ಕಲೆಕ್ಷನ್‌ ಹೇಳಿ ದೊಡ್ಡವರಾಗುವ,ನಂಬಿಸುವ ಅಗತ್ಯವಿಲ್ಲ; ಸುದೀಪ್‌


Team Udayavani, Mar 2, 2017, 4:38 PM IST

Hebbuli_new.jpg

ಹೆಬ್ಬುಲಿ ಚಿತ್ರದ ಕಲೆಕ್ಷನ್‌ ಸಖತ್‌ ಸೌಂಡ್‌ ಮಾಡುತ್ತಿದೆ. ಕನ್ನಡ ಚಿತ್ರರಂಗದಲ್ಲೇ “ಹೆಬ್ಬುಲಿ’ ಕಲೆಕ್ಷನ್‌ ವಿಷಯದಲ್ಲಿ ದಾಖಲೆ ಬರೆಯುತ್ತಿದೆ ಎನ್ನಲಾಗುತ್ತಿದೆ. ಇದು ಒಬ್ಬ ಹೀರೋಗೆ ಒಳ್ಳೆಯ ಮೈಲೇಜ್‌ ಕೊಡುವ, ಕೆರಿಯರ್‌ಗೆ ಮತ್ತಷ್ಟು ಪ್ಲಸ್‌ ಆಗುವ ವಿಷಯ ಎನ್ನುವುದರಲ್ಲಿ ಎರಡು ಮಾತಿಲ್ಲ. ಈ ಕಲೆಕ್ಷನ್‌ ಬಗ್ಗೆ ಸುದೀಪ್‌ ಏನು ಹೇಳುತ್ತಾರೆಂಬ ಕುತೂಹಲ ಸಹಜವಾಗಿಯೇ ಇರುತ್ತದೆ. ಆದರೆ ಸುದೀಪ್‌ ಮಾತ್ರ ಕಲೆಕ್ಷನ್‌ಗಿಂತ ಜನರ ಪ್ರೀತಿ, ಅವರು ಸಿನಿಮಾವನ್ನು ಅಪ್ಪಿಕೊಂಡಿರುವ ರೀತಿಯಷ್ಟೇ ಮುಖ್ಯ ಎನ್ನುತ್ತಾರೆ.

“ನಾವು ಕಲೆಕ್ಷನ್‌ ಬಗ್ಗೆ ಹೇಳಿಕೊಳ್ಳುವ ಅಗತ್ಯ ಬರೋದು ಎರಡು ಸಮಯದಲ್ಲಿ ಅಷ್ಟೇ, ಅದು ನಾವು ಬೇರೆಯವರಿಗಿಂತ ದೊಡ್ಡವರು ಎಂದು ತೋರಿಸಿಕೊಳ್ಳಲು ಅಥವಾ ಮತ್ತೂಬ್ಬರನ್ನು ನಂಬಿಸಬೇಕಾದ ಸಂದರ್ಭ ಬಂದಾಗ ಮಾತ್ರ ಕಲೆಕ್ಷನ್‌ ಬಗ್ಗೆ ಹೇಳಬೇಕು. ಆದರೆ ನಮಗೆ ಆ ಅಗತ್ಯ
ಇಲ್ಲ. ಇವತ್ತು ನಮ್ಮ ಸಿನಿಮಾ ಕಲೆಕ್ಷನ್‌ನಲ್ಲಿ ಮುಂದಿರಬಹುದು, ನಾಳೆ ಅದನ್ನು ಮತ್ತೂಂದು ಸಿನಿಮಾ ಹಿಂದಿಕ್ಕಬಹುದು. ಇಲ್ಲಿ ಕಲೆಕ್ಷನ್‌ಗಿಂತ ಜನರ ಪ್ರೀತಿ, ನಿರ್ಮಾಪಕರ ನಂಬಿಕೆ ಮುಖ್ಯ. ಇವತ್ತು ಸಿನಿಮಾಕ್ಕೆ ದುಡ್ಡು ಹಾಕಿದ ನಿರ್ಮಾಪಕರು ಖುಷಿಯಾಗಿದ್ದಾರೆ, ನಿರ್ದೇಶಕರಿಗೆ ಒಳ್ಳೆಯ ಹೆಸರು ಬಂದಿದೆ ಅಷ್ಟು ಸಾಕು’ ಎನ್ನುವ ಮೂಲಕ ಕಲೆಕ್ಷನ್‌ಗಿಂತ ಜನರ ಪ್ರೀತಿ ಮುಖ್ಯ ಎನ್ನುತ್ತಾರೆ ಸುದೀಪ್‌.

