ಇಹಲೋಕದ ಸಂಚಾರ ಮುಗಿಸಿದ ‘ವಿಜಯ್’
Team Udayavani, Jun 14, 2021, 1:26 PM IST
ಮನೋಜ್ಞ ಅಭಿನಯದ ಮೂಲಕ ರಾಷ್ಟ್ರ ಪ್ರಶಸ್ತಿ ಮುಡಿಗೇಡಿಸಿಕೊಂಡ ಪ್ರತಿಭಾನ್ವಿತ ನಟ ಸಂಚಾರಿ ವಿಜಯ್ ಇಹಲೋಕದ ಸಂಚಾರ ಮುಗಿಸಿ ಬಾರದ ಲೋಕಕ್ಕೆ ತೆರಳಿದ್ದಾರೆ. ಈ ನಟನ ಸಾವು ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ.
ರಂಗಭೂಮಿ ಹಿನ್ನೆಲೆಯಿಂದ ಬಂದ ನಟ ಸಂಚಾರಿ ವಿಜಯ್ ‘ನಾನು ಅವನಲ್ಲ ಅವಳು’ ಸಿನಿಮಾದಲ್ಲಿ ತೃತೀಯ ಲಿಂಗಿಯ ಪಾತ್ರ ನಿರ್ವಹಿಸಿ ರಾಷ್ಟ್ರ ಪ್ರಶಸ್ತಿ ಪಡೆದರು. ವಿಭಿನ್ನ ಪಾತ್ರಗಳ ಮೂಲಕ ಮನೆ ಮಾತಾಗಿದ್ದ ಸಂಚಾರಿ ವಿಜಯ್ ಚಿತ್ರರಂಗದಲ್ಲಿ ಗಟ್ಟಿಯಾಗಿ ತಳವೂರುವ ಮೊದಲೇ ತಮ್ಮ 38ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ.
ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡಿದ್ದು ಕಡಿಮೆ ಅವಧಿಯಾಗಿದ್ದರೂ ಹೆಸರು ಮಾಡಿದ್ದು ಬೆಟ್ಟದಷ್ಟು. ತಮಗೆ ಸಿಗುವ ಪ್ರತಿ ಪಾತ್ರಕ್ಕೂ ಜೀವ ತುಂಬುತ್ತಿದ್ದ ವಿಜಯ್, ತಮ್ಮ ಅಭಿಯನದಿಂದಲೇ ನೋಡುಗರನ್ನು ಮಂತ್ರ-ಮುಗ್ದರನ್ನಾಗಿಸುತ್ತಿದ್ದರು.
ವಿಜಯ್ ಬಹಳ ಕಷ್ಟದಿಂದ ಸಿನಿಮಾರಂಗದಲ್ಲಿ ಮುಂದೆ ಬಂದವರು. ರಂಗಭೂಮಿ ಹಿನ್ನೆಲೆಯಿಂದ ಬಂದ ಸಂಚಾರಿ ವಿಜಯ್ ಚಿಕ್ಕಮಗಳೂರು ಮೂಲದವರು. ಚಿಕ್ಕಮಗಳೂರಿನ ಕಡೂರು ತಾಲೂಕಿನ ಪಂಚನಹಳ್ಳಿ ಗ್ರಾಮದ ಸಂಚಾರಿ ವಿಜಯ್ ಬಹಳ ವರ್ಷಗಳ ಹಿಂದೆಯೇ ತಂದೆ-ತಾಯಿಯನ್ನು ಕಳೆದುಕೊಂಡಿದ್ದರು.
ಸಂಚಾರಿ ನಾಟಕ ತಂಡದಲ್ಲಿ ತೊಡಗಿಸಿಕೊಂಡಿದ್ದ ವಿಜಯ್ ಕುಮಾರ್ ಬಳಿಕ ಸಂಚಾರಿ ವಿಜಯ್ ಎಂದೇ ಹೆಸರಾದರು. ಸಂಚಾರಿ ವಿಜಯ್ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲೆಂದು ಇಡೀ ಚಿತ್ರರಂಗವೇ ಪ್ರಾರ್ಥನೆ ಮಾಡಿತ್ತು. ಆದರೆ, ದುರಾದೃಷ್ಟವಶಾತ್ ಅವರು ಇಹಲೋಕ ತ್ಯಜಿಸಿದ್ದಾರೆ .
ಸಂಚಾರಿ ವಿಜಯ್ ಮೊದಲಿನಿಂದಲೂ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡವರು. ಲಾಕ್ಡೌನ್ ಸಂದರ್ಭದಲ್ಲೂ ಅನೇಕರಿಗೆ ಸಹಾಯಹಸ್ತ ಚಾಚಿದ್ದ ಅವರು ಅಂಗಾಂಗಳನ್ನು ದಾನ ಮಾಡಲು ಅವರ ಸಹೋದರರು ನಿರ್ಧರಿಸಿದ್ದಾರೆ.
