ಕಾಫಿ ಕಿಂಗ್‌ಗೆ ಸ್ಯಾಂಡಲ್‌ವುಡ್‌ ಕಂಬನಿ

ಎಷ್ಟೋ ಚಿತ್ರಕ್ಕೆ ಶುಭತಾಣ ಸಿದ್ಧಾರ್ಥ್ ಕೆಫೆ ಕಾಫಿ ಡೇ

Team Udayavani, Aug 1, 2019, 3:03 AM IST

coffee-king

“ಕೆಫೆ ಕಾಫಿ ಡೇ’ (ಸಿಸಿಡಿ) ಅಂದ್ರೆ ಕೇವಲ ಯುವಕ-ಯುವತಿಯರಿಗೆ ಮಾತ್ರವಲ್ಲ, ಚಿತ್ರರಂಗದ ಮಂದಿಗೂ ಹಾಟ್‌ ಫೇವರೇಟ್‌ ಪ್ಲೇಸ್‌. ಅದೆಷ್ಟೋ ಚಿತ್ರಗಳ ಮಾತು-ಕಥೆ ಶುರುವಾಗುವುದು ಇದೇ “ಕೆಫೆ ಕಾಫಿ ಡೇ’ಯಲ್ಲಿ. ಹಾಗಾಗಿ ಕನ್ನಡ ಚಿತ್ರರಂಗಕ್ಕೂ “ಕೆಫೆ ಕಾಫಿ ಡೇ’ಗೂ ಅನೇಕ ವರ್ಷಗಳ ಅವಿನಾಭಾವ ನಂಟಿದೆ. ಇಂದಿಗೂ ಅನೇಕ ನಿರ್ಮಾಪಕರು, ನಿರ್ದೇಶಕರು, ನಟ-ನಟಿಯರು, ಕಲಾವಿದರು ತಮ್ಮ ಚಿತ್ರಗಳ ಚರ್ಚೆಗೆ ಮೊದಲು ಆಯ್ಕೆ ಮಾಡಿಕೊಳ್ಳುವ ತಾಣ ಅಂದ್ರೆ ಅದು “ಕೆಫೆ ಕಾಫಿ ಡೇ’.

ಹೀಗೆ ಚಿತ್ರರಂಗದ ಅದೆಷ್ಟೋ ವಿಷಯಗಳನ್ನು ತನ್ನೊಳಗೆ ಹಿಡಿದುಕೊಂಡು ಮೂಕವಿಸ್ಮಿತನಂತೆ ಇರುವ “ಕೆಫೆ ಕಾಫಿ ಡೇ’ಯ ಹಿಂದಿನ ಸಾರಥಿ ವಿ.ಜಿ ಸಿದ್ಧಾರ್ಥ ಅವರ ಅಕಾಲಿಕ ನಿಧನ ಚಿತ್ರರಂಗದ ಮಂದಿಗೂ ಆಘಾತವನ್ನು ಉಂಟುಮಾಡಿದೆ. “ಕಾಫಿ ಕಿಂಗ್‌’ ಸಿದ್ಧಾರ್ಥ್ ಅವರ ನಿಧನಕ್ಕೆ ಚಿತ್ರೋದ್ಯಮದ ಅನೇಕರು ಕಂಬಿನಿ ಮಿಡಿದಿದ್ದಾರೆ. ಟ್ವಿಟ್ಟರ್‌ ಮತ್ತಿತರ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಸಂತಾಪ ಸೂಚಿಸಿದ್ದಾರೆ.

“ವಿ.ಜಿ ಸಿದ್ಧಾರ್ಥ ಅವರ ನಿಧನದ ಸುದ್ದಿ ಕೇಳಿ ತೀವ್ರ ದುಃಖಿತನಾಗಿದ್ದೀನಿ. ನಮ್ಮ ಕಾಲದ ಮಹಾನ್‌ ಕ್ರಿಯಾತ್ಮಕ ಉದ್ಯಮಿ. ಕಾಫಿಯಿಂದ ಅನೇಕರಿಗೆ ಹೇಗೆ ಉದ್ಯೋಗಾವಕಾಶ ನೀಡಬಹುದು ಎನ್ನುವುದನ್ನು ತೋರಿಸಿಕೊಟ್ಟವರು. ಉದ್ಯಮಿಯಾಗಿ ಅವರ ಪಯಣ ಮತ್ತು ಚಾರಿಟಿಗಳಿಗಾಗಿ ಅವರು ಮಾಡಿದ ಕೆಲಸ ಯಾವಾಗಲು ನೆನಪಿನಲ್ಲಿ ಉಳಿಯುತ್ತೆ. ಆತ್ಮಕ್ಕೆ ಶಾಂತಿ ಸಿಗಲಿ’
-ಪುನೀತ್‌ರಾಜಕುಮಾರ್‌, ನಟ

