ಸಂಹಿತಾ ಸಿನಿ ಸಂಭ್ರಮ

ಕನ್ನಡ-ತಮಿಳಿನಲ್ಲಿ ಬಿಝಿ

Team Udayavani, Jul 3, 2019, 3:00 AM IST

Samhitha

ಮಾಡೆಲಿಂಗ್‌ ಎಂಬುದು ಚಿತ್ರರಂಗಕ್ಕೆ ನಟ-ನಟಿಯರಾಗಲು ಬಯಸುವಂಥವರಿಗೆ ಮೊದಲು ಮೆಟ್ಟಿಲಿದ್ದಂತೆ. ಮಾಡೆಲಿಂಗ್‌ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ಅನೇಕ ನಟ-ನಟಿಯರು ನಂತರ ಚಿತ್ರರಂಗದಲ್ಲಿ ಭದ್ರವಾಗಿ ನೆಲೆಯೂರಿರುವ ಸಾಕಷ್ಟು ಉದಾಹರಣೆಗಳು ಕನ್ನಡ ಚಿತ್ರರಂಗದಲ್ಲೂ ಸಿಗುತ್ತದೆ. ಈಗ ಈ ಸಾಲಿಗೆ ಸಂಹಿತಾ ವಿನ್ಯಾ ಎನ್ನುವ ಅಂಥದ್ದೇ ಮತ್ತೂಂದು ಹೆಸರು ಸೇರ್ಪಡೆಯಾಗುತ್ತಿದೆ.

ಸುಮಾರು 3-4 ವರ್ಷಗಳಿಂದ ಮಾಡೆಲಿಂಗ್‌ ಲೋಕದಲ್ಲಿ ಸಕ್ರಿಯವಾಗಿರುವ ಸಂಹಿತಾ ವಿನ್ಯಾ, ಅನೇಕ ಜಾಹೀರಾತುಗಳು, ಕೆಲ ಕಿರುಚಿತ್ರಗಳಲ್ಲಿ ಅಭಿನಯಿಸುತ್ತಲೇ ಹಿರಿತೆರೆಗೆ ಕಾಲಿಟ್ಟ ಹುಡುಗಿ. ಆರಂಭದಲ್ಲಿ ಬೈರಾಜ್‌ ನಿರ್ದೇಶನದ “ಸೂತ್ರದಾರಿ’ ಚಿತ್ರದಲ್ಲಿ ಸಣ್ಣ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಸಂಹಿತಾ ವಿನ್ಯಾ, ಬಳಿಕ ಎ. ಮಂಜು ದೈವಜ್ಞ ನಿರ್ದೇಶನದ “ಗೌಡರ ದರ್ಬಾರ್‌’ ಚಿತ್ರದ ಪಾತ್ರಕ್ಕೂ ಬಣ್ಣ ಹಚ್ಚಿದರು.

“ಗೌಡರ ದರ್ಬಾರ್‌’ ಚಿತ್ರದ ಬಳಿಕ ಸಂಹಿತಾ ವಿನ್ಯಾಗೆ, ನಿಧಾನವಾಗಿ ಒಂದಷ್ಟು ಅವಕಾಶಗಳು ಹುಡುಕಿಕೊಂಡು ಬರಲು ಶುರುವಾದವು. ತಮ್ಮ ಚಿತ್ರರಂಗದ ಅನುಭವಗಳ ಬಗ್ಗೆ ಮಾತನಾಡುವ ಸಂಹಿತಾ ವಿನ್ಯಾ, “ಕನ್ನಡ ಚಿತ್ರರಂಗಕ್ಕೆ ಬಂದು ಸುಮಾರು ಎರಡು ವರ್ಷವಾಯ್ತು. ಈ ಎರಡು ವರ್ಷದಲ್ಲಿ ನಾನು ನಾಯಕಿಯಾಗಿ ಅಭಿನಯಿಸಿದ್ದ “ಹಾಲುತುಪ್ಪ’, “ಅಮೃತ ಘಳಿಗೆ’ ಎರಡು ಚಿತ್ರಗಳು ಬಿಡುಗಡೆಯಾಗಿವೆ.