ನಾನು ಅವನಲ್ಲ ಅವಳು, ಒಗ್ಗರಣೆ, ಕೃಷ್ಣ ತುಳಸಿ, ಆಟಕ್ಕುಂಟು ಲೆಕ್ಕಕ್ಕಿಕ್ಕ, ವಿಲನ್, ಗೋಧಿ ಬಣ್ಣ ಸಾಧಾರಣ ಮೈಕಟ್ಟು, ಕಿಲ್ಲಿಂಗ್ ವೀರಪ್ಪನ್, ಅಲ್ಲಮ, ನಾತಿಚರಾಮಿ ಸೇರಿದಂತೆ ಮುಂತಾದ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ.
ಇತ್ತೀಚೆಗೆ ತೆರೆ ಕಂಡ ಆ್ಯಕ್ಟ್ 1978 ಸಿನಿಮಾದಲ್ಲಿ ಕಮಾಂಡೋ ಪಾತ್ರ ನಿರ್ವಹಿಸಿದ್ದ ಸಂಚಾರಿ ವಿಜಯ್ ತಮ್ಮ ಎಲ್ಲ ಸಿನಿಮಾಗಳಲ್ಲೂ ವಿಭಿನ್ನವಾದ ಪಾತ್ರಗಳ ಮೂಲಕ ಗಮನ ಸೆಳೆದಿದ್ದರು.
ಶ್ರುತಿ ಹರಿಹರನ್ ಜೊತೆ ಸಂಚಾರಿ ವಿಜಯ್ ಅಭಿನಯಿಸಿದ್ದ ನಾತಿಚರಾಮಿ ಸಿನಿಮಾಗೂ ಅತ್ಯುತ್ತಮ ಸಿನಿಮಾ ಎಂದು ರಾಷ್ಟ್ರ ಪ್ರಶಸ್ತಿ ಬಂದಿತ್ತು. ಈ ಸಿನಿಮಾ ವಿಮರ್ಶಾತ್ಮಕವಾಗಿ ಕನ್ನಡ ಚಿತ್ರರಂಗದಲ್ಲಿ ಭಾರೀ ಸದ್ದು ಮಾಡಿತ್ತು. ರಾಷ್ಟ್ರ ಪ್ರಶಸ್ತಿ ಬಂದ ಹರಿವು ಸಿನಿಮಾದಲ್ಲೂ ಸಂಚಾರಿ ವಿಜಯ್ ಮುಖ್ಯ ಪಾತ್ರ ನಿರ್ವಹಿಸಿದ್ದರು.
ಕನ್ನಡ ಮಾತ್ರವಲ್ಲದೆ ಹಲವು ತಮಿಳು, ತೆಲುಗು, ಹಿಂದಿ ಸಿನಿಮಾಗಳಲ್ಲೂ ಸಂಚಾರಿ ವಿಜಯ್ ಕೆಲಸ ಮಾಡಿದ್ದಾರೆ. ಸಾಲು ಸಾಲಾಗಿ ಅನೇಕ ಸಿನಿಮಾಗಳಲ್ಲಿ ನಟಿಸುತ್ತಿದ್ದ ಸಂಚಾರಿ ವಿಜಯ್ಗೆ ಇತ್ತೀಚೆಗೆ ಹೆಚ್ಚೆಚ್ಚು ಸಿನಿಮಾಗಳಲ್ಲಿ ಅವಕಾಶಗಳು ಅರಸಿ ಬರತೊಡಗಿದ್ದವು. ಆದರೆ, ಚಿತ್ರರಂಗದಲ್ಲಿ ಇನ್ನೇನು ತಳವೂರುತ್ತಿರುವಾಗಲೇ ಅವರು ನಮ್ಮನ್ನು ಅಗಲಿದ್ದಾರೆ.
ಚಿತ್ರರಂಗಕ್ಕೆ ಕಾಲಿಟ್ಟು ಹತ್ತು ವರ್ಷದಲ್ಲಿ ಕೆಲವೇ ಸಿನಿಮಾಗಳಲ್ಲಿ ಅಭಿನಯಿಸಿದ್ದರೂ ಸಂಚಾರಿ ವಿಜಯ್ ಸಾಕಷ್ಟು ಅಭಿಮಾನಿಗಳನ್ನು ಸಂಪಾದಿಸಿದ್ದರು. ಚಿತ್ರರಂಗದಲ್ಲಿ ಹೆಮ್ಮರವಾಗಿ ಬೆಳೆಯಬೇಕೆಂಬ ಅವರ ಕನಸು ಆರಂಭದಲ್ಲೇ ಕಮರಿಹೋಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