“ಸಿದ್ಧಾರ್ಥ್ ಮತ್ತು ಅವರ ಕುಟುಂಬದವರು ಮೊದಲಿನಿಂದಲೂ ನಮ್ಮ ಕುಟುಂಬಕ್ಕೆ ಆತ್ಮೀಯರು. ಎಷ್ಟೋ ಜನರ ಬದುಕಿಗೆ ಬೆಳಗಾದವರು ಅವರು. ಅಂಥವರು ಈ ರೀತಿ ನಿಧನರಾಗಿದ್ದಾರೆ ಎಂದರೆ ನಂಬಲಾಗುತ್ತಿಲ್ಲ. ಸಿದ್ಧಾರ್ಥ್ ನಿಧನದ ಸುದ್ದಿ ಕೇಳಿ ತುಂಬ ದುಃಖವಾಗುತ್ತಿದೆ. ಅವರ ಕುಟುಂಬದವರಿಗೆ ಈ ನೋವನ್ನು ಭರಿಸುವ ಶಕ್ತಿ ಭಗವಂತ ನೀಡಲಿ’
-ಶಿವರಾಜಕುಮಾರ್‌, ನಟ

“ನನ್ನ ಗುರುಗಳು ಎಸ್‌.ಎಂ ಕೃಷ್ಣ ರವರಿಂದ ಪರಿಚಯವಾದ ಮಹೋದಯ. ನಾನು 2004 ಚುನಾವಣೆಗೆ ಸ್ಪರ್ಧಿಸಿದಾಗ ನನ್ನ ಹುಡುಕಿ ಬಂದು ಚುನಾವಣೆಗೆ ಸಹಾಯ ಮಾಡಿ ಹೋದರು. ಅನೇಕಬಾರಿ ದೂರವಾಣಿ ಕರೆ ಮಾಡಿ ನನ್ನ ವಿನಂತಿಗೆ, ನನ್ನ ಅನೇಕ ಹಿಂಬಾಲಕರಿಗೆ ಸಿಸಿಡಿಯಲ್ಲಿ ಕೆಲಸಕೂಟ್ಟವರು. ನನ್ನ ಗುರುಗಳು ಎಸ್‌.ಎಂ ಕೃಷ್ಣ ಮತ್ತು ಅವರ ಕುಟುಂಬಕ್ಕೆ ಈ ನೋವು ಅರಗಿಸುವ ಶಕ್ತಿ ರಾಯರು ನೀಡಲಿ’
-ಜಗ್ಗೇಶ್‌, ನಟ

“ನಿಮ್ಮ ಕನಸನ್ನು ನನಸು ಮಾಡಿ ಆ ಸುಂದರ ಸೂರಿನಡಿ ಲಕ್ಷಾಂತರ ಯುವಕ ಯುವತಿಯರು ಕನಸು ಕಾಣುವಂತೆ ಮಾಡಿದ ಶ್ರೇಷ್ಠ ಉದ್ಯಮಿ ಸಿದ್ಧಾರ್ಥ. ಬುದ್ದನಾಗುವ ಮುಂಚೆ ಈ ರೀತಿ ಮನಸ್ಸು ಮಾಡಬಾರದಿತ್ತು. ನಮ್ಮ ಕರುನಾಡಿನ ಕಾಫಿಯನ್ನು ಪ್ರಪಂಚದ ಮೂಲೆ ಮೂಲೆಗೂ ತಲುಪಿಸಿದ ಒಡೆಯನ ಆತ್ಮಕ್ಕೆ ಶಾಂತಿ ಸಿಗಲಿ. ಮತ್ತೆ ಹುಟ್ಟಿ ಬನ್ನಿ ಸಿದ್ಧಾರ್ಥ’
-ಉಪೇಂದ್ರ, ನಟ ಮತ್ತು ನಿರ್ದೇಶಕ