ಇನ್ನೂ “ವಿಷ್ಣು ಸರ್ಕಲ್‌’, “ಸೀತಮ್ಮ ಬಂದಳು ಸಿರಿಮಲ್ಲಿಗೆ ತೊಟ್ಟು’, “ಗೌಡರ ದರ್ಬಾರ್‌’ ಚಿತ್ರಗಳು ರಿಲೀಸ್‌ಗೆ ರೆಡಿಯಾಗಿವೆ. ಇದರ ನಡುವೆಯೇ ತಮಿಳಿನಲ್ಲಿ “ಕಾದಲ್‌ ವಾನಮ್‌’ ಚಿತ್ರದಲ್ಲೂ ನಟಿಸುವ ಅವಕಾಶ ಸಿಕ್ಕಿತು. ಇಲ್ಲಿಯವರೆಗೆ ಅಭಿನಯಿಸಿರುವ ಪ್ರತಿಚಿತ್ರಗಳು ಕೂಡ ಒಂದೊಂದು ವಿಭಿನ್ನ ಅನುಭವ ಕೊಟ್ಟಿವೆ. ನಾನು ಪ್ರತಿ ಪಾತ್ರಗಳನ್ನೂ ಖುಷಿಯಿಂದ ನಿರ್ವಹಿಸಿದ್ದೇನೆ’ ಎನ್ನುತ್ತಾರೆ.

ಆದರೆ ಇತ್ತೀಚೆಗೆ ಕನ್ನಡ ಚಿತ್ರರಂಗದಲ್ಲಿ ಕನ್ನಡ ಚಿತ್ರಗಳಿಗೆ ಇಲ್ಲಿಯ ನಟಿಯರಿಗಿಂತ ಪರಭಾಷಾ ನಟಿಯರಿಗೆ ಹೆಚ್ಚಿನ ಆದ್ಯತೆ ಸಿಗುತ್ತಿದೆ ಎನ್ನುವುದು ಸಂಹಿತಾ ವಿನ್ಯಾ ಅಸಮಾಧಾನಕ್ಕೆ ಕಾರಣವಾಗಿದೆ. ಈ ಬಗ್ಗೆ ಮಾತನಾಡುವ ಸಂಹಿತಾ ವಿನ್ಯಾ “ಕನ್ನಡದಲ್ಲಿ ಇತ್ತೀಚೆಗೆ ಹೆಚ್ಚು ಹೆಚ್ಚು ಚಿತ್ರಗಳು ನಿರ್ಮಾಣವಾಗುತ್ತಿವೆ.

ಆದರೆ ಬಹುತೇಕ ಚಿತ್ರಗಳಲ್ಲಿ ಕನ್ನಡದ ನಟಿಯರಿಗೆ ಅವಕಾಶ ಸಿಗುತ್ತಿಲ್ಲ. ಇಲ್ಲಿನ ನಿರ್ಮಾಪಕರು, ನಿರ್ದೇಶಕರು ಅವಕಾಶ ಕೊಟ್ಟರೆ ಇನ್ನಷ್ಟು ಕನ್ನಡದ ನಟಿಯರು ಬೆಳಕಿಗೆ ಬರುತ್ತಾರೆ. ನನಗೂ ಕೂಡ ಬೇರೆ ಭಾಷೆಗಳಲ್ಲಿ ಚಿತ್ರಗಳ ಆಫ‌ರ್ ಬರುತ್ತಿವೆ. ಆದ್ರೆ ಕನ್ನಡ ಚಿತ್ರರಂಗದಲ್ಲೇ ಗುರುತಿಸಿಕೊಳ್ಳಬೇಕು ಎನ್ನುವ ಕಾರಣಕ್ಕೆ, ಇಲ್ಲೇ ಹೆಚ್ಚು ಗಮನ ಕೊಡುತ್ತಿದ್ದೇನೆ’ ಎನ್ನುತ್ತಾರೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.