ಇನ್ನು, ಸುದೀಪ್‌ಗೆ “ಹೆಬ್ಬುಲಿ’ಯ ಓಪನಿಂಗ್‌ ಕಂಡು ಅಚ್ಚರಿಯಾಗಿದೆ. “ಸಿನಿಮಾ ಬಗ್ಗೆ ನಿರೀಕ್ಷೆ ಇತ್ತು ನಿಜ. ಆದರೆ ಈ ಮಟ್ಟದ ಓಪನಿಂಗ್‌ ಸಿಗುತ್ತದೆಂದು ಎಂದು ನಾನಂದುಕೊಂಡಿರಲಿಲ್ಲ. ಸಿನಿಮಾ ಬಿಡುಗಡೆ ದಿನ ಥಿಯೇಟರ್‌ಗೆ ಹೋಗಿದ್ದೆ. ಅಲ್ಲಿ ಸೇರಿದ್ದ ಕ್ರೌಡ್‌ ನೋಡಿ ನನಗೆ ಅಚ್ಚರಿಯಾಯಿತು. ಕೆಲವರ ಸಿನಿಮಾಗಳಿಗೆ ಆ ತರಹದ ಅದ್ಭುತ ಓಪನಿಂಗ್‌ ಸಿಕ್ಕಿರೋದನ್ನು ನಾನು ನೋಡಿದ್ದೆ.
“ನಮಗೆ ಯಾವಾಗಪ್ಪಾ ಈ ತರಹ’ ಎಂದು ಮನಸ್ಸಲ್ಲೇ ಅಂದುಕೊಂಡಿದ್ದೆ.

“ಹೆಬ್ಬುಲಿ’ ಮೂಲಕ ಅದು ಈಡೇರಿದೆ. ಈ ತರಹದ ಒಂದು ಪ್ರೀತಿ, ಅಪ್ಪುಗೆಯನ್ನು ಹೇಳಿ ಮಾಡಿಸಿಕೊಳ್ಳಲು, ಪಡೆಯಲು ಸಾಧ್ಯವಿಲ್ಲ. ಅಷ್ಟೊಂದು ನೂಕುನುಗ್ಗಲಿನಲ್ಲಿ ಬಂದು ಸಿನಿಮಾ ನೋಡಿದ್ದಾರೆಂದರೆ ಅದು ಅಭಿಮಾನಿಗಳ ಪ್ರೀತಿ. ಇವತ್ತು ಸಿನಿಮಾ ಚೆನ್ನಾಗಿ ಓಡುತ್ತಿದೆ. ಅದು ಜನ ನಮಗೆ ಕೊಟ್ಟ ಕಾಣಿಕೆ’ ಎಂದು ಅಭಿಮಾನಿಗಳ ಪ್ರೀತಿಯ ಬಗ್ಗೆ ಹೇಳುತ್ತಾರೆ ಸುದೀಪ್‌. ಇನ್ನು ರಾಜ್ಯದ ನಾನಾ ಕಡೆ ಹೋಗಿ ಥಿಯೇಟರ್‌ ವಿಸಿಟ್‌ ಮಾಡುವ ಹಾಗೂ ಜನರೊಂದಿಗೆ ಸ್ವಲ್ಪ ಹೊತ್ತು ಬೆರೆಯುವ ಆಲೋಚನೆ ಕೂಡಾ ಸುದೀಪ್‌ ಅವರಿಗಿದೆ.

ಅಂದಹಾಗೆ, ಸುದೀಪ್‌ ಅವರು ತೆಲಗಿನ “ಈಗ’ ಚಿತ್ರದ ನಟನೆಗಾಗಿ ಆಂಧ್ರ ಸರ್ಕಾರದ ನೀಡುವ ನಂದಿ ಪ್ರಶಸ್ತಿಗೆ ಭಾಜನರಾಗಿದ್ದು, ಅತ್ಯುತ್ತಮ ಖಳನಟ ಪ್ರಶಸ್ತಿ ಅವರ ಪಾಲಾಗಿದೆ. ಈ ಮೂಲಕ “ಹೆಬ್ಬುಲಿ’ ಯಶಸ್ಸಿನ ಜೊತೆಗೆ ಮೊದಲ ತೆಲುಗು ಚಿತ್ರದಲ್ಲೇ ಪ್ರಶಸ್ತಿ ಪಡೆದು ಅಭಿಮಾನಿಗಳಿಗೆ ಮತ್ತಷ್ಟು ಖುಷಿ ಕೊಟ್ಟಿದ್ದಾರೆ ಸುದೀಪ್‌.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.