದ್ದಾರೆ. ಅಷ್ಟೇ ಅಲ್ಲ, ಬುಧವಾರ ಬೆಳಿಗ್ಗೆ ರವಿ ಬಸ್ರೂರು ಸಂಗೀತ ಸಂಯೋಜನೆಯಲ್ಲಿ ಹಾಡುಗಳ ರೆಕಾರ್ಡಿಂಗ್ ಕೆಲಸ ಸಹ ಶುರುವಾಗಿದೆ.
ಅಂದಹಾಗೆ, ಈ ಚಿತ್ರದ ಹೆಸರು “ಸಂಹಾರ’. ಚಿತ್ರದಲ್ಲಿ ಚಿರಂಜೀವಿ ಸರ್ಜಾ ಹೀರೋ ಆಗಿ ಅಭಿನಯಿಸುತ್ತಿದ್ದಾರೆ. ಇನ್ನು ಚಿಕ್ಕಣ್ಣ ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ ಚಿರು ಮತ್ತು ಚಿಕ್ಕಣ್ಣ ಅಭಿನಯದಲ್ಲಿ “ರುದ್ರ ತಾಂಡವ’ ಮಾಡಿದ್ದರು ಗುರು. ಈಗ ಅವರಿಬ್ಬರ ಜೊತೆಗೆ ಮತ್ತೆ ಕೆಲಸ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಚಿರು ಮತ್ತು ಚಿಕ್ಕಣ್ಣರಷ್ಟೇ ಅಲ್ಲ, “ರುದ್ರ ತಾಂಡವ’ ಚಿತ್ರಕ್ಕೆ ಛಾಯಾಗ್ರಾಹಕರಾಗಿದ್ದ ಜಗದೀಶ್ ವಾಲಿ, ಸಂಕಲನಕಾರ ಕೆ.ಎಂ. ಪ್ರಕಾಶ್ ಇಲ್ಲೂ ಮುಂದುವರೆಯುತ್ತಿದ್ದಾರೆ. ಸಂಗೀತ ನಿರ್ದೇಶಕ ರವಿ ಬಸ್ರೂರು ಮಾತ್ರ ಹೊಸ ಸೇರ್ಪಡೆ.
ಅಂದಹಾಗೆ, ಈ ಚಿತ್ರದಲ್ಲಿ ಚಿರುಗೆ ನಾಯಕಿಯರಾಗಿ ಹರಿಪ್ರಿಯ ಮತ್ತು ಕಾವ್ಯ ಶೆಟ್ಟಿ ಅಭಿನಯಿಸುತ್ತಿದ್ದಾರೆ. ಚಿತ್ರವನ್ನು ವೆಂಕಟೇಶ್ ಮತ್ತು ಸುಂದರ್ ಕಾಮರಾಜ್ ನಿರ್ಮಿಸುತ್ತಿದ್ದಾರೆ. ಈ ಚಿತ್ರ ಏಪ್ರಿಲ್ 29ರಂದು ಸೆಟ್ಟೇರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
MUST WATCH
ಹೊಸ ಸೇರ್ಪಡೆ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