“ನಮ್ಮ ಮಂಡ್ಯ ಜಿಲ್ಲೆಯವರಾದ ಶ್ರೀ ಎಸ್‌.ಎಂ ಕೃಷ್ಣ ಅವರ ಅಳಿಯ, ಕೆಫೆ ಕಾಫಿ ಡೇ ಸಂಸ್ಥಾಪಕ, ಉದ್ಯಮಿ ಸಿದ್ಧಾರ್ಥ್ ಅವರ ಸಾವು ತೀವ್ರ ಆಘಾತ ತಂದಿದೆ. ಎಸ್‌.ಎಂ.ಕೃಷ್ಣರವರಿಗೂ ಹಾಗೂ ಅವರ ಕುಟುಂಬದವರಿಗೂ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ, ಸಿದ್ಧಾರ್ಥ್ ಅವರ ಆತ್ಮಕ್ಕೆ ದೇವರು ಚಿರಶಾಂತಿಯನ್ನು ನೀಡಲಿ’
-ಸುಮಲತಾ ಅಂಬರೀಶ್‌, ನಟಿ ಮತ್ತು ಸಂಸದೆ

“ಕಾಫಿ ಡೇ ನನ್ನ ಫೇವರೆಟ್‌ ಸ್ಪಾಟ್‌ಗಳಲ್ಲಿ ಒಂದು. ವೈಯಕ್ತಿಕವಾಗಿ ಸಿದ್ಧಾರ್ಥ್ ಅವರ ಬಗ್ಗೆ ಅಷ್ಟಾಗಿ ಗೊತ್ತಿರಲಿಲ್ಲ. ಕಾಫಿ ಉದ್ಯಮದಲ್ಲಿ ಅವರು ಮಾಡಿದ ಸಾಧನೆ, ಜನರಿಗೆ ಮಾಡಿದ ಸಹಾಯ ಕೇಳಿ ನಾನು ಬೆರಗಾಗಿ ಹೋಗಿದ್ದೆ. ಅಂಥವರ ನಿಧನದ ವಿಷಯ ಕೇಳಿ ಬೇಸರವಾಗಿದೆ. ಅವರ ಆತ್ಮಕ್ಕೆ ದೇವರು ಶಾಂತಿ ಕೊಡಲಿ ಎಂದು ಪ್ರಾರ್ಥಿಸುತ್ತೇನೆ’
-ರಾಗಿಣಿ, ನಟಿ

“ನನ್ನ ಮೊದಲಸಿನಿಮಾ “ಸಿಂಪಲ್ಲಾಗ್‌ ಒಂದು ಲವ್‌ ಸ್ಟೋರಿ’ ಚಿತ್ರದ ಕಥೆಯನ್ನ ರಕ್ಷಿತ್‌ ಶೆಟ್ಟಿಗೆ, ಶ್ವೇತಾ ಶ್ರೀವಾಸ್ತವ್‌ಗೆ ಕಥೆ ರೀಡಿಂಗ್‌ ಮಾಡಿದ್ದು ಕೆಫೆ ಕಾಫಿ ಡೇನಲ್ಲಿ. ಇದು ಒಂದು ಉದಾಹರಣೆ ಅಷ್ಟೇ. ಹೀಗೆ ಹೇಳುತ್ತ ಹೋದ್ರೆ ಕಾಫಿ ಡೇ ಸಂಗತಿಗಳು ಅದೆಷ್ಟೋ ಇದೆ. ಇದಕ್ಕೆಲ್ಲ ಕಾರಣರಾದವರು ಕಾಫಿ ಡೇ ಹಿಂದೆ ಕಾಣದಂತೆ ಇದ್ದವರು, ಇಂದು ಕಾಣದಂತಾಗಿದ್ದಾರೆ ಎಂದರೆ ನಂಬಲಾಗುತ್ತಿಲ್ಲ. ಅವರ ಆತ್ಮಕ್ಕೆ ಶಾಂತಿ ಸಿಗಲಿ’
– ಸಿಂಪಲ್‌ ಸುನಿ, ನಿರ್ದೇಶಕ

ಟಾಪ್ ನ್ಯೂಸ್

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.